
ನವದೆಹಲಿ (ಡಿ. 23) ಕೇಂದ್ರ ಸರ್ಕಾರದ ಕೃಷಿ ಕಾಯಿದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರಿದುಕೊಂಡೆ ಇದೆ. ಹರ್ಯಾಣ, ಪಂಜಾಬ್, ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ಕಾವು ಜೋರಾಗಿಯೇ ಇದೆ.
ರೈತ ದಿನಾಚರಣೆ ದಿನ ಒಂದು ಹೊತ್ತಿನ ಊಟವನ್ನು ತ್ಯಜಿಸಿ ಎಂದು ಕಿಸಾನ್ ಏಕ್ತಾ ಮೋರ್ಚಾ ಕರೆ ಕೊಟ್ಟಿದೆ. ಮಾಜಿ ಪ್ರಧಾನಿ ಚರಣ್ ಸಿಂಗ್ ಅವರ ಜನ್ಮದಿನವನ್ನು ರಾಷ್ಟ್ರೀಯ ರೈತ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಕಿಸಾನ್ ಏಕ್ತಾ ಮೋರ್ಚಾ ತನ್ನ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿರುವ ಪೋಟೋವೊಂದು ಇದೀಗ ವೈರಲ್ ಆಗಿದೆ.
ಐಐಟಿಯಿಂದ ಹೊಲದವರೆಗೆ... ಮೂರು ಕಾನೂನುಗಳ ಬಗ್ಗೆ ವಿವರ ಕೊಟ್ಟ ಸೂರ್ಯ
ರೈತರ ಪ್ರತಿಭಟನೆಗೆ ಸೇರಿಕೊಳ್ಳಲು ರೈತ ಮಹಿಳೆ ಪಟಿಯಾಲದಿಂದ ಸಿಂಧ್ ಗಡಿಯವರೆ ಐವರನ್ನು ಕೂರಿಸಿಕೊಂಡು ಜೀಪ್ ಚಾಲನೆ ಮಾಡಿಕೊಂಡು ಹೋಗಿದ್ದಾರೆ. ರೈತ ಮಹಿಳೆ 62 ವರ್ಷದ ಮಂಜೀತ್ ಕೌರ್ ಜೀಪ್ ಚಾಲನೆ ಮಾಡಿಕೊಂಡು ಬಂದಿದ್ದಾರೆ. ಈ ಪೋಟೋ ವೈರಲ್ ಆಗಿದ್ದು ನಟಿ ತಪ್ಸಿ ಪನ್ನು ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಶೇರ್ ಮಾಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ