40 ಪತ್ರಕರ್ತರು ಸೇರಿ 300 ಗಣ್ಯರ ಮೊಬೈಲ್‌ ಹ್ಯಾಕ್‌: ವರದಿ!

Published : Jul 19, 2021, 09:17 AM ISTUpdated : Jul 19, 2021, 02:11 PM IST
40 ಪತ್ರಕರ್ತರು ಸೇರಿ 300 ಗಣ್ಯರ ಮೊಬೈಲ್‌ ಹ್ಯಾಕ್‌: ವರದಿ!

ಸಾರಾಂಶ

* ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್‌ನ ಇಬ್ಬರು ಸಚಿವರು ಸೇರಿ ಅನೇಕರ ಮೊಬೈಲ್ ಹ್ಯಾಕ್ * ಇಸ್ರೇಲ್‌ ಮೂಲದ ಕಣ್ಗಾವಲು ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್‌ ಸಾಫ್ಟ್‌ವೇರ್‌ನಿಂದ ಈ ಮೊಬೈಲ್‌ ಸಂಖ್ಯೆಗಳು ಹ್ಯಾಕ್‌ * ಯಾವುದೇ ವ್ಯಕ್ತಿಗಳ ಮೇಲೆ ಯಾವುದೇ ರೀತಿಯಲ್ಲಿ ಕಣ್ಗಾವಲು ವಹಿಸಿಲ್ಲ ಎಂದ ಕಂಪನಿ

ನವದೆಹಲಿ(ಜು.19): ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್‌ನ ಇಬ್ಬರು ಸಚಿವರು, ಮೂವರು ವಿಪಕ್ಷ ನಾಯಕರು, ಓರ್ವ ನ್ಯಾಯಾಧೀಶ, ಉದ್ಯಮಿಗಳು, ಚಳವಳಿಗಾರರು ಮತ್ತು 40ಕ್ಕೂ ಹೆಚ್ಚು ಪತ್ರಕರ್ತರು ಸೇರಿದಂತೆ 300ಕ್ಕೂ ಹೆಚ್ಚು ಮೊಬೈಲ್‌ ಸಂಖ್ಯೆಗಳು ಹ್ಯಾಕ್‌ ಆಗಿರುವ ಮಾಹಿತಿ ಬಯಲಾಗಿದೆ.

ಈಗ ನೀವು ಹೆಂಡತಿ/ ಗಂಡನ ಮೇಲೂ ಸ್ಪೈ ನಡೆಸಬಹುದು!

ಸರ್ಕಾರಕ್ಕೆ ಮಾತ್ರ ಮಾರಾಟ ಮಾಡಲಾಗುವ ಇಸ್ರೇಲ್‌ ಮೂಲದ ಕಣ್ಗಾವಲು ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್‌ ಸಾಫ್ಟ್‌ವೇರ್‌ನಿಂದ ಈ ಮೊಬೈಲ್‌ ಸಂಖ್ಯೆಗಳು ಹ್ಯಾಕ್‌ ಆಗಿವೆ ಎಂದು ಅಂತಾರಾಷ್ಟ್ರೀಯ ಮಾಧ್ಯಮ ಒಕ್ಕೂಟ ವರದಿ ಮಾಡಿದೆ. ಆದರೆ ಯಾವುದೇ ವ್ಯಕ್ತಿಗಳ ಮೇಲೆ ಯಾವುದೇ ರೀತಿಯಲ್ಲಿ ಕಣ್ಗಾವಲು ವಹಿಸಿಲ್ಲ. ಎಂದು ಭಾರತ ಸರ್ಕಾರ ಹೇಳಿದೆ.

ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತವು ತನ್ನೆಲ್ಲಾ ಪ್ರಜೆಗಳ ಗೌಪ್ಯತೆಯ ಹಕ್ಕು ಮೂಲಭೂತ ಹಕ್ಕು ಎಂಬುದನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ. ಜೊತೆಗೆ ಮಾಧ್ಯಮ ವರದಿಯನ್ನು ತನಿಖಾಧಿಕಾರಿ, ಪ್ರಾಸಿಕ್ಯೂಟರ್‌ ಮತ್ತು ತೀರ್ಪುಗಾರರ ಪಾತ್ರ ವಹಿಸುವ ಯತ್ನವನ್ನು ಭಾರತ ಸರ್ಕಾರ ತಳ್ಳಿ ಹಾಕಿದೆ.

ವಾಟ್ಸಾಪ್‌ನಿಂದ ಭಾರತದ ಬಗ್ಗೆ ತಾರತಮ್ಯ: ಸರ್ಕಾರ ಕಿಡಿ

ವಾಷಿಂಗ್ಟನ್‌ ಪೋಸ್ಟ್‌, ದಿ ಗಾರ್ಡಿಯನ್‌ ಸೇರಿದಂತೆ 16 ಅಂತಾರಾಷ್ಟ್ರೀಯ ಮಾಧ್ಯಮಗಳು ಸೇರಿದಂತೆ ಭಾರತದ ‘ದಿ ವೈರ್‌’ ವೆಬ್‌ಸೈಟ್‌ ವಿಶ್ವಾದ್ಯಂತ 50 ಸಾವಿರ ಮೊಬೈಲ್‌ ಸಂಖ್ಯೆಗಳನ್ನು ಇಸ್ರೇಲ್‌ನ ಕಣ್ಗಾವಲು ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್‌ ಸಾಫ್ಟ್‌ವೇರ್‌ನಿಂದ ಹ್ಯಾಕ್‌ ಮಾಡಲಾಗಿದೆ ಎಂದು ವರದಿ ಮಾಡಿದ್ದವು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!