#JanataCurfew ನಡುವೆ ಪೌರತ್ವ ವಿರೋಧಿ ಹೋರಾಟ; ಶಾಹೀನ್‌ ಬಾಗ್‌ನಲ್ಲಿ ಪೆಟ್ರೋಲ್ ಬಾಂಬ್!

Published : Mar 22, 2020, 07:13 PM ISTUpdated : Mar 22, 2020, 07:17 PM IST
#JanataCurfew ನಡುವೆ ಪೌರತ್ವ ವಿರೋಧಿ ಹೋರಾಟ; ಶಾಹೀನ್‌ ಬಾಗ್‌ನಲ್ಲಿ ಪೆಟ್ರೋಲ್ ಬಾಂಬ್!

ಸಾರಾಂಶ

ದೇಶದೆಲ್ಲೆಡೆ ಜನತಾ ಕರ್ಫ್ಯೂಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಜನರು ಸ್ವಯಂ ದಿಗ್ಬಂಧನದ ಮೂಲಕ ಕೊರೋನಾ ವೈರಸ್ ತಡೆಗಟ್ಟಲು ದೇಶದ ಜನತೆ ಟೊಂಕ ಕಟ್ಟಿ ನಿಂತಿದ್ದಾರೆ. ಕೊರೋನಾ ವೈರಸ್ ಆತಂಕದ ನಡುವೆಯೂ ಶಾಹೀನ್ ಬಾಗ್‌ನಲ್ಲಿ ಪೌರತ್ವ ವಿರೋದಿ ಪ್ರತಿಭಟನೆ ನಡೆಯುತ್ತಲೇ ಇದೆ. ಇಂದು ಪ್ರತಿಭಟನೆ ವೇಳೆ ಪೊಲೀಸರತ್ತ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ.

ನವದೆಹಲಿ(ಮಾ.22): ಕೊರೋನಾ ವೈರಸ್‌ ತಡೆಗಟ್ಟಲು ಜನತಾ ಕರ್ಫ್ಯೂನಿಂದಾಗಿ ಇಡೀ ದೇಶವೇ ಸ್ಥಬ್ತವಾಗಿತ್ತು. ದೆಹಲಿ ಕೂಡ ಶಾಂತವಾಗಿತ್ತು. ಆದರೆ ಕಳೆದ 90 ದಿನಗಳಿಂದ ನಡೆಯುತ್ತಿರುವ ಪೌರತ್ವ ವಿರೋಧಿ ಪ್ರತಿಭಟನೆ ಜತನಾ ಕರ್ಫ್ಯೂ ದಿನ ಸದ್ದು ಮಾಡಿದೆ. ಮುಂಜಾನೆ ಪ್ರತಿಭಟನೆ ನಡೆಯುತ್ತಿದ್ದ ಸ್ಥಳದಲ್ಲಿ ಭದ್ರತೆ ಒದಗಿಸುತ್ತಿದ್ದ ಪೊಲೀಸರ ಹಾಕಿದ್ದ ಬ್ಯಾರಿಕೇಡ್‌ನತ್ತ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ.

ಶಾಹೀನ್‌ ಬಾಗ್‌ನಲ್ಲಿ 80 ದಿನದಿಂದ ಏನು ನಡೆಯುತ್ತಿದೆ?

ಶಾಹೀನಾ ಬಾಗ್ ಪ್ರತಿಭಟನಾ ಸ್ಥಳದ ಸುತ್ತ ಪೊಲೀಸ್ ಬ್ಯಾರಿಕೇಡ್ ಹಾಕಲಾಗಿತ್ತು. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಬ್ಯಾರಿಕೇಡ್‌ನತ್ತ ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದ್ದಾರೆ. ಬಳಿಕ ಇದೇ ದುರ್ಷರ್ಮಿಗಳು ಜಾಮಿಯಾ ಯುನಿವರ್ಸಿಟಿ ಬಳಿ ಕ್ರ್ಯೂಡ್ ಬಾಂಬ್ ಎಸೆದಿದ್ದಾರೆ. ಬ್ಯಾರಿಕೇಡ್ ಹಾಕಿದ್ದರಿಂದ ಅದೃಷ್ಠವಶಾತ್ ಪ್ರತಿಭಟನಾಕಾರರು ಹಾಗೂ ಪೊಲೀಸರಿಗೆ ಯಾವುದೇ ಅಪಾಯ ಎದುರಾಗಲಿಲ್ಲ. ಇದೀಗ ಹಿರಿಯ ಪೊಲೀಸ್ ಅಧಿಕಾರಿ ಗ್ಯಾನೇಶ್ ಕುಮಾರ್ ತನಿಖೆ ಆರಂಭಿಸಿದ್ದಾರೆ. 

ದಿಲ್ಲಿ ಶಾಹೀನ್‌ ಬಾಗ್‌ ಪೌರತ್ವ ಹೋರಾಟಕ್ಕೂ ಪಿಎಫ್‌ಐನಿಂದ ಹಣ!

ಸಿಸಿಟಿ ದೃಶ್ಯಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕೃತ್ಯ ಎಸಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶನಿವಾರ(ಮಾ.21) ಪ್ರತಿಭಟನಾಕಾರರ ಗುಂಪು ಪೊಲೀಸರ ಜೊತೆ ಮಾತುಕತೆ ನಡೆಸಿತ್ತು. ಪ್ರತಿಭಟನೆಯನ್ನು ನಿಲ್ಲಿಸಲು ಒಂದು ಗುಂಪು ಇಚ್ಚಿಸಿತ್ತು. ಆದರೆ ಮತ್ತೊಂದು ಗುಂಪು ಪ್ರತಿಭಟನೆ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿತ್ತು. ಈ ಕುರಿತು ಪೊಲೀಸರ ಮಧ್ಯಸ್ಥಿಕೆಯಲ್ಲಿ ಮಾತುಕತೆ ನಡೆಸಲಾಗಿತ್ತು. ಬಳಿಕ ಜನತಾ ಕರ್ಫ್ಯೂ ದಿನವೂ ಪ್ರತಿಭಟನೆ ಮುಂದುವರಿಸುವ ತೀರ್ಮಾನಕ್ಕೆ ಬರಲಾಗಿತ್ತು. 

ಪೆಟ್ರೋಲ್ ಬಾಂಬ್ ಪ್ರಕರಣದಿಂದ ಇದೀಗ ಪೊಲೀಸರು ಎಲ್ಲಾ ಆಯಾಮದಲ್ಲಿ ತನಿಖೆ ನಡೆಸಲು ಮುಂದಾಗಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗೆಳತಿಯ ತಡೆಯಲು ಕಾರಿನ ರೂಫ್‌ ಮೇಲೆ ಹತ್ತಿದ.. ಆದರೆ ಆಕೆಯ ಪ್ರಿಯಕರ ಆತನ ಮೇಲೆ ಕಾರು ಹತ್ತಿಸಿದ
IAS: ಭ್ರಷ್ಟ ವ್ಯವಸ್ಥೆ ನಿದ್ದೆಗೆಡಿಸಿದ ಭಾರತದ ಆ ಐರನ್ ಐಎಎಸ್' ಆಫೀಸರ್ಸ್; ಈ ಲಿಸ್ಟ್‌ನಲ್ಲಿದೆ ಒಂದು ಕನ್ನಡದ ಕಲಿ!