
ಪಠಾಣ್ಕೋಟ್(ಅ.17): ಎರಡು ತಿಂಗಳ ಹಿಂದೆ ಪಂಜಾಬ್ನ ಪಠಾಣ್ಕೋಟ್ ಬಳಿ ಇರುವ ರಂಜಿತ್ ಸಾಗರ ಅಣೆಕಟ್ಟು ಬಳಿ ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್ ಪತನಗೊಂಡಿತ್ತು. ಈ ಸೇನಾ ಹೆಲಿಕಾಪ್ಟರ್ ಕ್ರಾಶ್ನಲ್ಲಿ ಕಾಣೆಯಾಗಿದ್ದ 2ನೇ ಪೈಲೆಟ್ ಜಯಂತ್ ಜೋಶಿ ಮೃತದೇಹ 2 ತಿಂಗಳ ಬಳಿಕ ಪತ್ತೆಯಾಗಿದೆ.
ಪಠಾನ್ಕೋಟ್ ಡ್ಯಾಮ್ನಲ್ಲಿ ಸೇನೆಯ ಹೆಲಿಕಾಪ್ಟರ್ ಕ್ರಾಷ್
ಭಾರತೀಯ ಸೇನೆ ಕಳೆದ 76 ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಸಿತ್ತು. 76ನೇ ದಿನ ರಂಜಿತ್ ಸಾಗರ ಅಣೆಕಟ್ಟಿನಲ್ಲಿ ಜಯಂತ್ ಜೋಶಿ ಮೃತದೇಹ ಪತ್ತೆಯಾಗಿದೆ. ಈ ಕಾರ್ಯಾಚರಣೆಗೆ ಭಾರತೀಯ ಸೇನೆ ಅತ್ಯಾಧುನಿಕ ಉಪಕರಣಗಳನ್ನು ಬಳಸಲಾಗಿತ್ತು.
ಅಣೆಕಟ್ಟಿನ 65 ರಿಂದ 70 ಮೀಟರ್ ಆಳದ ಬೆಡ್ಡಿನಲ್ಲಿ ಕ್ಯಾಪ್ಟನ್ ಜಯಂತ್ ಜೋಶಿ ಮೃತದೇಹ ಪತ್ತೆ ಹಚ್ಚಿ ಹೊರತೆಗಯಲಾಗಿದೆ. ಹಗಲು ರಾತ್ರಿ ಸೇನೆ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದೆ. ಅಗಸ್ಟ್ 3 ರಂದು ಸೇನಾ ಹೆಲಿಕಾಪ್ಟರ್ ರಂಜಿತ್ ಸಾಗರ್ ಡ್ಯಾಮ್ ಬಳಿ ಪತನಗೊಂಡಿತು.
ಉಧಂಪುರ ಬಳಿ ಸೇನಾ ಹೆಲಿಕಾಪ್ಟರ್ ಪತನ, ಮುಂದುವರಿದ ರಕ್ಷಣಾ ಕಾರ್ಯ!
ಭಾರತೀಯ ಸೇನೆಯ 254 AA ಹೆಲಿಕಾಪ್ಟರ್ ಪತನಗೊಂಡಿತ್ತು. ಬೆಳಗ್ಗೆ 10.20ಕ್ಕೆ ಹೆಲಿಕಾಪ್ಟರ್ ಪತನಗೊಂಡಿರುವ ಮಾಹಿತಿ ಪಡೆದ ಭಾರತೀಯ ಸೇನೆ ರಕ್ಷಣಾ ಕಾರ್ಯಕ್ಕೆ ಧಾವಿಸಿತ್ತು. ಪಠಾಣ್ಕೋಟ್ ಸೇನಾ ನೆಲೆಯಿಂದ 30 ಕಿ.ಮೀ ದೂರದಲ್ಲಿರುವ ರಂಜಿತ್ ಸಾಗರ್ ಬಳಿ ನಡೆದ ದುರಂತ ಭಾರತವನ್ನೇ ಬೆಚ್ಚಿ ಬೀಳಿಸಿತ್ತು.
ತರಬೇತಿ ಸೇನಾ ಹೆಲಿಕಾಪ್ಟರ್ ಪತನವನ್ನು ಭಾರತೀಯ ಸೇನೆ ಗಂಭೀರವಾಗಿ ಪರಿಗಣಿಸಿತ್ತು. ಹೀಗಾಗಿ ರಕ್ಷಣಾ ಕಾರ್ಯಾ ಹಾಗೂ ಪೈಲೈಟ್ ಪತ್ತೆ ಕಾರ್ಯಕ್ಕೆ ಸತತ ಕಾರ್ಯಾಚರಣೆ ನಡೆಸತ್ತು. ಮೊದಲ ಪೈಲೆಟ್ ಮೃತದೇಹ ಘಟನೆ ನಡೆದ ಮರುದಿನ ಪತ್ತೆಯಾಗಿತ್ತು. ಆದರೆ ಎರಡನೇ ಪೈಲೆಟ್ ಮೃತದೇಹ 76 ದಿನದ ಬಳಿಕ ಪತ್ತೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ