ಕೊರೋನಾಗೆ ಪತಂಜಲಿಯಿಂದ ಔಷಧ!

Published : Jun 15, 2020, 08:26 AM ISTUpdated : Jun 15, 2020, 09:22 AM IST
ಕೊರೋನಾಗೆ ಪತಂಜಲಿಯಿಂದ ಔಷಧ!

ಸಾರಾಂಶ

ಕೊರೋನಾಗೆ ಪತಂಜಲಿಯಿಂದ ಔಷಧ!| ಬಾಬಾ ರಾಮದೇವ್‌ ಆಪ್ತ ಬಾಲಕೃಷ್ಣ ಹೇಳಿಕೆ| ಆಯುರ್ವೇದ ಔಷಧದಿಂದ 14 ದಿನದಲ್ಲಿ ಸೋಂಕಿತರು ಗುಣಮುಖ| - ಔಷಧ ಶೇ.100ರಷ್ಟುಫಲಿತಾಂಶ ನೀಡಿದೆ| 1 ವಾರದಲ್ಲಿ ಸಾಕ್ಷ್ಯ ಸಮೇತ ಎಲ್ಲವೂ ಬಹಿರಂಗ

ನವದೆಹಲಿ(ಜೂ.15): ಕೊರೋನಾ ವೈರಸ್‌ಗೆ ಲಸಿಕೆ ಹಾಗೂ ಔಷಧ ಕಂಡುಹಿಡಿಯಲು ವಿಶ್ವದಾದ್ಯಂತ ಪ್ರಯತ್ನಗಳು ನಡೆದಿರುವ ನಡುವೆಯೇ, ಈ ವ್ಯಾಧಿಗೆ ಔಷಧ ಕಂಡುಹಿಡಿದಿರುವುದಾಗಿ ಯೋಗಗುರು ಬಾಬಾ ರಾಮದೇವ್‌ ಅವರ ಪತಂಜಲಿ ಆಯುರ್ವೇದ ಕಂಪನಿ ಹೇಳಿಕೊಂಡಿದೆ.

ಸುದ್ದಿಗಾರರ ಜತೆ ಮಾತನಾಡಿದ ಪತಂಜಲಿ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಚಾರ್ಯ ಬಾಲಕೃಷ್ಣ, ‘ನೂರಾರು ಕೊರೋನಾ ಪೀಡಿತರ ಮೇಲೆ ಈ ಔಷಧ ಪ್ರಯೋಗಿಸಲಾಗಿದೆ. ಇದು ಶೇ.100ರಷ್ಟುಉತ್ತಮ ಫಲಿತಾಂಶ ನೀಡಿದೆ. 5ರಿಂದ 14 ದಿನ ಅವಧಿಯಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ’ ಎಂದರು.

ಕೊರೋನಾ ಶಂಕಿತನಿಂದ ಆಸ್ಪತ್ರೆ ಸಿಬ್ಬಂದಿಗೆ ಕಿರಿಕ್‌: ಹೈರಾಣಾದ ವೈದ್ಯರು!

‘ಕೊರೋನಾ ವ್ಯಾಪಿಸುವಿಕೆ ಆರಂಭವಾದ ನಂತರ ನಾವು ವಿಜ್ಞಾನಿಗಳ ತಂಡ ರಚಿಸಿದೆವು. ಈ ವೇಳೆ ಅವರು ಕೊರೋನಾ ವಿರುದ್ಧ ಹೋರಾಡಬಲ್ಲ ಔಷಧ ಕಂಡುಹಿಡಿದರು. ಇದನ್ನು ನಾವು ನೂರಾರು ಸೋಂಕಿತರ ಮೇಲೆ ಪ್ರಯೋಗಿಸಿದ್ದು, ಶತ ಪ್ರತಿಶತ ಫಲಿತಾಂಶ ಬಂದಿದೆ’ ಎಂದು ಹೇಳಿದರು.

‘ಆಯುರ್ವೇದವೇ ಕೊರೋನಾಗೆ ಮದ್ದು ಎಂದು ನಾವು ಹೇಳಬಹುದು. ಪ್ರಯೋಗ ಇನ್ನೂ ಮುಂದುವರಿದಿದೆ. ಇನ್ನೊಂದು ವಾರದಲ್ಲಿ ನಾವು ಸಾಕ್ಷಿ-ಆಧಾರ ಸಮೇತ ಎಲ್ಲವನ್ನೂ ಬಹಿರಂಗಪಡಿಸಲಿದ್ದೇವೆ’ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

15 ವರ್ಷಗಳಿಂದ ನಾಪತ್ತೆ: ವಿಡಿಯೋ ವೈರಲ್ ಬಳಿಕ ಮರಳಿ ಕುಟುಂಬ ಸೇರಿದ ಮಾಜಿ ಯೋಧ
ಪೌರತ್ವ ಸಿಗುವ ಮುನ್ನವೇ ವೋಟರ್‌ ಲಿಸ್ಟ್‌ನಲ್ಲಿ ಹೆಸರು, ಸೋನಿಯಾ ಗಾಂಧಿಗೆ ನೋಟಿಸ್‌ ಕೊಟ್ಟ ದೆಹಲಿ ಕೋರ್ಟ್!