
ನವದೆಹಲಿ(ಮೇ.13): ಕೊರೋನಾ ಅಬ್ಬರದಿಂದಾಗಿ ದೇಶದಲ್ಲಿ ವಿಷಮ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಿದ್ದರೂ ಇಂತಹ ಸಮಯದಲ್ಲಿ ಒಗ್ಗಟ್ಟು ಪ್ರದರ್ಶಿಸಿ ಮಾದರಿಯಾಗಬೇಕಿದ್ದ ಜನನಾಯಕರು, ಕಿತ್ತಾಡುವಲ್ಲಿ ತಲ್ಲೀನರಾಗಿದ್ದಾರೆ. ಸದ್ಯ ಕೊರೋನಾ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಿಎಂ ಮೋದಿ ವಿರುದ್ಧ ಕಿಡಿ ಕಾರಿದ್ದು, ಕೊರೋನಾ ಕಾಲದಲ್ಲಿ ಆಕ್ಸಿಜನ್, ಲಸಿಕೆ ಮತ್ತು ಔಷಧಗಳ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯೂ ಮಾಯವಾಗಿದ್ದಾರೆ ಎಂದಿದ್ದಾರೆ.
ಕೊರೋನಾ ಮಧ್ಯೆ ರೈತರಿಗೆ ಗುಡ್ ನ್ಯೂಸ್: PM-KISAN ನಿಧಿ ಬಿಡುಗಡೆ, ಹೀಗೆ ಚೆಕ್ ಮಾಡಿ!
ಹೌದು ಇಂತಹುದ್ದೊಂದು ಆರೋಪ ಮಾಡಿರುವ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಕಾಣಿಸಿಕೊಳ್ಳುತ್ತಿಲ್ಲ. ಸೆಂಟ್ರಲ್ ವಿಸ್ತಾ ಯೋಜನೆ, ಔಷಧಿಗಳ ಮೇಲಿನ ಜಿಎಸ್ಟಿ ಮತ್ತು ಮೋದಿಯವರ ಫೋಟೋಗಳು ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿವೆ ಎಂದು ಆರೋಪಿಸಿದ್ದಾರೆ. ಇನ್ನು ರಾಹುಲ್ ಗಾಂಧಿ ಆರಂಭದಿಂದಲೂ ಸರ್ಕಾರ ಕೊರೋನಾ ಪರಿಸ್ಥಿತಿಯನ್ನು ನಿರ್ವಹಿಸುತ್ತಿರುವ ಬಗ್ಗೆ ಕಿಡಿ ಕಾರುತ್ತಲೇ ಇದ್ದಾರೆ ಎಂಬುವುದು ಉಲ್ಲೇಖನೀಯ.
'ರಾಹುಲ್ ವರ್ತನೆ ಕ್ಷುಲ್ಲಕ ಎಂದೇ ಇತಿಹಾಸದಲ್ಲಿ ದಾಖಲಾಗುತ್ತದೆ' ಸೋನಿಯಾಗೆ ತಿಳಿಸಿದ ನಡ್ಡಾ
ಇನ್ನು ಗಂಗಾ ನದಿಯಲ್ಲಿ ಶವಗಳು ತೇಲಿ ಬರುತ್ತಿರುವ ವಿಚಾರವಾಗಿ ಸರ್ಕಾರದ ವಿರುದ್ಧ ಕಿಡಿ ಕಾರಿದ ಕಾಂಗ್ರೆಸ್ ಮುಖ್ಯ ವಕ್ತಾರ ರಣ್ದೀಪ್ ಸುರ್ಜೇವಾಲಾ 'ಈ ನವಭಾರದಲ್ಲಿ ನದಿಗಳಲ್ಲಿ ಶವಗಳು ತೇಲಿ ಬರುತ್ತಿದ್ದರೂ ಸರ್ಕಾರದ ಕಣ್ಣಿಗೆ ಕಾಣಿಸುತ್ತಿಲ್ಲ' ಎಂದು ಟ್ವೀಟ್ ಮಾಡಿದ್ದಾರೆ. ಇದರೊಂದಿದೆ ಈ ಕುರಿತಾಗಿ ಪ್ರಸಾರವಾದ ವರದಿಯನ್ನೂ ಶೇರ್ ಮಾಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ