
ನವದೆಹಲಿ (ನ.11): ಅಯೊಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣ ವಿಚಾರದ ಬಗ್ಗೆ ವಿಎಚ್ಪಿ ನೇತೃತ್ವದಲ್ಲಿ ಕಳೆದ ಎರಡು ದಿನಗಳಿಂದ ಸಭೆ ನಡೆದಿದ್ದು, ಎಲ್ &ಟಿ ಕಂಪನಿ ನಿರ್ಮಾಣದ ಹೊಣೆ ಹೊತ್ತಿದೆ ಎಂದು ಪೇಜಾವರ ವಿಶ್ವ ಪ್ರಸನ್ನ ಸ್ವಾಮೀಜಿ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಸ್ವಾಮೀಜಿ ಅಯೋಧ್ಯೆ ರಾಮಮಂದಿರ ವಿಚಾರದ ಬಗ್ಗೆ ಮಾತನಾಡಿ ಇದರ ಉಸ್ತುವಾರಿ ಟಾಟಾ ಕನ್ಸಲ್ಟನ್ಸಿ ಗೆ ವಹಿಸಲಾಗಿದೆ. ಮಂದಿರ ನಿರ್ಮಾಣಕ್ಕೆ ದೊಡ್ಡಮಟ್ಟದಲ್ಲಿ ಹಣ ಸಂಗ್ರಹ ಆಗಬೇಕಿದೆ. ರಾಮಭಕ್ತರು ಈಗ ಹಣ ನೀಡಬೇಕಾಗಿದೆ, ಸಂಕ್ರಾಂತಿ ಯಿಂದ ದೇಣಿಗೆ ಸಂಗ್ರಹ ಅಭಿಯಾನ ಆರಂಭವಾಗಲಿದೆ ಎಂದರು.
ರಾಮಮಂದಿರ ಬ್ಯಾಂಕ್ ಖಾತೆಗೆ 6 ಲಕ್ಷ ರು. ವಂಚನೆ
ಇದಕ್ಕೆ ಪ್ರತಿ ಮನೆಯಿಂದಲೂ, ಪ್ರತಿ ರಾಮಭಕ್ತ ಕೂಡ ದೇಣಿಗೆ ನೀಡಬೇಕು. ಪ್ರತಿರಾಮಭಕ್ತ ಕನಿಷ್ಠ 10 ರೂಪಾಯಿಯಾದರೂ ದೇಣಿಗೆ ನೀಡಬೇಕು. ಪ್ರತೀ ಕುಟುಂಬ 100 ರು. ದೇಣಿಗೆ ನೀಡಬೇಕು. 45 ದಿನಗಳ ಕಾಲ ದೇಣಿಗೆ ಸಂಗ್ರಹ ಕಾರ್ಯ ನಡೆಯಲಿದೆ ಎಂದು ವಿಶ್ವ ಪ್ರಸನ್ನ ಸ್ವಾಮೀಜಿ ಹೇಳಿದರು.
ಒಟ್ಟು ಮಂದಿರ ನಿರ್ಮಾಣ ವೆಚ್ಚದ ಬಗ್ಗೆ ಇನ್ನು ನಿರ್ಣಯ ಆಗಿಲ್ಲ. ಈ ಬಗ್ಗೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ನಿರ್ಧಾರವಾಗಲಿದೆ ಎಂದು ಸ್ವಾಮೀಜಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ