ನೀವ್ಯಾರೂ ಹೆದರಬೇಕಿಲ್ಲ: ಈಶಾನ್ಯ ಜನತೆಗೆ ಮೋದಿ ಭರವಸೆ!

Suvarna News   | Asianet News
Published : Dec 12, 2019, 12:20 PM IST
ನೀವ್ಯಾರೂ ಹೆದರಬೇಕಿಲ್ಲ: ಈಶಾನ್ಯ ಜನತೆಗೆ ಮೋದಿ ಭರವಸೆ!

ಸಾರಾಂಶ

CAB ಮಸೂದೆ ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಭಾರೀ ಪ್ರತಿಭಟನೆ| ಪ್ರತಿಭಟನಾಕಾರರ ಹಿಂಸಾಚಾರಕ್ಕೆ ತತ್ತರಿಸಿದ ಈಶಾನ್ಯ ಭಾರತ| ಪ್ರತಿಭಟನೆ ಕೈಬಿಡುವಂತೆ ಈಶಾನ್ಯ ರಾಜ್ಯಗಳ ಜನೆತೆಗೆ ಪ್ರಧಾನಿ ಮೋದಿ ಮನವಿ| ನಿಮ್ಮ ಹಕ್ಕುಗಳನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ ಎಂದ ಪ್ರಧಾನಿ ಮೋದಿ| ಈಶಾನ್ಯ ರಾಜ್ಯಗಳೊಂದಿಗೆ ಕೇಂದ್ರ ಸರ್ಕಾರ ಗಟ್ಟಿಯಾಗಿ ನಿಂತಿದೆ ಎಂದ ಪ್ರಧಾನಿ|

ನವದೆಹಲಿ(ಡಿ.12): ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಹಿಂಸಾಚಾರ ಭುಗಿಲೆದ್ದಿದೆ. 

ಈ ಕುರಿತು ಮೌನ ಮುರಿದಿರುವ ಪ್ರಧಾನಿ ಮೋದಿ, ನಿಮ್ಮ ಹಕ್ಕು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಈಶಾನ್ಯ ರಾಜ್ಯಗಳ ಜನೆತೆಗೆ ಭರವಸೆ ನೀಡಿದ್ದಾರೆ.

ಶಾ ಎದುರಲ್ಲೇ CAB ಪ್ರತಿ ಹರಿದು ವಿವಾದ ಸೃಷ್ಟಿಸಿದ ಒವೈಸಿ!

 ಸರಣಿ ಟ್ವೀಟ್’ಗಳ ಮೂಲಕ ಈಶಾನ್ಯ ರಾಜ್ಯಗಳ ಜನತೆಯನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋದಿ, ಪ್ರತಿಭಟನೆಯನ್ನು ಕೈಬಿಟ್ಟು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಅಮಿತ್ ಶಾ CAB: ವಾಷಿಂಗ್ಟನ್ ಟು ದಿಲ್ಲಿ, ಪಿಕ್ಚರ್ ಅಬಿ ಬಾಕಿ ಹೈ....!

ನಿಮ್ಮ ಅನನ್ಯ ಗುರುತು ಹಾಗೂ ಸುಂದರ ಸಂಸ್ಕೃತಿಯನ್ನು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ. ಪೌರತ್ವ ಮಸೂದೆ ಕುರಿತಂತೆ ಅನಗತ್ಯ ಭಯಬೇಡ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

’‘‘ಈಶಾನ್ಯ ರಾಜ್ಯಗಳ ರಾಜಕೀಯ, ಭಾಷೆ, ಸಾಂಸ್ಕೃತಿಕ ಹಾಗೂ ಭೂ ಹಕ್ಕುಗಳನ್ನು ಸಾಂವಿಧಾನಿಕವಾಗಿ ರಕ್ಷಿಸಲು ಕೇಂದ್ರ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಅಸ್ಸಾಂ ಮತ್ತು ಈಶಾನ್ಯ ಭಾರತದ ನನ್ನ ಸಹೋದರ-ಸಹೋದರಿಯರಿಗೆ ನಾನು ಭರವಸೆ ನೀಡುತ್ತೇನೆ’..ಎಂದು ಮೋದಿ ಟ್ವಿಟ್ ಮಾಡಿದ್ದಾರೆ.

CAB ಅಪಾಯಕಾರಿ: ಮಸೂದೆ ವಿರೋಧಿಸಿ ಕೆಲಸ ಬಿಟ್ಟ ಐಪಿಎಸ್ ಅಧಿಕಾರಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬ್ಯಾಗಲ್ಲಿ ಹೃದಯ ಇಟ್ಕೊಂಡು ಓಡಾಟ: ನೈಸರ್ಗಿಕ ಹೃದಯ ಇಲ್ಲದೇ ಬದುಕುಳಿದಿರುವ ಜಗತ್ತಿನ ಏಕೈಕ ಮಹಿಳೆ ಈಕೆ
ಕೇವಲ 2 ನಿಮಿಷ ಮಗಳ ನೋಡಲು 11ಗಂಟೆಗೆ ಸ್ಟೇಶನ್‌ಗೆ ಬಂದ ತಂದೆ, ಭಾವುಕ ಕ್ಷಣದ ವಿಡಿಯೋ