ನವದೆಹಲಿ[ಫೆ.05]: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟ ತೀವ್ರಗೊಳಿಸುವ ಸಲುವಾಗಿ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ (ಪಿಎಫ್ಐ) ಸಂಘಟನೆ 120 ಕೋಟಿ ರು. ಹಣ ಸಂಗ್ರಹಿಸಿ, ಅದನ್ನು ಪ್ರತಿಭಟನೆಗಳಿಗೆ ವಿನಿಯೋಗಿಸಿತ್ತು ಎಂಬ ಪ್ರಕರಣ, ಸಂಸ್ಥೆಗೆ ಉರುಳುವಾಗುವ ಎಲ್ಲ ಸಾಧ್ಯತೆಗಳು ಕಂಡುಬಂದಿದೆ.
ಹಣಕಾಸು ವ್ಯವಹಾರ ಬಯಲಿಗೆ ಎಳೆದಿದ್ದ ಜಾರಿ ನಿರ್ದೇಶನಾಲಯವು, ಹಣದ ಮೂಲದ ಕುರಿತು ತನಿಖೆ ನಡೆಸಲು ಪಿಎಫ್ಐನ ಹಲವು ಮುಖಂಡರನ್ನು ಇತ್ತೀಚೆಗೆ ವಿಚಾರಣೆಗೆ ಗುರಿಪಡಿಸಿತ್ತು. ಆದರೆ ವಿಚಾರಣೆ ವೇಳೆ ಹಣದ ಮೂಲವನ್ನು ವಿವರಿಸಲು ಅವರು ವಿಫಲರಾಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಟೀವಿ ವಾಹಿನಿಯೊಂದು ವರದಿ ಮಾಡಿದೆ.
ಹಗರಣದ ಬೆಳಕಿಗೆ ಬಂದಾಗ ಕಾನೂನಿನ ಪ್ರಕಾರವೇ ಹಣ ಸಂಗ್ರಹ ಮಾಡಲಾಗಿದೆ ಎಂದು ಪಿಎಫ್ಐ ಹೇಳಿತ್ತು. ಆದರೆ ವಿಚಾರಣೆ ವೇಳೆ ಹಣದ ಮೂಲ ಬಹಿರಂಗಪಡಿಸಲು ವಿಫಲವಾಗಿರುವುದು ಅದಕ್ಕೆ ಸಮಸ್ಯೆ ತಂದೊಡ್ಡುವುದು ಖಚಿತ ಎನ್ನಲಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಪಿಎಫ್ಐ ಸಂಘಟನೆಯ ಪದಾಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಸೇರಿದಂತೆ ವಿವಿಧ ಪ್ರಕರಣಗಳಡಿ ತನಿಖೆ ಎದುರಿಸಬೇಕಾಗಿ ಬರಲಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ