ನೀವ್ಯಾರೂ ಹೆದರಬೇಕಿಲ್ಲ: ಈಶಾನ್ಯ ಜನತೆಗೆ ಮೋದಿ ಭರವಸೆ!

By Suvarna NewsFirst Published Dec 12, 2019, 12:20 PM IST
Highlights

CAB ಮಸೂದೆ ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಭಾರೀ ಪ್ರತಿಭಟನೆ| ಪ್ರತಿಭಟನಾಕಾರರ ಹಿಂಸಾಚಾರಕ್ಕೆ ತತ್ತರಿಸಿದ ಈಶಾನ್ಯ ಭಾರತ| ಪ್ರತಿಭಟನೆ ಕೈಬಿಡುವಂತೆ ಈಶಾನ್ಯ ರಾಜ್ಯಗಳ ಜನೆತೆಗೆ ಪ್ರಧಾನಿ ಮೋದಿ ಮನವಿ| ನಿಮ್ಮ ಹಕ್ಕುಗಳನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ ಎಂದ ಪ್ರಧಾನಿ ಮೋದಿ| ಈಶಾನ್ಯ ರಾಜ್ಯಗಳೊಂದಿಗೆ ಕೇಂದ್ರ ಸರ್ಕಾರ ಗಟ್ಟಿಯಾಗಿ ನಿಂತಿದೆ ಎಂದ ಪ್ರಧಾನಿ|

ನವದೆಹಲಿ(ಡಿ.12): ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಹಿಂಸಾಚಾರ ಭುಗಿಲೆದ್ದಿದೆ. 

ಈ ಕುರಿತು ಮೌನ ಮುರಿದಿರುವ ಪ್ರಧಾನಿ ಮೋದಿ, ನಿಮ್ಮ ಹಕ್ಕು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಈಶಾನ್ಯ ರಾಜ್ಯಗಳ ಜನೆತೆಗೆ ಭರವಸೆ ನೀಡಿದ್ದಾರೆ.

ಶಾ ಎದುರಲ್ಲೇ CAB ಪ್ರತಿ ಹರಿದು ವಿವಾದ ಸೃಷ್ಟಿಸಿದ ಒವೈಸಿ!

I want to assure my brothers and sisters of Assam that they have nothing to worry after the passing of .

I want to assure them- no one can take away your rights, unique identity and beautiful culture. It will continue to flourish and grow.

— Narendra Modi (@narendramodi)

 ಸರಣಿ ಟ್ವೀಟ್’ಗಳ ಮೂಲಕ ಈಶಾನ್ಯ ರಾಜ್ಯಗಳ ಜನತೆಯನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋದಿ, ಪ್ರತಿಭಟನೆಯನ್ನು ಕೈಬಿಟ್ಟು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಅಮಿತ್ ಶಾ CAB: ವಾಷಿಂಗ್ಟನ್ ಟು ದಿಲ್ಲಿ, ಪಿಕ್ಚರ್ ಅಬಿ ಬಾಕಿ ಹೈ....!

ನಿಮ್ಮ ಅನನ್ಯ ಗುರುತು ಹಾಗೂ ಸುಂದರ ಸಂಸ್ಕೃತಿಯನ್ನು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ. ಪೌರತ್ವ ಮಸೂದೆ ಕುರಿತಂತೆ ಅನಗತ್ಯ ಭಯಬೇಡ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

The Central Government and I are totally committed to constitutionally safeguard the political, linguistic, cultural and land rights of the Assamese people as per the spirit of Clause 6.

— Narendra Modi (@narendramodi)

’‘‘ಈಶಾನ್ಯ ರಾಜ್ಯಗಳ ರಾಜಕೀಯ, ಭಾಷೆ, ಸಾಂಸ್ಕೃತಿಕ ಹಾಗೂ ಭೂ ಹಕ್ಕುಗಳನ್ನು ಸಾಂವಿಧಾನಿಕವಾಗಿ ರಕ್ಷಿಸಲು ಕೇಂದ್ರ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಅಸ್ಸಾಂ ಮತ್ತು ಈಶಾನ್ಯ ಭಾರತದ ನನ್ನ ಸಹೋದರ-ಸಹೋದರಿಯರಿಗೆ ನಾನು ಭರವಸೆ ನೀಡುತ್ತೇನೆ’..ಎಂದು ಮೋದಿ ಟ್ವಿಟ್ ಮಾಡಿದ್ದಾರೆ.

CAB ಅಪಾಯಕಾರಿ: ಮಸೂದೆ ವಿರೋಧಿಸಿ ಕೆಲಸ ಬಿಟ್ಟ ಐಪಿಎಸ್ ಅಧಿಕಾರಿ!

click me!