
ಬೆಂಗಳೂರು (ಸೆ.07): ಕಾಸರಗೋಡು ಜಿಲ್ಲೆಯ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಶ್ರೀಗಳ ಸಾಮಾಜಿಕ ಸೇವೆಯನ್ನು ಸ್ಮರಿಸಿರುವ ಪ್ರಧಾನಿ, ‘ಸಾಮುದಾಯಿಕ ಸೇವೆ ಹಾಗೂ ತುಳಿತಕ್ಕೊಳಪಟ್ಟಸಮುದಾಯಗಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಪೂಜ್ಯ ಕೇಶವಾನಂದ ಭಾರತೀ ಶ್ರೀಗಳ ಮಹತ್ಕಾರ್ಯಗಳು ಅಜರಾಮರ. ಅವರು ದೇಶದ ಶ್ರೀಮಂತ ಸಂಸ್ಕೃತಿ ಹಾಗೂ ಶ್ರೇಷ್ಠ ಸಂವಿಧಾನದ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದರು. ಅಲ್ಲದೆ, ಅವರು ಮುಂದಿನ ಪೀಳಿಗೆಗೂ ಸ್ಫೂರ್ತಿಯ ಸೆಲೆಯಾಗಿದ್ದಾರೆ. ಓಂ ಶಾಂತಿ..’ಎಂದು ಟ್ವೀಟ್ ಮಾಡಿದ್ದಾರೆ.
ತಮ್ಮ ಉಳಿತಾಯದ 2.25 ಲಕ್ಷ ರೂ. ಪಿಎಂ ಕೇರ್ಸ್ ಫಂಡ್ಗೆ ದಾನ ಮಾಡಿದ ಮೋದಿ! ...
ಕೇಶವಾನಂದ ಭಾರತೀ ಶ್ರೀಗಳ ಅಗಲಿಕೆಯಿಂದ ನಾವು ಒಬ್ಬ ಆದ್ಯಾತ್ಮಿಕ ಗುರುವೊಬ್ಬರನ್ನು ಕಳೆದುಕೊಂಡಿದ್ದೇವೆ. ಮುಂದಿನ ಪೀಳಿಗೆಗೆ ಅವರ ಜೀವನವು ಮಾರ್ಗದರ್ಶನದ ಬೆಳಕು ಇದ್ದಂತೆ ಎಂದು ವೆಂಕಯ್ಯನಾಯ್ಡು ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನಿ ಮೋದಿ ವೈಯುಕ್ತಿಕ ಟ್ವಿಟರ್ ಖಾತೆ ಹ್ಯಾಕ್, ಬೇಕಾಬಿಟ್ಟಿ ಪೋಸ್ಟ್!
ಇನ್ನು ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿರುವ ಸಿಎಂ ಯಡಿಯೂರಪ್ಪ, ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿಯೂ ಸಕ್ರಿಯರಾಗಿದ್ದ ಶ್ರೀಗಳು ಗಡಿನಾಡಿನ ಸಂಸ್ಥಾನವನ್ನು ಯಕ್ಷಗಾನ, ಸಂಗೀತದ ಕೇಂದ್ರವನ್ನಾಗಿಸಿದ್ದರು. ಯಕ್ಷಗಾನದ ಮೇಲೆ ಅತೀವ ಪ್ರೇಮ ಹೊಂದಿದ್ದ ಸ್ವಾಮೀಜಿ ಸಮುದಾಯ ಸೇವೆಗಾಗಿ ಮತ್ತು ದೀನ ದಲಿತರನ್ನು ಸಬಲೀಕರಣಕ್ಕಾಗಿ ಸಾಕಷ್ಟುಸೇವೆ ಮಾಡಿದ್ದಾರೆ. ಅವರ ನಿಧನದಿಂದ ನಾವು ಆಧ್ಯಾತ್ಮಿಕ ನಾಯಕರೊಬ್ಬರನ್ನು ಕಳೆದುಕೊಂಡಂತಾಗಿದೆ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ಶ್ರೀ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿ ಹಲವರು ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ