
ನವದೆಹಲಿ(ಸೆ. 22) ಲೋಕಸಭೆ ಮಹತ್ವದ ಮಸೂದೆಯೊಂದನ್ನು ಪಾಸ್ ಮಾಡಿದೆ. ಕೊರೋನಾ ವಾರಿಯರ್ಸ್ ಸೇರಿದಂತೆ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವವವರು ಸೀದಾ ಜೈಲಿಗೆ ಹೋಗಬೇಕಾಗುತ್ತದೆ.
ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಸೂದೆ ಪಾಸ್ ಆಗಿದ್ದು ಅಧಿಕೃತ ಶಾಸನವಾಗಲಿದೆ. ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದರೆ ಏಳು ವರ್ಷ ಜೈಲು ಶೀಕ್ಷೆ ಅನುಭವಿಸಬೇಕಾಗುತ್ತದೆ.
ಸಾಂಕ್ರಾಮಿಕ ಕಾಯಿಲೆಗಳ ಬಿಲ್ 1987 ಕ್ಕೆ ಮಹತ್ವದ ತಿದ್ದುಪಡಿ ಮಾಡಲಾಗಿದೆ. ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವುದು ಜಾಮೀನು ರಹಿತ ಅಪರಾಧ ಆಗಲಿದ್ದು ದಂಡ ಮತ್ತು ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.
'ಪ್ರಾಣ ತ್ಯಾಗ ಮಾಡಿದ ಕೊರೋನಾ ವಾರಿಯರ್ಸ್ ಗೆ ಯಾಕಿಂಥ ಅಪಮಾನ'
ಘಟನೆಯನ್ನು ಆಧರಿಸಿ ಮೂರು ತಿಂಗಳಿನಿಂದ ಐದು ವರ್ಷ ಜೈಲು, 50ಸಾವಿರ ರೂ. ನಿಂದ 2ಲಕ್ಷ ರೂ. ವರೆಗೆ ದಂಡ ವಿಧಿಸಬಹುದಾಗಿದೆ. ಗಂಭೀರ ಗಾಯ ಮಾಡಿದರೆ ಆರು ತಿಂಗಳಿನಿಂದ ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. 1.5 ಲಕ್ಷ ರೂ. ದಂಡ ಕಟ್ಟಬೇಕಾಗುತ್ತದೆ.
ರಾಜ್ಯಗಳಿಗೂ ಈ ಕಾನೂನಿನ ಬಗ್ಗೆ ನಿರ್ದೇಶನ ನೀಡಲಾಗುವುದು. ಕೊರೋನಾ ವಿರುದ್ಧ ಹೋರಾಟ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆದ ಅನೇಕ ಘಟನೆಗಳು ನಡೆದಿದ್ದು ಕೇಂದ್ರ ಕ್ರಮ ತೆಗೆದುಕೊಂಡಿದೆ ಎಂದು ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮಸೂದೆಯನ್ನು ಸಂಪುಟ ಸಮಿತಿ ಮುಂದೆ ಇಡಬೇಕಾಗಿತ್ತು. ಕೆಲವು ಅಂಶಗಳು ಸ್ಪಷ್ಟವಾಗಿಲ್ಲ ಎಂದು ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ