ರಾಮಮಂದಿರಕ್ಕೆ ಭರ್ಜರಿ 10 ಕೋಟಿ ರು. ದೇಣಿಗೆ!

Published : Feb 10, 2020, 11:55 AM ISTUpdated : Feb 10, 2020, 11:56 AM IST
ರಾಮಮಂದಿರಕ್ಕೆ ಭರ್ಜರಿ 10 ಕೋಟಿ ರು. ದೇಣಿಗೆ!

ಸಾರಾಂಶ

ರಾಮಮಂದಿರಕ್ಕೆ ಭರ್ಜರಿ 10 ಕೋಟಿ ರು. ದೇಣಿಗೆ| ಪಟನಾದ ಮಹಾವೀರ ಮಂದಿರ ಟ್ರಸ್ಟ್‌ನಿಂದ ದೇಣಿಗೆ ಘೋಷಣೆ| ಅಯೋಧ್ಯೆಗೆ ತೆರಳಿ 2 ಕೋಟಿ ರು. ಚೆಕ್‌ ಹಸ್ತಾಂತರ: ಮಂದಿರ

ಪಟನಾ[ಫೆ.10]: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಟ್ರಸ್ಟ್‌ ರಚನೆ ಮಾಡಿದ ಬೆನ್ನಲ್ಲೇ, ರಾಮಮಂದಿರ ನಿರ್ಮಾಣಕ್ಕಾಗಿ ಪಟನಾದ ಮಹಾವೀರ್‌ ದೇವಸ್ಥಾನವು ಭರ್ಜರಿ 10 ಕೋಟಿ ರು. ದೇಣಿಗೆ ನೀಡುವುದಾಗಿ ಘೋಷಣೆ ಮಾಡಿದೆ. ಈ ಮೂಲಕ ಐತಿಹಾಸಿಕ ಪ್ರಸಿದ್ಧವಾದ ಅಯೋಧ್ಯೆಯಲ್ಲಿನ ರಾಮ ಮಂದಿರ ನಿರ್ಮಾಣಕ್ಕಾಗಿ ಇದೇ ಮೊದಲ ಬಾರಿಗೆ ಈ ದೊಡ್ಡ ಪ್ರಮಾಣದ ದೇಣಿಗೆ ಹರಿದುಬಂದಂತಾಗಿದೆ.

ರಾಮ ಮಂದಿರಕ್ಕೆ ಸಮಿತಿ: ಸದನದಲ್ಲೇ ಪ್ರಧಾನಿ ಮೋದಿ ಘೋಷಣೆ!

ಅಲ್ಲದೆ, ಈ ಬಗ್ಗೆ ಭಾನುವಾರ ಮಾತನಾಡಿದ ಮಹಾವೀರ ಮಂದಿರದ ಟ್ರಸ್ಟ್‌ ಕಾರ್ಯದರ್ಶಿ ಕಿಶೋರ್‌ ಕುನಾಲ್‌, ‘ರಾಮ ಮಂದಿರ ನಿರ್ಮಾಣಕ್ಕಾಗಿ ಕಂತುಗಳ ರೂಪದಲ್ಲಿ 10 ಕೋಟಿ ರು. ದೇಣಿಗೆ ನೀಡುತ್ತೇವೆ. ಈ ಪ್ರಕಾರ, ಶೀಘ್ರವೇ ಅಯೋಧ್ಯೆಗೆ ತೆರಳಿ ಮೊದಲ ಹಂತದ 2 ಕೋಟಿ ರು. ಚೆಕ್‌ ಅನ್ನು ನೀಡುತ್ತೇನೆ’ ಎಂದು ಹೇಳಿದರು.

ರಾಮಮಂದಿರ ನಿರ್ಮಾಣಕ್ಕೆ ದಿಟ್ಟ ಹೆಜ್ಜೆ, ಟ್ರಸ್ಟ್ ರಚನೆಗೆ ಗ್ರೀನ್ ಸಿಗ್ನಲ್

ಅಯೋಧ್ಯೆಯಲ್ಲಿರುವ ವಿವಾದಿತ ಪ್ರದೇಶವನ್ನು ಹಿಂದು ಪಕ್ಷಕ್ಕೆ ಹಸ್ತಾಂತರಿಸಿದ್ದ ಸುಪ್ರೀಂ ಕೋರ್ಟ್‌, ಅಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ 3 ತಿಂಗಳ ಒಳಗಾಗಿ ಟ್ರಸ್ಟ್‌ವೊಂದನ್ನು ರಚಿಸುವಂತೆ ಕೇಂದ್ರ ಸ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!