
ನವದೆಹಲಿ(ಆ.10): ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೀಯ ಪಿಎಂ ಕಿಸಾನ್ ಯೋಜನೆಯ ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ 9.75 ಕೋಟಿ ರೈತರಿಗೆ 19,500 ಕೋಟಿ ರು. ಹಣವನ್ನು ಸೋಮವಾರ ವರ್ಗಾವಣೆ ಮಾಡಿದರು.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಫಲಾನುಭವಿ ರೈತರ ಖಾತೆಗೆ ಪ್ರತಿ ಕಂತಿನಲ್ಲಿ 2 ಸಾವಿರ ರು.ನಂತೆ ಮೂರು ಕಂತಿನಲ್ಲಿ ವಾರ್ಷಿಕ 6000 ರು.ಗಳನ್ನು ಬಿಡುಗಡೆ ಮಾಡುತ್ತಿದೆ. ಸೋಮವಾರ ಆಯೋಜಿಸಿದ್ದ ವರ್ಚುವಲ್ ಕಾರ್ಯಕ್ರಮದ ವೇಳೆ 9ನೇ ಕಂತಿನ ಹಣವನ್ನು ನರೇಂದ್ರ ಮೋದಿ ಅವರು ಫಲಾನುಭವಿಗಳಿಗೆ ಬಿಡುಗಡೆ ಮಾಡಿದರು. ಈ ಮೂಲಕ ಸರ್ಕಾರ ಇದುವರೆಗೆ ರೈತರ ಖಾತೆಗಳಿಗೆ 1.57 ಲಕ್ಷ ಕೋಟಿ ರು.ಗಳನ್ನು ವರ್ಗಾವಣೆ ಮಾಡಿದೆ.
2019ರ ಫೆಬ್ರವರಿಯಲ್ಲಿ ಕೇಂದ್ರ ಸರ್ಕಾರ ಪಿಎಂ ಕಿಸಾನ್ ಯೋಜನೆಯನ್ನು ಪ್ರಕಟಿಸಿತ್ತು. ನೇರವಾಗಿ ರೈತರ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ