
ನವದೆಹಲಿ(ಜೂ.28): ಕೊರೋನಾ ನಿಯಂತ್ರಣಕ್ಕೆ ಹಲವು ಕ್ರಮಗಳ ಹೊರತಾಗಿ ದೇಶದಲ್ಲಿ ಸೋಂಕಿತರ ಸಂಖ್ಯೆ 5 ಲಕ್ಷ ದಾಟಿದ ಬೆನ್ನಲ್ಲೇ, ವೈರಸ್ ನಿಯಂತ್ರಿಸಲಾಗದೆ ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾಕ್ಕೆ ಶರಣಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಾರ್ಮಿಕವಾಗಿ ನುಡಿದಿದ್ದಾರೆ.
ಆತ್ಮನಿರ್ಭರ ಭಾರತವೇ ಹುತಾತ್ಮರಿಗೆ ನಾವು ಸಲ್ಲಿಸುವ ಗೌರವ: ಮೋದಿ ಮನ್ ಕೀ ಬಾತ್
ಈ ಬಗ್ಗೆ ಶನಿವಾರ ಟ್ವೀಟ್ ಮಾಡಿದ ರಾಹುಲ್, ‘ದೇಶದ ಹಲವು ಭಾಗಗಳಿಗೆ ಕೋವಿಡ್-19 ವ್ಯಾಪಕವಾಗಿ ಹಬ್ಬುತ್ತಿದೆ. ಆದರೆ, ಭಾರತ ಸರ್ಕಾರದ ಬಳಿ ಸೋಂಕು ನಿಯಂತ್ರಣಕ್ಕೆ ಯಾವುದೇ ಯೋಜನೆಗಳಿಲ್ಲ. ಪ್ರಧಾನಿ ಕೈಕಟ್ಟಿಕುಳಿತಿದ್ದಾರೆ. ಈ ಯುದ್ಧದಲ್ಲಿ ಸೋಲು ಒಪ್ಪಿಕೊಂಡಿರುವ ಮೋದಿ ಅವರು ಸಾಂಕ್ರಮಿಕ ರೋಗದ ವಿರುದ್ಧದ ಹೋರಾಟದಿಂದ ಹಿಂದೆ ಸರಿದಿದ್ದಾರೆ’ ಎಂದು ಜರೆದಿದ್ದಾರೆ.
ಅಲ್ಲದೆ, ಕೊರೋನಾ ನಿಯಂತ್ರಣಕ್ಕಾಗಿ ಐಸಿಎಂಆರ್ ಹಾಗೂ ಕೇಂದ್ರ ಸರ್ಕಾರ ಕಳೆದ ಎರಡು ವಾರಗಳಿಂದ ಯಾವುದೇ ಚರ್ಚೆ ನಡೆಸುತ್ತಿಲ್ಲ ಎಂಬ ಸುದ್ದಿ ಸಂಸ್ಥೆಯೊಂದರ ವರದಿಯೊಂದನ್ನು ತಮ್ಮ ಟ್ವೀಟ್ನಲ್ಲಿ ರಾಹುಲ್ ಲಗತ್ತಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ