
ಒಡಿಶಾದಲ್ಲಿ ರಣ ಭೀಕರ ಸುಂಟರಗಾಳಿ ಇಬ್ಬರನ್ನು ಬಲಿ ಪಡೆದಿದ್ದು, 70ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಮಾಡಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಈ ಘಟನೆಯ ಭಯಾನಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ನಿನ್ನೆ ಒಡಿಶಾದ ಮಯೂರ್ಭಂಜ್ ಜಿಲ್ಲೆಯ ಕಾರಂಜಿಯಾ ಬ್ಲಾಕ್ನ ನಾಲ್ಕು ಗ್ರಾಮಗಳಿಗೆ ಭಾನುವಾರ ನಾರ್ವೆಸ್ಟರ್ ಚಂಡಮಾರುತ ಅಪ್ಪಳಿಸಿದ ಪರಿಣಾ ಹಲವಾರು ಮನೆಗಳಿಗೆ ಹಾನಿಯುಂಟು ಮಾಡಿದ್ದು, ಈ ನೈಸರ್ಗಿಕ ವೈಪರೀತ್ಯದಲ್ಲಿ ಒಬ್ಬ ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 29 ಜನರು ಗಾಯಗೊಂಡಿದ್ದಾರೆ.
ಮೃತರನ್ನು ಕಿಯೋಂಜಾರ್ ಜಿಲ್ಲೆಯ ಪೊಲೀಸ್ ನಾಯಕ್ (45) ಮತ್ತು ಕಾರಂಜಿಯಾ ಬ್ಲಾಕ್ನ ಟಾಟೊದ ಮಾಲತಿ ಮೊಹಂತ (50) ಎಂದು ಗುರುತಿಸಲಾಗಿದೆ. ಇವರು ಸಂಜೆ 4.30 ರ ಸುಮಾರಿಗೆ ರಸ್ತೆಯಲ್ಲಿ ಹೋಗುತ್ತಿದ್ದಾಗ ಸುಂಟರಗಾಳಿ ಕಾಣಿಸಿಕೊಂಡಿದ್ದು, ಅದಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದುರಂತದಲ್ಲಿ ಮೃತರಾದವರ ಹತ್ತಿರದ ಸಂಬಂಧಿಕರಿಗೆ 4 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಘೋಷಿಸಿದ್ದಾರೆ.
ಗಾಯಗೊಂಡ 23 ಜನರು ಕಾರಂಜಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಗಂಭೀರ ಸ್ಥಿತಿಯಲ್ಲಿರುವ ಆರು ಮಂದಿಯನ್ನು ಕಿಯೋಂಜಾರ್ನ ಧರಣಿಧರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಂಜಿಯಾ ಬ್ಲಾಕ್ನ ಕಿಯಾ, ಕಂಕಡ, ಪಾನಿಪೋಸಿ ಮತ್ತು ಡುಮುರಿಯಾ ಗ್ರಾಮಗಳು ನಾರ್ತ್ವೆಸ್ಟರ್ ಬಿರುಗಾಳಿ ಮತ್ತು ಸುಂಟರಗಾಳಿ ಹಾಗೂ ಆಲಿಕಲ್ಲು ಮಳೆಯಿಂದ ತೀವ್ರವಾಗಿ ಹಾನಿಗೊಳಗಾಗಿವೆ. ಹಠಾತ್ ಸಂಭವಿಸಿದ ಸುಂಟರಗಾಳಿಯಿಂದ ಈ ಪ್ರದೇಶದಲ್ಲಿ ಭೀತಿ ಹುಟ್ಟಿಕೊಂಡಿದ್ದು, ಮೂರು ಮೋಟಾರ್ ಸೈಕಲ್ಗಳು ಮತ್ತು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜನರು ಸಹ ಈ ಭೀಕರ ಗಾಳಿಗೆ ಹಾರಿಹೋಗಿದ್ದು, ಕೆಲವು ಮರಗಳು ಬುಡಮೇಲಾಗಿವೆ.
ಇದನ್ನು ಓದಿ: ಹರ್ಮುಜ್ ಜಲಸಂಧಿಯನ್ನು ಇರಾನ್ ಹಿಡಿತದಿಂದ ಬಿಡಿಸಲು ಚೀನಾಗೆ ಬೆದರಿಸುತ್ತಲೇ ನ್ಯಾಟೋ ರಾಷ್ಟ್ರಗಳ ಸಹಾಯ ಕೇಳಿದ ಟ್ರಂಪ್
ಮಯೂರ್ಭಂಜ್ ಜಿಲ್ಲಾಧಿಕಾರಿ ಹೇಮಕಾಂತ ಸೇ ಅವರು ಈ ಸುಂಟರಗಾಳಿಯಿಂದ ಸಂತ್ರಸ್ತರಾದವರಿಗೆ ಬೇಯಿಸಿದ ಆಹಾರವನ್ನು ನೀಡಲಾಗುವುದು, ವಿಪತ್ತಿನಲ್ಲಿ ಮನೆ ಕಳೆದುಕೊಂಡ ಜನರಿಗೆ ಅಗತ್ಯ ಸಹಾಯ ನೀಡಲಾಗುವುದು ಎಂದು ಅವರು ಹೇಳಿದರು.
ಇದನ್ನು ಓದಿ: ಎಲ್ಲರ ಬಳಿ ಕ್ಷಮೆ ಕೇಳು, ಎಲ್ಲರನ್ನೂ ಕ್ಷಮಿಸಿಬಿಡು ಇದು ಹೊರಡುವ ಸಮಯ: ಭಾರವಾದ ಹೃದಯದಿಂದ ಹರೀಶ್ ರಾಣಾ ಕಳಿಸಿಕೊಟ್ಟ ಕುಟುಂಬ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ