ಶಿಂಧೆ, ಅಜಿತ್ ಬಣ ಸೇರಿ: ಪವಾರ್, ಉದ್ಧವ್‌ಗೆ ಪ್ರಧಾನಿ ಮೋದಿ ಆಹ್ವಾನ

Published : May 11, 2024, 07:23 AM IST
ಶಿಂಧೆ, ಅಜಿತ್ ಬಣ ಸೇರಿ: ಪವಾರ್, ಉದ್ಧವ್‌ಗೆ ಪ್ರಧಾನಿ ಮೋದಿ ಆಹ್ವಾನ

ಸಾರಾಂಶ

‘ಕಾಂಗ್ರೆಸ್ ಪಕ್ಷದ ಜೊತೆಗೆ ವಿಲೀನಗೊಂಡು ‘ಸಾಯುವ ಬದಲು’ ಅಜಿತ್ ಪವಾರ್ ಮತ್ತು ಏಕನಾಥ್ ಶಿಂಧೆ ಅವರ ಎನ್‌ಸಿಪಿ ಹಾಗೂ ಶಿವಸೇನೆಗಳನ್ನು ಸೇರಿಕೊಳ್ಳುವಂತೆ, ಎನ್‌ಸಿಪಿ (ಎಸ್‌ಸಿಪಿ) ನಾಯಕ ಶರದ್ ಪವಾರ್ ಮತ್ತು ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.  

ನಂದೂರ್ಬಾರ್‌ (ಮಹಾರಾಷ್ಟ್ರ) (ಮೇ.11): ‘ಕಾಂಗ್ರೆಸ್ ಪಕ್ಷದ ಜೊತೆಗೆ ವಿಲೀನಗೊಂಡು ‘ಸಾಯುವ ಬದಲು’ ಅಜಿತ್ ಪವಾರ್ ಮತ್ತು ಏಕನಾಥ್ ಶಿಂಧೆ ಅವರ ಎನ್‌ಸಿಪಿ ಹಾಗೂ ಶಿವಸೇನೆಗಳನ್ನು ಸೇರಿಕೊಳ್ಳುವಂತೆ, ಎನ್‌ಸಿಪಿ (ಎಸ್‌ಸಿಪಿ) ನಾಯಕ ಶರದ್ ಪವಾರ್ ಮತ್ತು ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.

‘ಮುಂದಿನ ಎರಡು ವರ್ಷಗಳಲ್ಲಿ ಹಲವು ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್ ಜೊತೆಗೆ ನಿಕಟ ಸಂಬಂಧವನ್ನು ಹೊಂದಲಿವೆ. ಅಥವಾ ಅವರು ತಮ್ಮ ಪಕ್ಷಕ್ಕೆ ಉತ್ತಮ ಎಂದು ಭಾವಿಸಿದರೆ ಕಾಂಗ್ರೆಸ್ ಜೊತೆಗೆ ವಿಲೀನಗೊಳ್ಳುವ ಆಯ್ಕೆಯನ್ನು ಪರಿಶೀಲಿಸಬಹುದು’ ಎಂದು ಇತ್ತೀಚಿಗಷ್ಟೇ ಶರದ್ ಪವಾರ್ ಹೇಳಿಕೆ ನೀಡಿದ್ದರು. ಇದಕ್ಕೆ ಈಗ ಮೋದಿ ಪ್ರತಿಕ್ರಿಯಿಸಿದ್ದು, ಹೆಸರು ಹೇಳದೆಯೇ ಪರೋಕ್ಷವಾಗಿ ಶರದ್ ಪವಾರ್ ಮತ್ತು ಉದ್ದವ್ ಠಾಕ್ರೆಗೆ ಸಲಹೆ ನೀಡಿದ್ದಾರೆ.

ಮಹಾರಾಷ್ಟ್ರದ ನಂದೂರ್‌ಬಾರ್‌ನಲ್ಲಿ ಬಿಜೆಪಿ ಸಮಾವೇಶ ಉದ್ದೇಶಿಸಿ ಶುಕ್ರವಾರ ಮಾತನಾಡಿದ ಮೋದಿ, ‘40-50 ವರ್ಷಗಳಿಂದ ರಾಜಕೀಯದಲ್ಲಿ ತೊಡಗಿಕೊಂಡಿರುವ ನಾಯಕರೊಬ್ಬರು (ಶರದ್‌ ಪವಾರ್) ಬಾರಾಮತಿ ಕ್ಷೇತ್ರದ ಚುನಾವಣೆ ಬಳಿಕ ಚಿಂತಿತರಾಗಿದ್ದಾರೆ. ಸಣ್ಣ ರಾಜಕೀಯ ಪಕ್ಷಗಳು ಉಳಿಯಬೇಕೆಂದರೆ ಜೂನ್ 4ರ ಬಳಿಕ ಕಾಂಗ್ರೆಸ್ ಪಕ್ಷದ ಜೊತೆ ವಿಲೀನಗೊಳ್ಳಬೇಕೆಂದು ಹೇಳುತ್ತಾರೆ. ಇದರ ಅರ್ಥ ನಕಲಿ ಎನ್‌ಸಿಪಿ ಮತ್ತು ನಕಲಿ ಶಿವಸೇನೆ ಕಾಂಗ್ರೆಸ್ ಜೊತೆ ವಿಲೀನವಾಗುವುದಕ್ಕೆ ಸಿದ್ಧಗೊಂಡಿವೆ. ಕಾಂಗ್ರೆಸ್ ಜೊತೆ ಸೇರಿಕೊಂಡು ‘ಸಾಯುವ’ ಬದಲು ಅಜಿತ್ ಪವಾರ್ ಮತ್ತು ಏಕನಾಥ್ ಶಿಂಧೆ ಬಣವನ್ನು ಸೇರಿಕೊಳ್ಳಿ’ ಎಂದು ಪವಾರ್‌ ಹಾಗೂ ಉದ್ಧವ್‌ಗೆ ಚಾಟಿ ಬೀಸಿದರು.

ಪ್ರಧಾನಿ ಮೋದಿ- ರಾಹುಲ್ ಗಾಂಧಿ ಮುಖಾಮುಖಿ ಚರ್ಚೆಗೆ ಸಲಹೆ

ಕಾಂಗ್ರೆಸ್‌ ಹಿಂದೂ ವಿರೋಧಿ: ಕಾಂಗ್ರೆಸ್‌ ಪಕ್ಷ ಹಿಂದೂ ವಿರೋಧಿ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ನಂದೂರ್ಬಾರ್ ಹಾಗೂ ತೆಲಂಗಾಣದ ಕಡಪಾದಲ್ಲಿ ಬಿಜೆಪಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಮುಖಂಡ ಸ್ಯಾಮ್ ಪಿತ್ರೋಡಾ ರಾಮಮಂದಿರದ ಬಗ್ಗೆ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿ, ‘ಕಾಂಗ್ರೆಸ್ ಹಿಂದೂ ಧರ್ಮವನ್ನು ಕೊನೆಗಾಣಿಸಲು ಪಿತೂರಿ ನಡೆಸುತ್ತಿದೆ. ಕೃಷ್ಣನ ವರ್ಣದವರನ್ನು ಆಫ್ರಿಕನ್ನರು ಎಂದು ಕರೆಯುತ್ತಾರೆ. ರಾಮ ಮಂದಿರ ಮತ್ತು ರಾಮನವಮಿ ವಿಚಾರದಲ್ಲಿ ಕಾಂಗ್ರೆಸ್ ಅಜೆಂಡಾ ಅಪಾಯಕಾರಿಯಾಗಿದೆ. ಕಾಂಗ್ರೆಸ್ ಭಾರತ ವಿರೋಧಿ ಮನಸ್ಥಿತಿ ಹೊಂದಿದೆ. ಸರ್ಕಾರಿ ಇಫ್ತಾರ್‌ಗಳನ್ನು ಆಯೋಜಿಸುತ್ತಾರೆ. ಭಯೋತ್ಪಾದಕರ ಸಮಾಧಿಗಳನ್ನು ಅಲಂಕರಿಸುತ್ತಾರೆ’ ಎಂದು ಗುಡುಗಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂದು ರಾತ್ರಿ 8ರ ಒಳಗೆ ಟಿಕೆಟ್ ಮೊತ್ತ ಮರುಪಾವತಿಸಿ : ಇಂಡಿಗೋಗೆ ಕೇಂದ್ರ ಗಡುವು
India Latest News Live: ಆಯೋಧ್ಯೆಯ ಬಾಬ್ರಿ ಮಸೀದಿಯನ್ನೇ ಹೋಲುವಂತಹ ಮಸೀದಿಗೆ ಶಂಕು ಸ್ಥಾಪನೆ