ರಾಜಸ್ಥಾನದಲ್ಲಿ ಕಾಂಗ್ರೆಸ್‌ಗೆ ತಲೆನೋವಾದ ಪೈಲಟ್‌ ಏಕಾಂಗಿ ಪ್ರಚಾರ

Published : Jan 14, 2023, 09:21 AM IST
ರಾಜಸ್ಥಾನದಲ್ಲಿ  ಕಾಂಗ್ರೆಸ್‌ಗೆ ತಲೆನೋವಾದ ಪೈಲಟ್‌ ಏಕಾಂಗಿ ಪ್ರಚಾರ

ಸಾರಾಂಶ

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ವಿರುದ್ಧ 4 ವರ್ಷಗಳಿಂದ ಬಹಿರಂಗವಾಗಿಯೇ ಸಮರ ಸಾರಿಕೊಂಡು ಬಂದಿರುವ ಪಕ್ಷದ ಮತ್ತೋರ್ವ ಯುವನಾಯಕ ಸಚಿನ್‌ ಪೈಲಟ್‌ ಮತ್ತೆ ಬಂಡಾಯದ ಬಾವುಟ ಹಾರಿಸಿದ್ದಾರೆ.

ಜೈಪುರ: ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ವಿರುದ್ಧ 4 ವರ್ಷಗಳಿಂದ ಬಹಿರಂಗವಾಗಿಯೇ ಸಮರ ಸಾರಿಕೊಂಡು ಬಂದಿರುವ ಪಕ್ಷದ ಮತ್ತೋರ್ವ ಯುವನಾಯಕ ಸಚಿನ್‌ ಪೈಲಟ್‌ ಮತ್ತೆ ಬಂಡಾಯದ ಬಾವುಟ ಹಾರಿಸಿದ್ದಾರೆ. ಅವರು ಮುಂದಿನ ವಾರದಿಂದ ಏಕಾಂಗಿಯಾಗಿ ರೈತರು ಮತ್ತು ಯುವಕರನ್ನು ಉದ್ದೇಶಿಸಿ ಸರಣಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ನಿರ್ಧರಿಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಪೈಲಟ್‌ ಕೈಗೊಂಡ ನಿರ್ಧಾರ, ಕಾಂಗ್ರೆಸ್‌ಗೆ ಹೊಸ ತಲೆ ನೋವಾಗಿ ಕಾಣಿಸಿಕೊಂಡಿದೆ. ರಾಹುಲ್‌ರ ಭಾರತ್‌ ಜೋಡೋ ಯಾತ್ರೆ ರಾಜಸ್ಥಾನಕ್ಕೆ ಬಂದ ವೇಳೆ ಗೆಹ್ಲೋಟ್‌, ಸಚಿನ್‌ರನ್ನು ಒಟ್ಟಿಗೆ ಕೊಂಡೊಯ್ಯುವ ಮೂಲಕ ಬಂಡಾಯ ಶಮನ ಮಾಡಲು ರಾಹುಲ್‌ ಯತ್ನಿಸಿದ್ದರು. ಆದರೆ ಯಾತ್ರೆ ರಾಜ್ಯ ಬಿಡುತ್ತಲೇ ಮತ್ತೆ ಸಚಿನ್‌ ಬಂಡಾಯದ ಬಾವುಟ ಹಾರಿಸಿದ್ದಾರೆ.

ಗೆಹ್ಲೋಟ್ ಆಪ್ತ ಸಚಿವರ ವಜಾಗೆ ಪೈಲೆಟ್ ಬಣ ಆಗ್ರಹ, ಅಲುಗಾಡುತ್ತಿದೆ ರಾಜಸ್ಥಾನ ಕಾಂಗ್ರೆಸ್ ಸರ್ಕಾರ!

ಕಾಂಗ್ರೆಸ್‌ಗೆ ಬಿಸಿ ತುಪ್ಪವಾಗಿರುವ ಅಶೋಕ್ ಗೆಹ್ಲೋಟ್ ಹೊಗಳಿದ ಮೋದಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದು ಕೋಕಾ ಕೋಲಾ ಕಂಪನಿ ಚಾರ್ಟೆಡ್ ಅಕೌಂಟೆಂಟ್ ಹಠಾತ್ ಸಾವು
ದೇವಸ್ಥಾನದ ಕಾರ್ತಿಕ ದೀಪದ ಪರವಾಗಿ ತೀರ್ಪು ನೀಡಿದ ಜಡ್ಜ್‌, ಸೇಡು ತೀರಿಸಿಕೊಳ್ಳಲು ಮುಂದಾದ ತಮಿಳುನಾಡು ಸರ್ಕಾರ!