'ಪ್ರಧಾನಿ ಮೋದಿಯಿಂದ ಭಾರತದ ಪರಿಕಲ್ಪನೆ ನಾಶ'

Published : Sep 30, 2021, 11:49 AM ISTUpdated : Sep 30, 2021, 12:14 PM IST
'ಪ್ರಧಾನಿ ಮೋದಿಯಿಂದ ಭಾರತದ ಪರಿಕಲ್ಪನೆ ನಾಶ'

ಸಾರಾಂಶ

* ಭಾರತವನ್ನು ತಾವೊಬ್ಬರೇ ಬಲ್ಲೆ ಎಂಬ ಅಹಂಕಾರ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ  * ಪ್ರಧಾನಿ ಮೋದಿಯಿಂದ ಭಾರತದ ಪರಿಕಲ್ಪನೆ ನಾಶ

ಮಲಪ್ಪುರಂ(ಸೆ.30): ಭಾರತವನ್ನು ತಾವೊಬ್ಬರೇ ಬಲ್ಲೆ ಎಂಬ ಅಹಂಕಾರ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರು ಈ ದೇಶದ ಜನರ ನಡುವಿನ ಸಂಬಂಧ ಮತ್ತು ಸಂಪರ್ಕವನ್ನು ಮುರಿಯುತ್ತಿದ್ದಾರೆ. ತನ್ಮೂಲಕ ಭಾರತದ ಪರಿಕಲ್ಪನೆಯನ್ನು ನಾಶ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಪ್ರಧಾನಿ(Rahul Gandhi) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ಡಯಾಲಿಸಿಸ್‌ ಕೇಂದ್ರ ಉದ್ಘಾಟಿಸಿ ಮಾತನಾಡಿದ ಸ್ಥಳೀಯ ಸಂಸದರೂ ಆಗಿರುವ ರಾಹುಲ್‌ ಗಾಂಧಿ(Rahul gandhi), ‘ವಿವಿಧ ರಾಜ್ಯಗಳು ಮತ್ತು ಧಾರ್ಮಿಕ ಜನರ ಆಚಾರ ವಿಚಾರಗಳು, ಸಂಸ್ಕೃತಿ, ಭಾಷೆ, ಜೀವನ ಪದ್ಧತಿ ಮತ್ತು ಅವರ ಸಮಸ್ಯೆಗಳ ಬಗ್ಗೆ ಏನೂ ಗೊತ್ತಿಲ್ಲದ ಪ್ರಧಾನಿ ನರೇಂದ್ರ ಮೋದಿ ಅವರು, ಎಲ್ಲವೂ ತಮಗೆ ಮಾತ್ರವೇ ಗೊತ್ತು. ಬೇರೆಯವರಿಗೆ ಈ ದೇಶದ ಬಗ್ಗೆ ಏನೂ ಗೊತ್ತಿಲ್ಲ ಎಂಬ ಅಹಂಕಾರದಲ್ಲಿದ್ದಾರೆ’ ಎಂದು ದೂರಿದರು.

ಭಾರತವು(India) ಕೇವಲ ಭೌಗೋಳಿಕ ಪ್ರದೇಶವಲ್ಲ. ಈ ನೆಲದಲ್ಲಿರುವ ಪ್ರತಿಯೊಬ್ಬರು ಆ ಪ್ರದೇಶಗಳೊಂದಿಗೆ ಹೊಂದಿರುವ ಸಂಬಂಧವಾಗಿದೆ. ಈ ಸಂಬಂಧವನ್ನು ಪ್ರಧಾನಿ ಅವರು ಮುರಿಯುತ್ತಿದ್ದಾರೆ. ಭಾರತೀಯರ ಸಂಬಂಧಗಳನ್ನು ಮುರಿಯುವ ಮುಖಾಂತರ ಮೋದಿ ಅವರು ಭಾರತ ಎಂಬ ಪರಿಕಲ್ಪನೆಯನ್ನು ನಾಶ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ನಾನು ಮೋದಿ ಅವರನ್ನು ವಿರೋಧಿಸುತ್ತೇನೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 6 !
ಇನ್ನೂ 3 ದಿನ ತಗ್ಗುವುದಿಲ್ಲ ಇಂಡಿಗೋಳು! - ನಿನ್ನೆ ಮತ್ತೆ 650 ವಿಮಾನ ರದ್ದು