ಚಳಿಗಾಲ ಶುರು: ಬಾಲರಾಮನ ಬೆಚ್ಚಗಿಡಲು ಡಿಸೈನರ್‌ ವಸ್ತ್ರ, ಹೀಟರ್

Published : Nov 11, 2024, 08:49 AM ISTUpdated : Nov 11, 2024, 08:55 AM IST
ಚಳಿಗಾಲ ಶುರು: ಬಾಲರಾಮನ ಬೆಚ್ಚಗಿಡಲು ಡಿಸೈನರ್‌ ವಸ್ತ್ರ, ಹೀಟರ್

ಸಾರಾಂಶ

ಚಳಿಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಆಯೋಧ್ಯೆಯ ರಾಮಮಂದಿರದಲ್ಲಿ ಸ್ಥಾಪಿತನಾಗಿರುವ ಬಾಲ ರಾಮನನ್ನು ಬೆಚ್ಚಗಿಡಲು ಸಕಲ ಸಿದ್ಧತೆಗಳು ನಡೆದಿವೆ.

ಅಯೋಧ್ಯೆ: ಚಳಿಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಆಯೋಧ್ಯೆಯ ರಾಮಮಂದಿರದಲ್ಲಿ ಸ್ಥಾಪಿತನಾಗಿರುವ ಬಾಲ ರಾಮನನ್ನು ಬೆಚ್ಚಗಿಡಲು ಸಕಲ ಸಿದ್ಧತೆಗಳು ನಡೆದಿವೆ. ಇದರ ಪ್ರಯುಕ್ತ ಬಾಲರಾಮನ ಮೂರ್ತಿಗೆ ಚಾದರ, ಪಶ್ಚಿನಾ ಶಾಲುಗಳು ಹೊದಿಸ ಲಾಗುವುದು. ಅಂತೆಯೇ, ನ.20ರಿಂದ ಬೆಚ್ಚಗಿನ ನೀರಿನಲ್ಲಿ ಅಭಿಷೇಕ, ಗರ್ಭ ಗುಡಿ ಬೆಚ್ಚಗಿಡಲು ಹೀಟರ್, ಬಿಸಿಗಾಳಿ ಸೂಸುವ ಬೋವರ್‌ಗಳನ್ನು ಅಳವಡಿಸಲಾಗುವುದು. ನೈವೇದ್ಯಕ್ಕೆ ಮೊಸರಿನ ಬದಲು ಖೀರು, ಒಣ ಹಣ್ಣುಗಳನ್ನು ಅರ್ಪಿಸಲಾಗುವುದು.

35 ಲಕ್ಷ ಭಕ್ತರ ಅಯೋಧ್ಯೆ ಪ್ರದಕ್ಷಿಣೆ: 

ಭಾನುವಾರ 35 ಲಕ್ಷ ಭಕ್ತರು 56 ಕಿ.ಮಿ. ಪಾದಾಯಾತ್ರೆ ಮೂಲಕ ಅಯೋಧ್ಯೆಗೆ ಪ್ರದಕ್ಷಿಣೆ ಹಾಕಿದರು. ಈ ಮೂಲಕ '14 ಕೋಸಿ ಪರಿಕ್ರಮ'ವನ್ನು ಪೂರೈಸಿದರು. 14 ಕೋಸಿ ಪರಿ ಕ್ರಮ ಎನ್ನುವುದು ರಾಮನ ಅಂದಿನ ರಾಜ್ಯದ ಸುತ್ತ 56 ಕಿ.ಮಿ. ಪ್ರದಕ್ಷಿಣೆ. ಶನಿವಾರ ಭಕ್ತರು ಸರಯುವಿನಲ್ಲಿ ಮಿಂದು ಪ್ರದಕ್ಷಿಣೆ ಆರಂಭಿಸಿದ್ದರು.

ಕಮಲಾರ ಪಕ್ಷಕ್ಕೆ ಹಣಕಾಸಿನ ನೆರವು ನೀಡಲು ಟ್ರಂಪ್ ಕರೆ

ವಾಷಿಂಗ್ಟನ್: ಅಧ್ಯಕ್ಷೀಯ ಚುನಾವಣೆಯ ವೆಚ್ಚದ ಸಂಬಂಧ ಸಂಕಷ್ಟದಲ್ಲಿರುವ ಎದುರಾಳಿ ಕಮಲಾ ಹ್ಯಾರಿಸ್‌ಗೆ ಹಣಕಾಸಿನ ನೆರವು ನೀಡುವಂತೆ ಅವರ ವಿರುದ್ಧಗೆಲುವು ಸಾಧಿಸಿದ, ಅಮೆರಿಕದ ಮುಂದಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಬೆಂಬಲಿಗರಿಗೆ ಕರೆ ನೀಡಿದ್ದಾರೆ. ಅಧ್ಯಕ್ಷೀಯ ಚುನಾವಣೆಗೆ ಕಮಲಾ ಅಂದಾಜು19000 ಕೋ ಟಿ ರು. ಸಂಗ್ರಹ ಮಾಡಿದ್ದರು. ಆದರೆ ಈಗಾಗಲೇ ಮಾಡಿರುವ ಪಾವತಿ ಮತ್ತು ಮಾಡಬೇಕಿರುವ ಪಾವತಿ ಗಮನಿಸಿದರೆ ಅವರು 165 ಕೋಟಿರು. ಕೊರತೆ ಎದುರಿಸುತ್ತಿರುವಂತಿದೆ. ಈ ಹಿನ್ನೆಲೆಯ ಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, 'ಕಮಲಾರ ಪ್ರಚಾರಕ್ಕಾಗಿ 20 ಮಿಲಿಯನ್ ಡಾಲ‌ರ್ ಸಾಲವಾಗಿರುವುದನ್ನು ನಂಬಲಾಗುತ್ತಿಲ್ಲ. ಈ ಸಂಕಷ್ಟದ ಸಮಯದಲ್ಲಿ ನಾವು ನೆರವಾಗಬೇಕು. ನಮ್ಮ ಬಳಿ ಅಪಾರ ಹಣ ಉಳಿದಿದೆ' ಎಂದು ಕರೆ ನೀಡಿದ್ದಾರೆ. ಅಮೆರಿಕದ ಚುನಾವಣಾ ಆಯೋಗದ ವರದಿ ಪ್ರಕಾರ, ಹ್ಯಾರಿಸ್‌ ಪಕ್ಷ ಅಂದಾಜು 19000 ಕೋಟಿ ರು. ದೇಣಿಗೆ ಸಂಗ್ರಹಿಸಿದ್ದರೆ, ಟ್ರಂಪ್ ಅವರ ರಿಪಬ್ಲಿಕನ್ ಪಕ್ಷ 15000 ಕೋಟಿ ರು. ಸಂಗ್ರಹಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಂದೇ.. ಚರ್ಚೆಯಿಂದ ಹೊಸ ಇತಿಹಾಸ ಸೃಷ್ಟಿಗೆ ಮೋದಿ ಯತ್ನ: ಕಾಂಗ್ರೆಸ್‌
ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ