
ನವದೆಹಲಿ(ಜು.18): ಭಾರತೀಯ ಸೇನೆಯಲ್ಲಿ ಆತ್ಮನಿರ್ಭರ ಭಾರತ ಈಗಿನ ಕಾಲಕ್ಕೆ ಅತ್ಯಂತ ಅವಶ್ಯಕ ಹಾಗೂ ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಭಾರತೀಯ ನೌಕಾಪಡ ಸ್ವಾವಲಂಬನ್ ಸೆಮಿನಾರ್ ಆಯೋಜಿಸವ ಮೂಲಕ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಮೋದಿ ಹೇಳಿದ್ದಾರೆ. ನೌಕಾ ಸೇನೆಯಲ್ಲಿ ಎರಡು ರಾಷ್ಟ್ರಗಳು ಅಥವಾ ಹೆಚ್ಚಿನ ರಾಷ್ಟ್ರಗಳು ಜಂಟಿ ಅಭ್ಯಾಸ ನಡೆಸುವುದು ಸಾಮಾನ್ಯವಾಗಿದೆ. ಇದೀಗ ನೌಕಾಪಡೆಯಲ್ಲಿ ಸ್ವಾವಲಂಬನ್ ಕೂಡ ಒಂದು ರೀತಿಯಲ್ಲಿ ಜಾಯಿಂಟ್ ಎಕ್ಸೈಸ್ ಆಗಿದೆ ಎಂದು ಮೋದಿ ಹೇಳಿದ್ದಾರೆ. ರಕ್ಷಣಾ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡಲು ನೌಕಾ ಪಡೆ ಆಯೋಜಿಸಿದ ನೌಕಾ ಆವಿಷ್ಕಾರ ಮತ್ತು ಸ್ವದೇಶೀಕರಣದ ಸ್ವಾವಲಂಬನ್ ಸೆಮಿನಾರ್ ಉದ್ದೇಶಿ ಮೋದಿ ಮಾತನಾಡಿದರು. ದೆಹಲಿಯ ಡಾ. ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾರತೀಯ ನೌಕಾ ಸೇನಾ ಮುಖ್ಯಸ್ಥ ಅಡ್ಮಿರಲ್ ಆರ್ ಹರಿಕುಮಾರ್ ಸೇರಿದಂತೆ ಹಲವು ಸೇನಾಧಿಕಾರಿಗಳ ಉಪಸ್ಥಿತರಿದ್ದರು.
ಅಜಾದಿ ಕಾ ಅಮೃತಮಹೋತ್ಸವ ಸಂದರ್ಭದಲ್ಲಿ ಈ ರೀತಿಯ ಸ್ವಾವಲಂಬನ್ ಬಹುದೊಡ್ಡ ಯೋಜನೆ ನೌಕಾಪಡೆ ಕೈಗೆತ್ತಿಕೊಂಡಿರುವುದು ಮತ್ತಷ್ಟು ಉತ್ತೇಜನ ನೀಡಲಿದೆ. ನಮ್ಮ ಸಮುದ್ರದ ಗಡಿ ರಕ್ಷಣೆ ಅತ್ಯಂತ ಸವಾಲಿನಿಂದ ಕೂಡಿದೆ. ಹೀಗಾಗಿ ನೌಕಾಪಡೆ ಸಮಯಕ್ಕೆ ತಕ್ಕಂತೆ ಅಧುನಿಕತೆ, ಅತ್ಯಾಧುನಿಕ ನೌಕೆಗಳೊಂದಿಗೆ ಮೇಲ್ದರ್ಜೆಗೇರಬೇಕಾದ ಅನಿವಾರ್ಯತೆ ಇದೆ ಎಂದು ಮೋದಿ ಹೇಳಿದ್ದಾರೆ. ಸ್ವಾವಲಂಬಿಯಿಂದ ಭಾರತ ಹೆಚ್ಚು ಶಕ್ತಿಯುತವಾಗಲಿದೆ. ಇದರಿಂದ ಎಚ್ಚರಿಕೆ ಸಂದೇಶ ರವಾನೆಯಾಗಲಿದೆ ಎಂದು ಮೋದಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ