
ನವದೆಹಲಿ (ನ.25): ಸಂಸತ್ತಿನ ಚಳಿಗಾಲ ಅಧಿವೇಶನ ಸೋಮವಾರದಿಂದ ಆರಂಭವಾಗಲಿದೆ. ಅಧಿವೇಶನದಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧದ ಸೌರ ವಿದ್ಯುತ್ ಹಗರಣ ಆರೋಪ ಹಾಗೂ ಮಣಿಪುರ ಗಲಭೆಗಳು ಮೊದಲ ದಿನದಿಂದಲೇ ಕೋಲಾಹಲ ಎಬ್ಬಿಸುವ ಸಂಭವ ಇದೆ. ಇದರ ಜತೆಗೆ ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆ ಅಂಗೀಕಾರಕ್ಕೆ ಸರ್ಕಾರ ಸರ್ವಸಿದ್ಧತೆ ಮಾಡಿಕೊಂಡಿದ್ದು, ಕಲಾಪಗಳು ಕಾವೇರುವ ಎಲ್ಲ ಲಕ್ಷಣಗಳಿವೆ. ಏತನ್ಮಧ್ಯೆ, ನ.26ರಂದು ದೇಶವು ಸಂವಿಧಾನವನ್ನು ಸ್ವೀಕರಿಸಿ 75 ವರ್ಷಗಳಾಗಲಿದ್ದು, ಅಂದು ಸಂಸತ್ತಿನ ಜಂಟಿ ಅಧಿವೇಶನ ನಡೆಯಲಿದೆ. ಬಳಿಕ ನಿಯಮಿತ ಕಲಾಪಗಳು ನಡೆಯಲಿದ್ದು, ಡಿ.20ರಂದು ಅಧಿವೇಶನ ಮುಕ್ತಾಯಗೊಳ್ಳಲಿದೆ.
ಅದಾನಿ ಅವರು ತಮ್ಮ ಕಂಪನಿ ಉತ್ಪಾದಿಸಿದ ಸೌರ ವಿದ್ಯುತ್ ಮಾರಾಟಕ್ಕೆ ಕೆಲವು ರಾಜ್ಯ ಸರ್ಕಾರಗಳ ಅಧಿಕಾರಿಗಳಿಗೆ 2100 ಕೋಟಿ ರು. ಲಂಚ ನೀಡಿದರು ಎಂದು ಅಮೆರಿಕದಲ್ಲಿ ದೋಷಾರೋಪ ಹೊರಿಸಲಾಗಿದೆ. ಹೀಗಾಗಿ ಅದಾನಿಗೆ ಪ್ರಧಾನಿ ನರೇಂದ್ರ ಮೋದಿ ಶ್ರೀರಕ್ಷೆ ಇದೆ ಎಂದು ಆರೋಪಿಸಿ ವಿಪಕ್ಷಗಳು ಗದ್ದಲ ಎಬ್ಬಿಸುವ ಸಂಭವವಿದೆ. ಮಣಿಪುರ ಗಲಭೆಯನ್ನೂ ಪ್ರಸ್ತಾಪಿಸಿ ವಿಪಕ್ಷಗಳು ಸರ್ಕಾರವನ್ನು ಇಕ್ಕಟ್ಟಿಗೆ ಸಿಕ್ಕಿಸಲಿವೆ.
ಮುಡಾ ಹಗರಣ: ರಾಜ್ಯದಲ್ಲಿರುವುದು ಎ1 ಆರೋಪಿ ಸರ್ಕಾರ, ಬಿಜೆಪಿ ಶಾಸಕ ಶ್ರೀವತ್ಸ
ಇನ್ನು ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಅರಕ್ಕೆ ಈ ಅಧಿವೇಶನದಲ್ಲಿ ಸರ್ಕಾರ ಯತ್ನಿಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಹೇಳಿದ್ದರು. ಇದಕ್ಕೆ ವಿಪಕ್ಷಗಳ ವಿರೋಧ ಇರುವ ಕಾರಣ ಸದನ ರಣರಂಗವಾದರೂ ಅಚ್ಚರಿಯಿಲ್ಲ ಎನ್ನಲಾಗಿದೆ.
ಐಪಿಎಲ್ ಹರಾಜು: ಮುಂಬೈ ಇಂಡಿಯನ್ಸ್ಗೆ ಟಕ್ಕರ್ ಕೊಟ್ಟು ಮಾರಕ ವೇಗಿ ಖರೀದಿಸಿದ ರಾಜಸ್ಥಾನ ರಾಯಲ್ಸ್!
15 ಮಸೂದೆ ಮಂಡನೆ: ಇದೇ ವೇಳೆ ಅಭಿವೃದ್ಧಿ ಚಟುವಟಿಕೆಗೆ ಸಂಬಂಧಿಸಿದ 15 ಇತರ ಮಸೂದೆಗಳನ್ನೂ ಸರ್ಕಾರ ಪಟ್ಟಿ ಮಾಡಿದೆ. ಆದರೆ ವಿವಾದಾತ್ಮಕ ‘ಒಂದು ದೇಶ ಒಂದು ಚುನಾವಣೆ’ಯನ್ನು ಈ ಪಟ್ಟಿಯಿಂದ ಹೊರಗಿಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ