
ನವದೆಹಲಿ(ಎ.05): ಕೊರೋನಾ ವೈರಸ್ ಇದೀಗ ಭಾರತದ ಲೆಕ್ಕಾಚಾರವನ್ನೇ ಬುಡಮೇಲು ಮಾಡಿದೆ. ಲಸಿಕೆ ಅಭಿಯಾನ ಚುರುಗೊಳ್ಳುತ್ತಿದ್ದಂತೆ, ಮತ್ತೊಂದೆಡೆಯಿಂದ ಕೊರೋನಾ ಅಬ್ಬರ ಕೂಡ ಆರಂಭಗೊಂಡಿದೆ. ಇದೀಗ ಭಾರತದಲ್ಲಿ 90 ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗಿದೆ. ಉನ್ನತ ಮಟ್ಟದ ಸಭೆ ನಡೆಸಿದ ಮೋದಿ, 3 ರಾಜ್ಯಗಳಿಗೆ ತಜ್ಞರ ತಂಡ ಕಳುಹಿಸಿದ್ದಾರೆ.
ಕೊರೋನಾ ನಿಯಂತ್ರಣಕ್ಕೆ ವೀಕೆಂಡ್ ಲಾಕ್ಡೌನ್ ಘೋಷಿಸಿದ ಮಹಾರಾಷ್ಟ್ರ ಸಿಎಂ!
ಮಹಾರಾಷ್ಟ್ರ, ಪಂಜಾಬ್ ಹಾಗೂ ಚತ್ತೀಸಘಡ ರಾಜ್ಯಗಳಿಗೆ ತಂಡವನ್ನು ಕಳುಹಿಸಲು ನಿರ್ಧರಿಸಲಾಗಿದೆ. ಈ ಮೂರು ರಾಜ್ಯಗಳಲ್ಲಿ ಕೊರೋನಾ ಅತೀಯಾಗಿ ಹರಡುತ್ತಿದೆ. ಇನ್ನು ಕರ್ನಾಟಕದಲ್ಲೂ ಕೊರೋನಾ ಅಬ್ಬರ ಆರಂಭಗೊಂಡಿದ್ದು, ಪರಿಸ್ಥಿತಿ ಹೀಗೆ ಮುಂದುವರಿದರೆ, ಕಟ್ಟು ನಿಟ್ಟಿನ ಕ್ರಮ ಜಾರಿಯಾಗಲಿದೆ.
ಕೇಂದ್ರದ ತಂಡ 3 ರಾಜ್ಯದಲ್ಲಿನ ಪರಿಸ್ಥಿತಿ ಅವಲೋಕಿಸಿ ವರದಿ ನೀಡಲಿದೆ. ಕೊರೋನಾ ನಿಯಂತ್ರಕ್ಕೆ ಸರ್ಕಾರ ತೆಗೆದುಕೊಂಡ ಕ್ರಮಗಳು, ಆಸ್ಪತ್ರೆ, ಬೆಡ್, ಚಿಕಿತ್ಸೆ, ಮಾರ್ಗಸೂಚಿ ಪಾಲನೆ ಸೇರಿದಂತೆ ಎಲ್ಲಾ ಮಾಹಿತಿಗಳನ್ನು ಕಲೆಹಾಕಿ ಕೇಂದ್ರಕ್ಕೆ ವರದಿ ನೀಡಲಿದೆ.
ಶೇಕಡಾ 100 ರಷ್ಟು ಮಾಸ್ಕ್ ಬಳಕೆ, ಶುಚಿತ್ವ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಜಾಗೃತಿ ಮೂಡಿಸುವುದು, ಮಾರ್ಗಸೂಚಿಗಳ ಪಾಲನೆಗೆ ಪ್ರಾಶಸ್ತ್ಯ ನೀಡುವುದು ಸೇರಿದಂತೆ ಹಲವು ಸೂಚನೆಗಳನ್ನು ಕೇಂದ್ರ ಸರ್ಕಾರ ನೀಡಿದೆ. ಎಪ್ರಿಲ್ 6 ರಿಂದ 14ರ ವರೆಗೆ ಕೋವಿಡ್ ಜಾಗೃತಿ ಅಭಿಯಾನ ಕೂಡ ಆಯೋಜಿಸಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ