ಮುಂದಿನ ಹಂತದಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳಿಗೆ ಲಸಿಕೆ?

Published : Jan 21, 2021, 06:21 PM ISTUpdated : Jan 21, 2021, 06:29 PM IST
ಮುಂದಿನ ಹಂತದಲ್ಲಿ  ಪ್ರಧಾನಿ, ಮುಖ್ಯಮಂತ್ರಿಗಳಿಗೆ ಲಸಿಕೆ?

ಸಾರಾಂಶ

ಭಾರತದಲ್ಲಿ ಕೊರೋನಾ ಲಸಿಕೆ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಫ್ರಂಟ್‌ಲೈನ್ ವರ್ಕಸ್‌ಗೆ ಲಸಿಕೆ ನೀಡಲಾಗುತ್ತಿದೆ. ಇದೀಗ ಮುಂದಿನ ಹಂತದಲ್ಲಿ ಯಾರಿಗೆ ಲಸಿಕೆ ನೀಡಲಾಗುತ್ತದೆ? ಈ ಕುರಿತ ಮಾಹಿತಿ ಬಹಿರಂಗವಾಗಿದೆ.  

ನವದೆಹಲಿ(ಜ.21): ವಿಶ್ವದ ಅತೀ ದೊಡ್ಡ ಕೊರೋನಾ ಲಸಿಕೆ ಅಭಿಯಾನ ಭಾರತದಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ ಈ ಲಸಿಕಾ ಅಭಿಯಾನ ಯಾವುದೇ ಅಡೆ ತಡೆ ಇಲ್ಲದೆ, ಹೆಚ್ಚಿನ ಆತಂಕಗಳಿಲ್ಲದೆ ನಡೆಯುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಕೊರೋನಾ ವಾರಿಯರ್ಸ್‌ಗೆ ಲಸಿಕೆ ನೀಡಲಾಗುತ್ತಿದೆ. ಇನ್ನು ಎರಡನೆ ಹಂತದಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳಿಗೆ ಲಸಿಕೆ ಸಿಗಲಿದೆ.

ಭೂತಾನ್‌, ಮಾಲ್ಡೀವ್ಸ್‌ಗೆ ಭಾರತದಿಂದ ಮೊದಲ ಕೊರೋನಾ ಲಸಿಕೆ ಪೂರೈಕೆ!

ಎರಡನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟ ಎಲ್ಲಾ ಸಚಿವರು, ಶಾಸಕರು, ಸಂಸದರು ಮುಖ್ಯಮಂತ್ರಿ, ಪ್ರಧಾನಿಗಳಿಗೆ ಲಸಿಕೆ ನೀಡಲಾಗುತ್ತದೆ ಎಂದು ಮೂಲಗಳು ಹೇಳಿವೆ. ಇಷ್ಟೇ ಅಲ್ಲ 50 ವರ್ಷಕ್ಕಿಂತ ಮೇಲ್ಪಟ್ಟು ಆರೋಗ್ಯ ಸಮಸ್ಯೆ  ಎದುರಿಸುತ್ತಿರುವ ವ್ಯಕ್ತಿಗಳಿಗೂ ಲಸಿಕೆ ನೀಡಲು ಕೇಂದ್ರ ತಯಾರಿ ಮಾಡಿಕೊಳ್ಳುತ್ತಿದೆ ಅನ್ನೋ ಮಾಹಿತಿ ಮೂಲಗಳು ಬಹಿರಂಗ ಪಡಿಸಿವೆ.

ಗರ್ಭಿಣಿಯರು ಹಾಗೂ ತಾಯಂದಿರಿಗೆ ಕೊರೋನಾ ಲಸಿಕೆ ಹಾಕಬಹುದಾ...?.

ಜನವರಿ 16 ರಂದು ಮೋದಿ ಲಸಿಕೆ ವಿತರಣೆಗೆ ಚಾಲನೆ ನೀಡಿದ್ದರು. ಇದುವರೆಗಿನ ಅಂಕಿ ಅಂಶಗಳ ಪ್ರಕಾರ, ಕರ್ನಾಟಕ ಲಸಿಕೆ ವಿತರಣೆಯಲ್ಲಿ ಮೊದಲ ಸ್ಥಾನದಲ್ಲಿದೆ. ಕೆಲ ರಾಜ್ಯಗಳಲ್ಲಿ ಲಸಿಕೆ ಪಡೆಯಲು ಹಿಂದೇಟು ಹಾಕಿದ ಘಟನೆಗಳು ನಡೆದಿದೆ. 

ಲಸಿಕೆ ಅಭಿಯಾನಕ್ಕೂ ಮೊದಲು ಎಲ್ಲಾ ಮುಖ್ಯಮಂತ್ರಿಗಳ ಜೊತೆ ಮೋದಿ ಸಭೆ ನಡೆಸಿದ್ದರು. ಈ ವೇಳೆ ನಿಮ್ಮ ಸರದಿ ಬರುವ ವರೆಗೂ ಕಾಯಬೇಕು. ಬದಲಾಗಿ ಕೊರೋನಾ ವಾರಿಯರ್ಸ್‌ಗೆ ಲಸಿಕೆ ನೀಡುವಾಗ ಮಂತ್ರಿಗಳು, ರಾಜಕಾರಣಿಗಳು ಲಸಿಕೆ ಪಡೆಯಬಾರದು ಎಂದು ಕಟ್ಟು ನಿಟ್ಟಾಗಿ ಹೇಳಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪೌರೋಹಿತ್ಯ ಮಾಡಿಕೊಂಡು ಹೆಂಡ್ತಿ ಕನಸಿಗೆ ಜೀವ ತುಂಬಿದ ಗಂಡನಿಗೆ ಡಿವೋರ್ಸ್ ಭಾಗ್ಯ ನೀಡಿದ ಸಬ್‌ ಇನ್ಸ್‌ಪೆಕ್ಟರ್‌
ಬೆದರಿಸಲು ಯಾರಪ್ಪಾ ನೀನು? ರಾಜ್ ಠಾಕ್ರೆಯ ರಸಮಲೈ ಟೀಕೆಗೆ ಕೆರಳಿದ ಅಣ್ಣಾಮಲೈ