
ನವದೆಹಲಿ(ಫೆ.04): ಏರ್ ಇಂಡಿಯಾ ಮಾರಾಟ ಮಾಡಲು ಮುಂದಾಗಿರುವ ಮೋದಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ಬೇಕಾದರೆ ತಾಜ್ ಮಹಲ್’ನ್ನೂ ಮಾರಿ ಬಿಡುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ರಾಹುಲ್, ಆರ್ಥಿಕವಾಗಿ ದಿವಾಳಿಯಾಗಿರುವ ಕೇಂದ್ರ ಸರ್ಕಾರ ಒಂದೊಂದಾಗಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಮಾರಲು ಮುಂದಾಗಿದೆ ಎಂದು ಹರಿಹಾಯ್ದರು.
ಕೇವಲ ಏರ್ ಇಂಡಿಯಾ ಏನು ಪ್ರಧಾನಿ ಮೋದಿ ಬೇಕಾದರೆ ತಾಜ್ ಮಹಲ್’ನ್ನೂ ಮಾರಿ ಬಿಡುತ್ತಾರೆ. ಅರ್ಥ ವ್ಯವಸ್ಥೆಯ ಬಗ್ಗೆ ತಿಳುವಳಿಕೆ ಇರದ ವ್ಯಕ್ತಿ ಪ್ರಧಾನಿ ಕುರ್ಚಿ ಮೇಲೆ ಕುಳಿತರೇ ಇನ್ನೇನು ತಾನೇ ನಿರೀಕ್ಷಿಸಲು ಸಾಧ್ಯ ಎಂಧು ರಾಹುಲ್ ಕಿಡಿಕಾರಿದರು.
ಮತ್ತೆ ಸೇಲ್ಗಿದೆ ಏರ್ ಇಂಡಿಯಾ: 100% ಷೇರು ಮಾರಲು ಕೇಂದ್ರ ಸಜ್ಜು!
ಏರ್ ಇಂಡಿಯಾ ಮಾರಾಟದ ನಿರ್ಧಾರ ಸರ್ಕಾರದ ಖಜಾನೆಯಾಗಿರುವುದನ್ನು ತಿಳಿಸುತ್ತದೆ ಎಂದ ರಾಹುಲ್, ಜ್ವಲಂತ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಸಿಎಎ ಹಾಗೂ NRC ಜಾರಿಗೆ ಮೋದಿ ಸರ್ಕಾರ ಹುನ್ನಾರ ನಡೆಸಿದೆ ಎಂದು ಗಂಭೀರ ಆರೋಪ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ