ನವದೆಹಲಿ(ಜು.08): ಪ್ರಧಾನಿ ನರೇಂದ್ರ ಮೋದಿ ಇಂದು ಸತತ ಸಭೆ ನಡೆಸಿದ್ದಾರೆ. ನೂತನ ಸಚಿವರು, ಪರಿಷ್ಕೃತ ಕ್ಯಾಬಿನೆಟ್ ಜೊತೆ ಮೋದಿ ವರ್ಚುವಲ್ ಸಭೆ ನಡೆಸಿದ್ದಾರೆ. ಈ ಸಭೆ ಬಳಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಭರ್ಜರಿ ಪ್ಯಾಕೇಜ್ ಘೋಷಿಸಿದ್ದಾರೆ. ಕೃಷಿ ಕ್ಷೇತ್ರಕ್ಕೆ 1 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದ್ದಾರೆ.
ನೂತನ ಸಚಿವರ ಕ್ಯಾಬಿನೆಟ್ ಸಭೆ; ಕೋವಿಡ್ ನಿಯಂತ್ರಣಕ್ಕೆ 23,123 ಕೋಟಿ ರೂ ಘೋಷಣೆ!.
ಕೃಷಿ ಉತ್ಪಾದನೆ ಮತ್ತು ಜಾನುವಾರು ಮಾರುಕಟ್ಟೆ ಸೇರಿದಂತೆ ಕೃಷಿ ಕ್ಷೇತ್ರಕ್ಕೆ APMC ಮೂಲಕ 1 ಲಕ್ಷ ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ. ಎಪಿಎಂಸಿಗಳಿಗೆ ಹೆಚ್ಚಿನ ಸಂಪನ್ಮೂಲಗಳನ್ನು ಒದಗಿಸಲು ಪ್ರಯತ್ನಿಸಲಾಗುವುದು. ರೈತರ ಮೂಲಸೌಕರ್ಯ ನಿಧಿಗೆ ಆತ್ಮನಿರ್ಭಾರ ಭಾರತ್ ಅಡಿಯಲ್ಲಿ ನಿಗದಿಪಡಿಸಿದ 1 ಲಕ್ಷ ಕೋಟಿ ರೂ.ಗಳನ್ನು ಎಪಿಎಂಸಿಗಳು ಬಳಸಬಹುದು ಎಂದು ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
मैं सभी किसान संगठनों के नेताओं को कहना चाहता हूँ कि वे इस आंदोलन को समाप्त करें और चर्चा का माध्यम अपनाएँ, सरकार चर्चा के लिए तैयार है।
APMC समाप्त नहीं होगी।
APMC और सशक्त हो और किसानों के लिए उपयोगी हो, इसके लिए मोदी सरकार प्रतिबद्ध है। pic.twitter.com/Yc1Ozn1A6D
ತೆಂಗಿನಕಾಯಿ ಕೃಷಿಯನ್ನು ಹೆಚ್ಚಿಸಲು ನಾವು ತೆಂಗಿನಕಾಯಿ ಕಾಯ್ದೆಗೆ ತಿದ್ದುಪಡಿ ಮಾಡುತ್ತಿದ್ದೇವೆ. ತೆಂಗಿನಕಾಯಿ ಮಂಡಳಿಯ ಅಧ್ಯಕ್ಷರು ಅಧಿಕಾರೇತರ ವ್ಯಕ್ತಿಯಾಗಲಿದ್ದಾರೆ. ಈ ಮೂಲಕ ತೆಂಗಿನಕಾಯಿ ಕೃಷಿ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು ಎಂದರು.
हमारे देश में एक बड़े क्षेत्र में नारियल की खेती होती है। इसका उत्पादन बढ़े और किसानों को सहूलियत दी जा सके, उनकी उत्पादकता बढ़े, इसके लिए 1981 में नारियल बोर्ड एक्ट लाया गया था, इसमें हम संशोधन करने जा रहे हैं।
अब बोर्ड का अध्यक्ष गैर शासकीय व्यक्ति व किसान पृष्ठभूमि का होगा। pic.twitter.com/hk12B0AwNh
ಆಗಸ್ಟ್ 15ರ ವರೆಗೆ ದೆಹಲಿಯಲ್ಲೇ ಇರಬೇಕು ; ನೂತನ ಸಚಿವರಿಗೆ ಬಂತು ಮಹತ್ವದ ಸೂಚನೆ!.
ಕೇಂದ್ರ ಸರ್ಕಾರ ರೈತರ ಹಕ್ಕುಗಳನ್ನು ಗೌರವಿಸಲಿದೆ. ರೈತರು ಹೊಸ ಕಾಯ್ದೆ ಹಿಂತೆಗೆದುಕೊಳ್ಳಬೇಕು ಅನ್ನೋ ಒಂದೇ ಆಗ್ರಹ ಬಿಟ್ಟು, ಕಾಯ್ದೆಯಲ್ಲಿರುವ ಯಾವುದೇ ಅಂಶದ ತಿದ್ದುಪಡಿಗೆ, ಚರ್ಚೆಗೆ ಕೇಂದ್ರ ಸಿದ್ಧ ಎಂದು ನರೇಂದ್ರ ಸಿಂಗ್ ತೋಮರ್ ಪುನರುಚ್ಚರಿಸಿದ್ದಾರೆ.
ಎಪಿಎಂಸಿಗಳನ್ನು ತೆಗೆದುಹಾಕಲಾಗುವುದಿಲ್ಲ. ಕೃಷಿ ಕಾನೂನು ಅನುಷ್ಠಾನದ ಬಳಿಕ ಎಪಿಎಂಸಿಗಳು ಕೇಂದ್ರದಿಂದ ಮೂಲ ಸೌಕರ್ಯ ನಿಧಿಯಿಂದ ಕೋಟ್ಯಾಂಟರ ರೂಪಾಯಿಗಳನ್ನು ಪಡೆಯುತ್ತಿದೆ. ಇದರಿಂದ ರೈತರಿಕೆ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ತೋಮರ್ ಹೇಳಿದ್ದಾರೆ.