ಬೆಂಗಳೂರು ಕೋಲ್ಕತಾ ರೈಲು ಟಿಕೆಟ್ ದರ 10 ಸಾವಿರ ರೂ, ಬೆಚ್ಚಿದ ಪ್ರಯಾಣಿಕನಿಗೆ ನೆಟ್ಟಿಗರ ಅದ್ಭುತ ಸಲಹೆ!

Published : Aug 10, 2024, 11:34 AM IST
ಬೆಂಗಳೂರು ಕೋಲ್ಕತಾ ರೈಲು ಟಿಕೆಟ್ ದರ 10 ಸಾವಿರ ರೂ, ಬೆಚ್ಚಿದ ಪ್ರಯಾಣಿಕನಿಗೆ ನೆಟ್ಟಿಗರ ಅದ್ಭುತ ಸಲಹೆ!

ಸಾರಾಂಶ

ಬೆಂಗಳೂರು-ಕೋಲ್ಕತಾಗೆ ವಿಮಾನದಲ್ಲಿ ಪ್ರಯಾಣಿಸಲು ಸರಿಸುಮಾರು 4 ಸಾವಿರ ಸಾಕು. ಆದರೆ 2ಎ ಎಸಿ ಟ್ರೈನ್ ಕೋಚ್‌ನಲ್ಲಿ ಬರೋಬ್ಬರಿ 10,100 ರೂಪಾಯಿ. ಬೆಚ್ಚಿ ಬಿದ್ದ ಪ್ರಯಾಣಿಕ ರೈಲು ದರ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದಾನೆ. ಆದರೆ ನೆಟ್ಟಿಗರು ಅದ್ಭುತ ಸಲಹೆ ನೀಡಿದ್ದಾರೆ.

ಬೆಂಗಳೂರು(ಆ.10)  ರೈಲು ಪ್ರಯಾಣ ಇತರ ಎಲ್ಲಾ ಸಾರಿಗೆ ವ್ಯವಸ್ಥೆಗಳಿಗಿಂತ ಅಗ್ಗ. ಹೀಗಾಗಿ ಬಹುತೇಕರು ರೈಲು ಪ್ರಯಾಣವನ್ನೇ ನೆಚ್ಚಿಕೊಂಡಿದ್ದಾರೆ. ಆದರೆ ಪ್ರಯಾಣಿಕನೊಬ್ಬ ರೈಲಿನ ಟಿಕೆಟ್ ದರ ನೋಡಿ ಬೆಚ್ಚಿ ಬಿದ್ದಿದ್ದಾನೆ. ಕಾರಣ ಬೆಂಗಳೂರಿನಿಂದ ಕೋಲ್ಕತಾಗೆ ರೈಲು ಟಿಕೆಟ್ ಬುಕಿಂಗ್ ಮಾಡಲು ನೋಡಿದರೆ ಟಿಕೆಟ್ ದರ ಬರೋಬ್ಬರಿ 10,100 ರೂಪಾಯಿ. ಈ ಟಿಕೆಟ್ ದರದ ಸ್ಕ್ರೀನ್‌ಶಾಟ್ ಹಂಚಿಕೊಂಡ ಪ್ರಯಾಣಿಕನಿಗೆ ನೆಟ್ಟಗರು ಕೆಲ ಸಲಹೆ ನೀಡಿದ್ದಾರೆ. ಅದೇ ರೈಲಿನ ಅೆ ಕೋಚ್‌ನಲ್ಲಿ ಕಡಿಮೆ ಬೆಲೆಗೆ ಪ್ರಯಾಣಿಸುವ ಜುಗಾಡ್ ಐಡಿಯಾ ಕೊಟ್ಟಿದ್ದಾರೆ.

ರೆಡಿಟ್ ಬಳಕೆದಾರನೊಬ್ಬ ಬೆಂಗಳೂರಿನಿಂದ ಕೋಲ್ಕತಾಗೆ ಪ್ರಯಾಣಿಸಲು ರೈಲು ಟಿಕೆಟ್ ಬುಕ್ ಮಾಡಲು ಮುಂದಾಗಿದ್ದಾನೆ. 2ಎ ಎಸಿ ಟ್ರೈನ್ ಟಿಕೆಟ್ ಬುಕ್ ಮಾಡಲು ಹೋದ ಪ್ರಯಾಣಿಕ ಟಿಕೆಟ್ ದರ ನೋಡಿ ದಂಗಾಗಿದ್ದಾನೆ. ಬೆಂಗಳೂರು ಕೋಲ್ಕತಾ 2ಎ ಎಸಿ ಕೋಚ್‌ಗೆ ಟಿಕೆಟ್ ದರ ಬರೋಬ್ಬರಿ 10,100 ರೂಪಾಯಿ. ಕೇವಲ 2 ಎಸಿ ಕೋಚ್‌ಗೆ ಈ ಬೆಲೆ ಎಂದು ಪ್ರಯಾಣಿಕ ಸೋಶಿಯಲ್ ಮೀಡಿಯಾದಲ್ಲಿ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದಾನೆ.

ಕುಡಿದ ಮತ್ತಿನಲ್ಲಿ ಹಳಿಗೆ ಬಿದ್ದ ವ್ಯಕ್ತಿ ಮೇಲಿಂದ ಸಾಗಿತು ರೈಲು, ನಂತರ ನಡೆಯಿತು ಪವಾಡ!

ಬೆಂಗಳೂರಿನಿಂದ ಕೋಲ್ಕತಾಗೆ ವಿಮಾನ ಪ್ರಯಾಣ ದರ ಸರಾಸರಿ 4,000 ರಿಂದ 5,000 ರೂಪಾಯಿ. ಆದರೆ 2ಎ ಎಸಿ ಬೆಲೆ ಇದಕ್ಕಿಂತ ದುಪ್ಪಟ್ಟು. ಪ್ರಯಾಣಿಕ ಸೋಶಿಯಲ್ ಮೀಡಿಯಾದಲ್ಲಿ ಈ ವಿಚಾರ ಪೋಸ್ಟ್ ಮಾಡುತ್ತಿದ್ದಂತೆ ಹಲವರು ಕೆಲ ಸಲಹೆ ನೀಡಿದ್ದಾರೆ. ರೈಲಿಗಿಂತ ವಿಮಾನದಲ್ಲಿ ಪ್ರಯಾಣಿಸಿ ಈ ಬೆಲೆಯಲ್ಲಿ ಕೋಲ್ಕತಾದಲ್ಲಿ ಇಳಿದು ಬಂಗಾಳ ಸಿಹಿ ತಿಂದು ಬೆಂಗಳೂರಿಗೆ ಮರಳಬಹುದು ಎಂದು ಸೂಚಿಸಿದ್ದಾರೆ. ಇದೇ ವೇಳೆ ಕೆಲವರು ಇದೇ 2ಎ ಎಸಿ ಕೋಚ್‌ನಲ್ಲಿ ಟಿಕೆಟ್ ತೆಗೆದುಕೊಳ್ಳದೇ ಪ್ರಯಾಣಿಸಿ ಬಳಿಕ ದಂಡ ಕಟ್ಟಿದರೆ ಸರಿ. ಹೀಗೆ ಮಾಡಿದರೂ 5,000 ರೂಪಾಯಿ ದಾಟಲ್ಲ ಎಂದಿದ್ದಾರೆ.

 

 

ಇದು ತತ್ಕಾಲ್ ದರ ಸೇರಿಕೊಂಡಿದೆ. ಸಾಮಾನ್ಯವಾಗಿ ಬೆಂಗಳೂರಿನಿಂದ ಕೋಲ್ಕತಾ ಟಿಕೆಟ್ ಬೆಲೆ 3,000 ರೂಪಾಯಿ ಮಾತ್ರ. ತತ್ಕಾಲದಲ್ಲಿ ಬುಕಿಂಗ್ ಮಾಡಲು ಪ್ರಯತ್ನಿಸಿದ್ದಾರೆ. ಹೀಗಾಗಿ ಸರಿಸುಮಾರು 6,000 ರೂಪಾಯಿ ತತ್ಕಾಲ್ ಬೆಲೆ ಸೇರಿಕೊಂಡಿದೆ ಎಂದು ಕೆಲವರು ಸೂಚಿಸಿದ್ದಾರೆ.

ಇದೇ ವೇಳೆ ಹಲವರು ರೈಲು ಟಿಕೆಟ್ ದರ ಕುರಿತು ಕೆಲ ಘಟನೆಗಳನ್ನು ಬಿಚ್ಚಿಟ್ಟಿದ್ದಾರೆ. ರೈಲಿನಲ್ಲೇ ಬುಕಿಂಗ್ ಬೆಲೆ ಈ ರೀತಿ ಮಾಡಿದರೆ ತುರ್ತಾಗಿ ಪ್ರಯಾಣ ಮಾಡಬೇಕಿರುವ ಜನಸಾಮಾನ್ಯರು ಏನು ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.
ಅಮೃತ್‌ ಭಾರತ್‌ ಯೋಜನೆಯಡಿ ರಾಜ್ಯದ 59 ರೈಲು ನಿಲ್ದಾಣಗಳು ಮೇಲ್ದರ್ಜೆಗೆ, 7559 ಕೋಟಿ ರೂ ಮೀಸಲು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮನೆ ಮುಂದೆ ದನ ಸೆಗಣಿ ಹಾಕಿದ್ದಕ್ಕೆ ಯುವಕನ ಕೊಲೆ
ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು