ಪತಂಜಲಿಯಿಂದ ಕೊರೋನಿಲ್ ಔಷಧ ಬಿಡುಗಡೆ: 5 ದಿನದಲ್ಲಿ ಸೋಂಕಿತ ಗುಣಮುಖ..!

Published : Jun 23, 2020, 12:07 PM IST
ಪತಂಜಲಿಯಿಂದ ಕೊರೋನಿಲ್ ಔಷಧ ಬಿಡುಗಡೆ: 5 ದಿನದಲ್ಲಿ ಸೋಂಕಿತ ಗುಣಮುಖ..!

ಸಾರಾಂಶ

ಯೋಗ ಗುರು ರಾಮ್‌ ದೇವ್ ಅವರ ಪತಂಜಲಿ ಆಯುರ್ವೇದ ಕಂಪನಿಯು ಅಶ್ವಗಂಧ, ತುಳಸಿ, ಗಿಲೋಯ್ ಸೇರಿಸಿ ಮಾಡುವ ಮಿಶ್ರಣದಿಂದ ಕೊರೋನಿಲ್ ಎಂಬ ಔಷಧ ತಯಾರಿಸಿದ್ದು, 5-14 ದಿನಗಳಲ್ಲಿ ಕೊರೋನಾ ಬಾಧಿತರನ್ನು ಗುಣಮುಖ ಮಾಡಲಿದೆ. ಇಲ್ಲಿದೆ ಡೀಟೆಲ್ಸ್

ಹರಿದ್ವಾರ(ಜೂ.23): ಯೋಗ ಗುರು ರಾಮ್‌ ದೇವ್ ಅವರ ಪತಂಜಲಿ ಆಯುರ್ವೇದ ಕಂಪನಿಯು ಕೊರೋನಾ ವೈರಸ್ ಸೋಂಕಿತರಿಗೆ ಚಿಕಿತ್ಸೆಗೆ ನೆರವಾಗುವ ಕೊರೋನಿಲ್ ಔಷಧವನ್ನು ಇಂದು ಬಿಡುಗಡೆ ಮಾಡಲಿದೆ.

ಪತಂಜಲಿ ಕಂಪನಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆಚಾರ್ಯ ಬಾಲಕೃಷ್ಣ ಕೊರೋನಾ ವೈರಸ್ ನಿರ್ಮೂಲನೆ ಔಷಧವನ್ನು ಕಂಪನಿ ಕಂಡುಹಿಡಿದಿರುವುದಾಗಿ ತಿಳಿಸಿದ್ದರು. ಅಶ್ವಗಂಧ, ತುಳಸಿ, ಗಿಲೋಯ್ ಸೇರಿಸಿ ಮಾಡುವ ಮಿಶ್ರಣದಿಂದ ಕೊರೋನಿಲ್ ತಯಾರಿಸಿದ್ದು, ಶೇ 100ರಷ್ಟು ಗುಣಮುಖರಾಗುವ ಸಾಧ್ಯತೆ ಇದೆ ಎಂದು ರಾಮ್‌ದೇವ್ ತಿಳಿಸಿದ್ದಾರೆ.

ಕೊರೋನಾಗೆ ಪತಂಜಲಿಯಿಂದ ಔಷಧ!

ಕೊರೋನಾ ವೈರಸ್‌ಗೆ ಆಯುರ್ವೇದದಲ್ಲಿ ಮೊದಲ ಔಷಧ ಬಿಡುಗಡೆ ಮಾಡಲು ಹೆಮ್ಮೆಯಾಗುತ್ತಿದೆ. ಮಂಗಳವಾರ ಮರಧ್ಯಾಹ್ನ ಈ ಔಷಧ ಬಿಡುಗಡೆಗೊಳಿಸಲಾಗುತ್ತದೆ ಎಂದು ಬಾಲಕೃಷ್ಣ ಅವರು ಟ್ವೀಟ್ ಮಾಡಿದ್ದಾರೆ.

ಈ ಔಷಧಿ 5-14 ದಿನಗಳಲ್ಲಿ ಕೊರೋನಾ ಬಾಧಿತರನ್ನು ಗುಣಮುಖ ಮಾಡಲಿದೆ. ಕೊರೋನಾ ವೈರಸ್‌ ಕಾಣಿಸಿಕೊಂಡಾಗ ನಾವು ವಿಜ್ಞಾನಿಗಳ ಒಂದು ತಂಡವನ್ನು ರಚಿಸಿದ್ದೆವು.

ಮೊದಲು ವೈರಸ್‌ ವಿರುದ್ಧ ಹೋರಾಡುವ ಮತ್ತು, ಅದು ದೇಹದಲ್ಲಿ ಹರಡದಂತೆ ತಡೆಯುವ ಸಾಧ್ಯತೆಯನ್ನು ನೋಡಲಾಯಿತು. ನಂತರ ನೂರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳನ್ನು ಅಧ್ಯಯನ ಮಾಡಿ ಶೇ 100ರಷ್ಟು ಪಾಸಿಟಿವ್ ಪ್ರತಿಕ್ರಿಯೆ ಲಭ್ಯವಾಗಿದೆ ಎಂದಿದ್ದಾರೆ.

ಪತಂಜಲಿ ಆಸ್ಪತ್ರೆಯಲ್ಲಿದ್ದ ಇಬ್ಬರು ಕೊರೋನಾ ಸೋಂಕಿತರು ಬಹುತೇಕ ಗುಣಮುಖ

ಔಷಧವನ್ನು ತೆಗೆದುಕೊಂಡ ರೋಗಿಗಳು 4ರಿಂದ 15ದಿನದಲ್ಲಿ ಗುಣಮುಖರಾಗಿದ್ದು, ಪರೀಕ್ಷೆಯಲ್ಲೂ ಕೊರೋನಾ ನೆಗೆಟಿವ್ ಬಂದಿದೆ. ಹೀಗಾಗಿ ಆಯುರ್ವೇದ ಔಷಧದ ಮೂಲಕ ಕೊರೋನಾ ಚಿಕಿತ್ಸೆ ಸಾಧ್ಯ ಎಂದು ನಾವು ಹೇಳುತ್ತೇವೆ. ಮುಂದಿನ ನಾಲ್ಕೈದು ದಿನಗಳಲ್ಲಿ ಈ ಸಂಬಂಧ ಡಾಟಾ ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೆಳತಿಯ ತಡೆಯಲು ಕಾರಿನ ರೂಫ್‌ ಮೇಲೆ ಹತ್ತಿದ.. ಆದರೆ ಆಕೆಯ ಪ್ರಿಯಕರ ಆತನ ಮೇಲೆ ಕಾರು ಹತ್ತಿಸಿದ
IAS: ಭ್ರಷ್ಟ ವ್ಯವಸ್ಥೆ ನಿದ್ದೆಗೆಡಿಸಿದ ಭಾರತದ ಆ ಐರನ್ ಐಎಎಸ್' ಆಫೀಸರ್ಸ್; ಈ ಲಿಸ್ಟ್‌ನಲ್ಲಿದೆ ಒಂದು ಕನ್ನಡದ ಕಲಿ!