
ಭೋಪಾಲ್(ಎ.16): ಕೊರೋನಾದಿಂದಾಗುವ ಸಾವನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ. ವಯಸ್ಸಾದಾಗ ಜನರು ಸಾಯಲೇಬೇಕು ಎಂದು ಸಚಿವರೊಬ್ಬರು ಕೊಟ್ಟಿರೋ ಹೇಳಿಕೆ ವಿವಾದ ಸೃಷ್ಟಿಸಿದೆ. ಜವಾಬ್ದಾರಿಯುತ್ ಸ್ಥಾನದಲ್ಲಿದ್ದುಕೊಂಡು ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದು ಮಧ್ಯಪ್ರದೇಶದ ಸಚಿವ ಪ್ರೇಮ್ ಸಿಂಗ್ ಪಟೇಲ್.
ಪ್ರತಿದಿನ ಬಹಳಷ್ಟು ಜನ ಸಾಯುತ್ತಿದ್ದಾರೆ ಎಂದು ನೀವು ಹೇಳುತ್ತೀರಿ, ವಯಸ್ಸಾದವರು ಸಾಯಲೇಬೇಕಲ್ಲ ಎಂದು ಹೇಳಿದ್ದಾರೆ ಸಚಿವ ಪಟೇಲ್. ಕೊರೋನಾ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಈ ರೀತಿ ಉತ್ತರಿಸಿದ್ದಾರೆ ಸಚಿವ.
ಕುಂಭಮೇಳದಲ್ಲಿ ಕೊರೋನಾಗೆ ಮೊದಲ ಬಲಿ : 1,700ಕ್ಕೂ ಹೆಚ್ಚು ಕೇಸ್
ಕೊರೋನಾ ಸಾವು ಸಂಭವಿಸುತ್ತಿದೆ ಎಂದು ನಾನು ಒಪ್ಪುತ್ತೇನೆ. ಆದರೆ ಈ ಸಾವುಗಳನ್ನು ಯಾರೂ ತಡೆಯಲು ಸಾಧ್ಯವಿಲ್ಲ. ನಾನಷ್ಟೇ ಅಲ್ಲ, ದೇಶದ ಎಲ್ಲರೂ ಕೊರೋನಾದ ರಕ್ಷಣೆಗಾಗಿ ಸಹಕಾರದ ಬಗ್ಗೆ ಮಾತನಾಡುತ್ತಿದ್ದೇವೆ.
ನಾವು ಜನರ ಸಹಕಾರವನ್ನು ಬಯಸುತ್ತೇವೆ. ಮಾಸ್ಕ್ ಧರಿಸುವುದು ಸೇರಿದಂತೆ ಅಗತ್ಯವಿರುವ ಎಲ್ಲಾ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಅವಶ್ಯಕ. ಕೈ ತೊಳೆಯುವುದು, ಸಾಮಾಜಿಕ ದೂರವನ್ನು ಅನುಸರಿಸಿ ಮತ್ತು ವೈದ್ಯರಿಂದ ಚಿಕಿತ್ಸೆ ಪಡೆಯಿರಿ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ