ರಾಹುಲ್‌ ಗಾಂಧಿ ರೀತಿ ತತ್‌ಕ್ಷಣದ ಅರ್ನಹತೆ ಚುನಾಯಿತ ಪ್ರತಿನಿಧಿಯ ವಾಕ್‌ ಸ್ವಾತಂತ್ರ್ಯ ಕಸಿಯುತ್ತದೆ: ಸುಪ್ರೀಂಗೆ ಮೊರೆ

Published : Mar 26, 2023, 09:30 AM IST
ರಾಹುಲ್‌ ಗಾಂಧಿ ರೀತಿ ತತ್‌ಕ್ಷಣದ ಅರ್ನಹತೆ ಚುನಾಯಿತ ಪ್ರತಿನಿಧಿಯ ವಾಕ್‌ ಸ್ವಾತಂತ್ರ್ಯ ಕಸಿಯುತ್ತದೆ: ಸುಪ್ರೀಂಗೆ ಮೊರೆ

ಸಾರಾಂಶ

ಸಂಸದರ ಸ್ವಯಂಚಾಲಿತ ಅನರ್ಹತೆ ವಿರುದ್ಧ ಕೇರಳದ ಸಾಮಾಜಿಕ ಕಾರ್ಯಕರ್ತೆ ಅಭಾ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ. ಸೆಕ್ಷನ್‌ 8(3) ಅಲ್ಟ್ರಾವೈರಸ್ ಎಂದು ಘೋಷಿಸಬೇಕು. ಸ್ವಯಂಚಾಲಿತ ಅನರ್ಹತೆಯಿಂದ ಸಂಸದರ ಹಕ್ಕಿಗೆ ಭಂಗ ಎಂದು ಮನವಿ ಮಾಡಲಾಗಿದೆ.   

ನವದೆಹಲಿ: ಜನಪ್ರತಿನಿಧಿಗಳು ಶಿಕ್ಷೆಗೆ ಒಳಗಾದ ತಕ್ಷಣವೇ ಅವರನ್ನು ಸ್ವಯಂಚಾಲಿತವಾಗಿ ಶಾಸನ ಸಭೆಯಿಂದ ಅನರ್ಹಗೊಳಿಸುವ ಕಾನೂನಿನಲ್ಲಿನ ಅಂಶಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮಹಿಳೆಯೊಬ್ಬರು ಅರ್ಜಿ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಸಂಸತ್ತಿನಿಂದ ಅನರ್ಹಗೊಳಿಸಿದ ಬೆನ್ನಲ್ಲೇ ಈ ಅರ್ಜಿ ಸಲ್ಲಿಕೆ ಆಗಿದೆ. ಕೇರಳದ ಮಲಪ್ಪುರಂನ ಸಾಮಾಜಿಕ ಕಾರ್ಯಕರ್ತೆ ಅಭಾ ಮುರಳೀಧರನ್‌ ಎಂಬುವರ ಪರವಾಗಿ ವಕೀಲ ದೀಪಕ್‌ ಪ್ರಕಾಶ್‌ ಅವರು ಅರ್ಜಿ ಸಲ್ಲಿಸಿದ್ದು, ‘1951ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್‌ 8(3) ಅಡಿ ಜನಪ್ರತಿನಿಧಿಗಳು ದೋಷಿ ಎಂದು ಪರಿಗಣಿಸಲ್ಪಟ್ಟ ಬೆನ್ನಲ್ಲೇ ಸ್ವಯಂಚಾಲಿತವಾಗಿ ಅವರ ಶಾಸನಸಭಾ ಸದಸ್ಯತ್ವದ ಅನರ್ಹತೆಗೆ ಅನುವು ಮಾಡಿಕೊಡುತ್ತದೆ. ಇದನ್ನು ಸಂವಿಧಾನದ ಪಾಲಿಗೆ ಅಲ್ಟ್ರಾ ವೈರಸ್‌ ಎಂದು ಘೋಷಿಸಬೇಕು. ಏಕೆಂದರೆ ಇದು ಸಮಾನತೆಯ ಮೂಲಭೂತ ಹಕ್ಕನ್ನು ಕಸಿಯುತ್ತದೆ’ ಎಂದು ವಾದಿಸಿದ್ದಾರೆ.

ರಾಹುಲ್‌ ಗಾಂಧಿ ಅವರು ಅನರ್ಹಗೊಂಡ ಪ್ರಕರಣವನ್ನು ಅರ್ಜಿಯಲ್ಲಿ ಪ್ರಸ್ತಾಪಿಸಿರುವ ಅಭಾ, ಸೆಕ್ಷನ್‌ 8(3) ಪ್ರಕಾರ ಸ್ವಯಂಚಾಲಿತವಾಗಿ ಅನರ್ಹ ಮಾಡಲು ಬರುವುದಿಲ್ಲ ಎಂದು ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿದ್ದಾರೆ. ‘ರಾಹುಲ್‌ ಅವರು ಮಾನಹಾನಿ (ಸೆಕ್ಷನ್‌ 499) ಕಾಯ್ದೆ ಅನ್ವಯ ತಪ್ಪಿತಸ್ಥರಾಗಿದ್ದಾರೆ ಹಾಗೂ 2 ವರ್ಷ ಜೈಲು ವಾಸಕ್ಕೆ ಗುರಿಯಾಗಿದ್ದಾರೆ. ಆದರೆ ಯಾವುದೇ ಚುನಾಯಿತ ಸದಸ್ಯನನ್ನು ಸ್ವಯಂಚಾಲಿತವಾಗಿ ಇದನ್ನು ಆಧರಿಸಿ ಅನರ್ಹ ಮಾಡಲಾಗದು. ಇದು ಆ ಚುನಾಯಿತ ಪ್ರತಿನಿಧಿಯ ವಾಕ್‌ ಸ್ವಾತಂತ್ರ್ಯ ಕಸಿಯುತ್ತದೆ’ ಎಂದಿದ್ದಾರೆ.

ಇದನ್ನು ಓದಿ: ಕರ್ನಾಟಕ ಗೆದ್ದು ರಾಹುಲ್‌ ಅನರ್ಹತೆಗೆ ಉತ್ತರ ನೀಡೋಣ: ಸಾಮೂಹಿಕ ರಾಜೀನಾಮೆಗೆ ಮುಂದಾದ ಸಂಸದರಿಗೆ ಪ್ರಿಯಾಂಕಾ ಸಲಹೆ

ಅಲ್ಲದೆ, ‘2013ರಲ್ಲಿ ಲಿಲ್ಲಿ ಥಾಮಸ್‌ ಪ್ರಕರಣದಲ್ಲಿ ಅನರ್ಹತೆ ಬಗ್ಗೆ ಸುಪ್ರೀಂ ಕೋರ್ಚ್‌ ನೀಡಿದ ಆದೇಶದ ಮರು ಪರಿಶೀಲನೆಯ ಅಗತ್ಯವಿದೆ. ಏಕೆಂದರೆ ವೈಯಕ್ತಿಕ ಸೇಡು ತೀರಿಸಿಕೊಳ್ಳಲು ಲಿಲ್ಲಿ ಥಾಮಸ್‌ ಪ್ರಕರಣವನ್ನು ಸ್ಪಷ್ಟವಾಗಿ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಇದು ಜನರ ಪ್ರಾತಿನಿಧ್ಯದ ಹಕ್ಕನ್ನೂ ಕಸಿಯುತ್ತದೆ’ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಕೈ ನಾಯಕನಿಗೆ ಶಾಕ್: ರಾಹುಲ್‌ ಗಾಂಧಿ ಮನೆಗೆ ದೌಡಾಯಿಸಿದ ದೆಹಲಿ ಪೊಲೀಸರು..!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live:ಇಂಡಿಗೋ ಏರ್‌ಲೈನ್ಸ್ ಸಮಸ್ಯೆ ತನಿಖೆಗೆ 4 ಸದಸ್ಯರ ತಂಡ ರಚಿಸಿದ ಕೇಂದ್ರ ಸರ್ಕಾರ
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌