
ನವದೆಹಲಿ(ಮೇ.19): ಕೊರೋನಾದಿಂದ ಗುಣಮುಖ ಆದವರಿಗೆ ಲಸಿಕೆಯನ್ನು 9 ತಿಂಗಳ ಅವಧಿ ಬಳಿಕ ನೀಡಬೇಕು ಎಂದು ಸರ್ಕಾರಿ ಸಮಿತಿಯೊಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ರೋಗನಿರೋಧಕತೆ ಕುರಿತಾದ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ (ಎನ್ಟಿಎಜಿಐ) ಈ ಶಿಫಾರಸು ಮಾಡಿದ್ದು, ಇನ್ನು 1-2 ದಿನದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
ಈ ಮುನ್ನ ಇದೇ ಸಮಿತಿಯು, ಕೊರೋನಾದಿಂದ ಗುಣಮುಖರಾದವರು 6 ತಿಂಗಳ ಅಂತರದ ಬಳಿಕ ಲಸಿಕೆ ಪಡೆಯಬೇಕು ಎಂಬ ಶಿಫಾರಸು ಮಾಡಿತ್ತು. ಆದರೆ ಈಗ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಅಧ್ಯಯನಗಳನ್ನು ಪರಿಶೀಲನೆ ನಡೆಸಿರುವ ಸಮಿತಿ, 6ರ ಬದಲು 9ನೇ ತಿಂಗಳ ನಂತರ ಲಸಿಕೆ ಪಡೆದರೆ ಮರು ಸೋಂಕು ತಾಗುವ ಅಪಾಯ ಇರುವುದಿಲ್ಲ.
ದೇಹದಲ್ಲಿನ ಪ್ರತಿಕಾಯ ಶಕ್ತಿ ವೃದ್ಧಿಸುತ್ತದೆ ಎಂದು ಶಿಫಾರಸಿನಲ್ಲಿ ತಿಳಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯು, ಕೊರೋನಾದಿಂದ ಗುಣಮುಖ ಆದವರು 6 ತಿಂಗಳ ಬಳಿಕ ಲಸಿಕೆ ಪಡೆಯಬೇಕು ಎಂದು ಹೇಳಿತ್ತು.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ