ಸಂಸತ್ ದಾಳಿಯಿಂದ ಪ್ರೇಕ್ಷಕರ ಪಾಸ್ ರದ್ದು, ಬೆಳಗಾವಿ ಸುವರ್ಣಸೌಧದಲ್ಲಿ ಹೈ ಅಲರ್ಟ್!

Published : Dec 13, 2023, 03:44 PM IST
ಸಂಸತ್ ದಾಳಿಯಿಂದ ಪ್ರೇಕ್ಷಕರ ಪಾಸ್ ರದ್ದು, ಬೆಳಗಾವಿ ಸುವರ್ಣಸೌಧದಲ್ಲಿ ಹೈ ಅಲರ್ಟ್!

ಸಾರಾಂಶ

ಸಂಸತ್ ಭವನದ ಮೇಲೆ ದಾಳಿಯಿಂದ ದೇಶವೇ ಬೆಚ್ಚಿಬಿದ್ದಿದೆ. ಭವನದೊಳಗೆ ಹಾಗೂ ಹೊರಗೆ ಎರಡು ಪ್ರತ್ಯೇಕ ಘಟನೆ ದೇಶದ ಭದ್ರತಾ ವ್ಯವಸ್ಥೆಯನ್ನೇ ಪ್ರಶ್ನಿಸಿದೆ. ಟಿಯರ್ ಗ್ಯಾಸ್ ದಾಳಿ ಬೆನ್ನಲ್ಲೇ ಸಂಸತ್ ಭವನದಲ್ಲಿ ಪ್ರೇಕ್ಷಕರ ಎಲ್ಲಾ ಪಾಸ್ ರದ್ದುಗೊಳಿಸಲಾಗಿದೆ. ಇತ್ತ ಬೆಳಗಾವಿಯ ಸುವರ್ಣ ಸೌಧದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.  

ನವದೆಹಲಿ(ಡಿ.12) ದೇಶದ ಪ್ರಜಾಪ್ರಭುತ್ವದ ದೇಗುಲದ ಮೇಲೆ ಎರಡನೇ ದಾಳಿಯಾಗಿದೆ. 2001ರಲ್ಲಿ ಭಯೋತ್ಪಾದಕ ದಾಳಿಯಾಗಿದ್ದರೆ, ಈ ಬಾರಿ ಅಪರಿಚಿತರು ಟಿಯರ್ ಗ್ಯಾಸ್ ಮೂಲಕ ದಾಳಿ ನಡೆಸಿದ್ದಾರೆ. ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ಆರೋಪಿಗಳಾದ ಸಾಗರ್ ಶರ್ಮಾ ಹಾಗೂ ಮನೋರಂಜನ್ ಇಬ್ಬರು ಏಕಾಏಕಿ ಸದನದೊಳಕ್ಕೆ ಜಿಗಿದು ಟಿಯರ್ ಗ್ಯಾಸ್ ಮೂಲಕ ದಾಳಿ ನಡೆಸಿದ್ದಾರೆ. ಸದನದಲ್ಲಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಈ ದಾಳಿ ನಡೆದಿದೆ. ರಾಹುಲ್ ಗಾಂಧಿ ಸೇರಿ ಪ್ರಮುಖ ನಾಯಕರು ಸದನದಲ್ಲಿ ಉಪಸ್ಥಿತಿರಿದ್ದರು. ಇದೇ ವೇಳೆ ದಾಳಿ ನಡೆದಿರುವುದು ಭದ್ರತ ವೈಫಲ್ಯ ಎತ್ತಿ ಹಿಡಿದಿದೆ. ಈ ದಾಳಿಯಿಂದ ಕಲಾಪ 2 ಗಂಟೆಗೆ ಮುಂದೂಡಲಾಗಿತ್ತು. ಸದನ ಮತ್ತೆ ಆರಂಭಗೊಂಡ ಬೆನ್ನಲ್ಲೇ ಪ್ರೇಕ್ಷಕರ ಪಾಸ್ ಸಂಪೂರ್ಣ ರದ್ದು ಮಾಡಿ ಸ್ಪೀಕರ್ ಓಂ ಬಿರ್ಲಾ ಆದೇಶ ನೀಡಿದ್ದಾರೆ. ಸಂಸತ್ ದಾಳಿಯಿಂದ ಬೆಳಗಾವಿ ಸುವರ್ಣ ಸೌಧದಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಳಗಾವಿ ಸುವರ್ಣ ಸೌಧದಲ್ಲಿ ಪೊಲೀಸರು ಇದೀಗ ಪ್ರೇಕ್ಷಕರ ಪಾಸ್ ಪರಿಶೀಲನೆ ನಡೆಸುತ್ತಿದ್ದಾರೆ. ಯಾರಿಗೆಲ್ಲಾ ಪಾಸ್ ನೀಡಲಾಗಿದೆಯೋ ಅವರ ಮಾಹಿತಿ, ಗುರುತಿನ ಚೀಟಿ ಸೇರಿದಂತೆ ಹಲವು ಮಾಹಿತಿಗಳನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಇಷ್ಟೇ ಅಲ್ಲ ಸುವರ್ಣ ಸೌಧದ ಹೊರಭಾಗದಲ್ಲೂ ಭದ್ರತೆ ಹೆಚ್ಚಿಸಲಾಗಿದೆ. ಎಲ್ಲರನ್ನೂ ಮತ್ತೊಂದು ಸುತ್ತು ತಪಾಸಣೆ ನಡೆಸಲಾಗುತ್ತದೆ. ಸುವರ್ಣ ಸೌಧದ ಒಳಗೂ ಸಂಸತ್ ಭವನ ದಾಳಿ ಕೂಡ ಚರ್ಚೆಯಾಗಿದೆ. ಇದು ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ಸಾಕ್ಷಿಯಾಗಿದೆ.

ಮೋದಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಸಂಸತ್ ಮೇಲೆ ದಾಳಿ, ನೀಲಂ ಕೌರ್-ಅಮೋಲ್ ಅರೆಸ್ಟ್!

ಸಂಸತ್ ಭವನದೊಳಗೆ ದಾಳಿ ನಡೆಸಿದ ಸಾಗರ್ ಶರ್ಮಾ ಹಾಗೂ ಮನೋರಂಜನ್ ಇಬ್ಬರನ್ನೂ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಸ್ಪೀಕರ್ ಒಂ ಬಿರ್ಲಾ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ದೆಹಲಿ ಪೊಲೀಸರು ಈ ವಿಚಾರಣೆಯಲ್ಲಿ ಭಾಗಿಯಾಗಲು ಸೂಚಿಸಲಾಗಿದೆ. ಇಬ್ಬರು ದಾಳಿಕೋರರನ್ನು ಬಂಧಿಸಲಾಗಿದೆ. ಅವರ ಬಳಸಿದ ಟಿಯರ್ ಗ್ಯಾಸ್ ವಶಕ್ಕೆ ಪಡೆಯಲಾಗಿದೆ ಎಂದು ಬಿರ್ಲಾ ಹೇಳಿದ್ದಾರೆ.

ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಸಂಸದ ರಾಹುಲ್ ಗಾಂಧಿ ಸೇರಿದಂತೆ ಪ್ರಮುಖ ನಾಯರು ಸದನದಲ್ಲಿ ಇರುವಾಗಲೇ ಈ ದಾಳಿ ನಡೆದಿದೆ. ಪ್ರೇಕ್ಷಕರ ಗ್ಯಾಲರಿಯಿಂದ ಸದನಕ್ಕೆ ಜಿಗಿದ ಇಬ್ಬರು, ಟಿಯರ್ ಗ್ಯಾಸ್ ಮೂಲಕ ಸದನದೊಳಗೆ ದಾಳಿ ನಡೆಸಿದ್ದಾರೆ. ಈ ದಾಳಿಕೋರರು ಸಂಸದ ಪ್ರತಾಪ್ ಸಿಂಗ್ ಕಚೇರಿಯಿಂದ ಲೋಕಸಭೆಗೆ ಪ್ರವೇಶ ಪಾಸ್ ಪಡೆದಿದ್ದಾರೆ.

ಸಂಸತ್ ಭವನ ಮೇಲೆ ದಾಳಿ ಹಿಂದೆ ಖಲಿಸ್ತಾನಿ ಉಗ್ರ ಕೈವಾಡ, ಪನ್ನುನ್ ಡೆಡ್‌ಲೈನ್ ದಿನವೇ ಆ್ಯಟಾಕ್!
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?