
ನವದೆಹಲಿ(ಮೇ.03): ದೇಶಾದ್ಯಂತ ಆವರಿಸಿರುವ ಕೊರೋನಾ ಮಹಾಮಾರಿ ಹಿಮ್ಮೆಟ್ಟಿಸಲು, ಮತ್ತೊಮ್ಮೆ ದೇಶವನ್ನು ಸೋಂಕು ಮುಕ್ತಗೊಳಿಸುವ ನಿಟ್ಟಿನಲ್ಲಿ ವೈದ್ಯರು, ದಾದಿಯರು, ಆರೋಗ್ಯ ಸಿಬ್ಬಂದಿ ಹಗಲಿರುಳೆನ್ನದೇ ಶ್ರಮಿಸುತ್ತಿದ್ದಾರೆ. ಪ್ರತಿಯೊಬ್ಬ ಸೋಂಕಿತನ ಪ್ರಾಣ ಉಳಿಸುವ ನಿಟ್ಟಿನಲ್ಲಿ ತಮ್ಮ ಇಷ್ಟ-ಕಷ್ಟ ಬದಿಗಿಟ್ಟು ಸೇವೆ ಮಾಡುತ್ತಿದ್ದಾರೆ. ಹೀಗಿದ್ದರೂ ಸದ್ಯ ದೇಶ ಆರೀಓಗ್ಯ ಸಿಬ್ಬಂದಿ ಕೊರತೆ ಎದುರಿಸುತ್ತಿದೆ. ಹೀಗಿರುವಾಗ ಈ ಕೊರತೆ ನೀಗಿಸುವ ನಿಟ್ಟಿನಲ್ಲಿ ಮೋದಿ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಕೇಂದ್ರದ ಈ ನಿರ್ಧಾರ ಕೊರೋನಾ ವಾರಿಯರ್ಗಳಿಗೆ ಭರವಸೆಯ ಬಬೆಳಗಾಗಲಿದೆ.
ಕೊರೋನಾ ಸಾಂಕ್ರಾಮಿಕವನ್ನು ನಿಭಾಸಲು ಮಾನವ ಸಂಪನ್ಮೂಲದ ಲಭ್ಯತೆಯ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಇಂದು, ಸೋಮವಾರ ಸಭೆ ನಡೆಸಿದ್ದಾರೆ. ಈ ಕುರಿತಾಗಿಉ ಚರ್ಚೆ, ಪರಿಈಲನೆ ನಡೆಸಿದ ಬಳಿಕ ಆರೋಗ್ಯ ಸಿಬ್ಬಂದಿ ಕೊರತೆ ನಿವಾರಿಸಲು ಸರ್ಕಾರ ಕೆಲ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಸಭೆಯಲ್ಲಿ ತೆಗೆದುಕೊಂಡ ಕ್ರಮಗಳು ಹೀಗಿವೆ.
ಮೋದಿ ಸಭೆಯಲ್ಲಿ ಮಹತ್ವದ ನಿರ್ಧಾರ
* ಸದ್ಯದ ಪರಿಸ್ಥಿತಿಯಲ್ಲಿ ನೀಟ್-ಪಿಜಿ ಪರೀಕ್ಷೆಗಳನ್ನು ಕನಿಷ್ಟ ನಾಲ್ಕು ತಿಂಗಳು ಮುಂದೂಡೇಕು. ಹೀಗಾಗಿ ಈ ಪರೀಕ್ಷೆಗಳು 2021 ಆಗಸ್ಟ್ 31ರ ಮೊದಲು ನಡೆಸುವುದಿಲ್ಲ ಹಾಗೂ ಪರೀಕ್ಷೆಗೂ ಒಂದು ತಿಂಗಳು ಮೊದಲೇ ದಿನಾಂಕ ಘೋಷಿಸಲಾಗುತ್ತದೆ. ಇದರಿಂದ ಕರ್ತವ್ಯ ನಿರ್ವಹಿಸಲು ಸರ್ಹರಾದ ವೈದ್ಯರು ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಿಡುವಂತಾಗುಇತ್ತದೆ.
* ವೈದ್ಯಕೀಯ ಕ್ಷೇತ್ರದಲ್ಲಿ ಇಂಟರ್ನಿಯಾಗಿರುವ ವಿದ್ಯಾರ್ಥಿಗಳು ಅವರ ಅಧ್ಯಾಪಕರ ಮೇಲ್ವಿಚಾರಣೆಯಲ್ಲಿ ಕೋರೋನಾ ಸಂಬಂಧಿ ಸೇವೆಗೆ ನಿಯೋಜಿಸಲು ನಿರ್ಧರಿಸಲಾಗಿದೆ. ಇದು ಇಂಟರ್ನ್ಶಿಪ್ನ ಒಂದು ಭಾಗವಾಗಿ ಪರಿಗಣಿಸಲಾಗುತ್ತದೆ.
"
* ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಟೆಲಿ ಕನ್ಸಲ್ಟೇಷನ್ ಹಾಗೂ ಕಡಿಮೆ ಲಕ್ಷಣಗಳನ್ನು ಹೊಂದಿರುವ ಕೊರೋನಾ ಪೀಡಿತರಿಗೆ ಅಧ್ಯಾಪಕರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲು ನೇಮಿಸಲಾಗುತ್ತದೆ. ಇದು ಸದ್ಯ ಸೇವೆ ಸಲ್ಲಿಸುತ್ತಿರುವ ವೈದ್ಯರ ಕೆಲಸದ ಒತ್ತಡವನ್ನು ಕಡಿಮೆಗೊಳಿಸಲಿದೆ,
* ಇನ್ನು ಅಂತಿಮ ವರ್ಷದ ಪಿಜಿ ವಿದ್ಯಾರ್ಥಿಗಳ ಸೇವೆಯನ್ನೂ ಇಲ್ಲಿ ಬಳಸಿಕೊಳ್ಳುವುದು.
* B.Sc./GNM ಅರ್ಹತೆ ಹೊಂದಿರುವ ದಾದಿಯರನ್ನು ಹಿರಿಯ ವೈದ್ಯರ ಮೇಲ್ವಿಚಾರಣೆಯಲ್ಲಿ ಫುಲ್ ಟೈಂ ಕೊರೋನಾ ಸಂಬಂಧಿ ಸೇವೆಗಳಿಗೆ ಬಳಸಿಕೊಳ್ಳುವುದು.
* ಕೋವಿಡ್ ನಿರ್ವಹಣೆಯಲ್ಲಿ ಸೇವೆಗ ಒದಗಿಸುವ, ಕನಿಷ್ಠ 100 ದಿನಗಳ ಕೋವಿಡ್ ಕರ್ತವ್ಯ ಪೂರ್ಣಗೊಳಿಸಿದ ಸಿಬ್ಬಂದಿಗೆ ಮುಂದಿನ ಸರ್ಕಾರಿ ನೇಮಕಾತಿಗಳಲ್ಲಿ ಆದ್ಯತೆ ನೀಡಲಾಗುತ್ತದೆ.
* ಕೋವಿಡ್ ಸಂಬಂಧಿತ ಕೆಲಸದಲ್ಲಿ ತೊಡಗಿಸಿಕೊಳ್ಳಲು ಬಯಸುವ ವೈದ್ಯಕೀಯ ವಿದ್ಯಾರ್ಥಿಗಳು / ವೃತ್ತಿಪರರಿಗೆ ಲಸಿಕೆ ನೀಡುವುದು. ಹೀಗೆ ಕೊರೋನಾ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವ ಎಲ್ಲಾ ಆರೋಗ್ಯ ಕಾರ್ಯಕರ್ತರು ಸರ್ಕಾರದ ವಿಮಾ ಯೋಜನೆಯಡಿ ಒಳಪಡುತ್ತಾರೆ.
* ಕನಿಷ್ಠ 100 ದಿನಗಳ ಕೋವಿಡ್ ಕರ್ತವ್ಯ ಮಾಡುವುದಾಗಿ ಒಪ್ಪಂದ ಮಾಡುವ ಹಾಗೂ ಪೂರ್ಣಗೊಳಿಸುವ ಎಲ್ಲಾ ಆರೋಗ್ಯ ಸಿಬ್ಬಂದಿಗೆ ಭಾರತ ಸರ್ಕಾರದಿಂದ ಪ್ರಧಾನ ಮಂತ್ರಿಯ ಡಿಸ್ಟಿಂಗ್ವಿಶ್ಡ್ ಕೋವಿಡ್ ನ್ಯಾಷನಲ್ ಸರ್ವಿಸ್ ಎಂಬ ಸನ್ಮಾನ ನೀಡಿ ಗೌರವಿಸಲಾಗುತ್ತದೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ