
ನವದೆಹಲಿ (ಜು.13): ಉತ್ತರ ಭಾರತದ ಹಿಮಾಚಲ ಪ್ರದೇಶದ ಸೇರಿದಂತೆ ದೆಹಲಿ ಅಕ್ಕಪಕ್ಕದ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದಾಗಿ ದೆಹಲಿಯ ಪ್ರಮುಖ ನದಿಯಾಗಿರುವ ಯಮುನಾ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ರಾಷ್ಟ್ರ ರಾಜಧಾನಿಯಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಹಾಗೂ ಯುಎಇ ಪ್ರವಾಸದಲ್ಲಿದ್ದು, ಅಲ್ಲಿಂದಲೇ ದೆಹಲಿಯ ಪರಿಸ್ಥಿತಿಯನ್ನು ಆಲಿಸಿದ್ದಾರೆ. ಗುರುವಾರ ರಾತ್ರಿಯ ವೇಳೆಗೆ ಗೃಹ ಸಚಿವ ಅಮಿತ್ ಶಾ ಹಾಗೂ ದೆಹಲಿಯ ಲೆಫ್ಟಿನೆಂಟ್ ಗವರ್ನರ್ಗೆ ಕರೆ ಮಾಡಿದ ಪ್ರಧಾನಿ ಮೋದಿ ದೆಹಲಿಯಲ್ಲಿ ಆಗಿರುವ ಪರಿಸ್ಥಿತಿಯ ಅವಲೋಕನ ಪಡೆದುಕೊಂಡಿದ್ದಾರೆ. 'ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ನಿಂದ ಕರೆ ಮಾಡಿ ದೆಹಲಿಯ ಜಲಾವೃತ ಮತ್ತು ಪ್ರವಾಹ ಪರಿಸ್ಥಿತಿ ಮತ್ತು ಅದನ್ನು ಎದುರಿಸಲು ನಡೆಸುತ್ತಿರುವ ಪ್ರಯತ್ನಗಳ ಬಗ್ಗೆ ವಿವರವಾಗಿ ವಿಚಾರಿಸಿದರು. ಅವರು ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ತೆಗೆದುಕೊಳ್ಳುವ ಮೂಲಕ ದೆಹಲಿಯ ಹಿತದೃಷ್ಟಿಯಿಂದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು' ಎಂದು ದೆಹಲಿಯ ಎಲ್ಜಿ ವಿನಯ್ ಕುಮಾರ್ ಸಕ್ಸೇನಾ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ