
ನವದೆಹಲಿ(ಏ.24): ದೇಶದಲ್ಲಿ ಕೊರೋನಾ 2ನೇ ಅಲೆ ತಂದಿಟ್ಟ ಆರೋಗ್ಯ ತುರ್ತು ಪರಿಸ್ಥಿತಿ ಭೀಕರವಾಗಿದೆ. ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್ ಕೊರತೆ ನೀಗಿಸಲು ಸಾಗರೋಪಾದಿಯಲ್ಲಿ ಕೆಲಸ ಮಾಡಲಾಗುತ್ತಿದೆ. ಆದರೆ ಬೇಡಿಕೆ ಹೆಚ್ಚಿರುವ ಕಾರಣ ಇನ್ನೂ ಸಮರ್ಪಕವಾಗಿ ಪೂರೈಕೆ ಆಗುತ್ತಿಲ್ಲ. ದೇಶದಲ್ಲಿ ಆಮ್ಲಜನ ಲಭ್ಯತೆ ಹೆಚ್ಚಿಸಲು ಕೈಗೊಂಡ ಕ್ರಮಗಳ ಪರಿಶೀಲಿಸಲು ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ಸಿಂಗಾಪುರದಿದ ಆಕ್ಸಿಜನ್ ಟ್ಯಾಂಕ್ ಏರ್ಲಿಫ್ಟ್ ಮಾಡಿದ IAF ಏರ್ಕ್ರಾಫ್ಟ್!.
ಈ ಮಹತ್ವದ ಸಭೆಯಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಆಮ್ಲಜನಕ ಪೂರೈಕೆ ಮತ್ತು ರೋಗಿಗಳ ಆರೈಕೆಗೆ ಅಗತ್ಯವಾದ ಸಲಕರಣೆಗಳನ್ನು ತ್ವರಿತವಾಗಿ ಪೂರೈಸುವ ಹಾಗೂ ದೇಶದಲ್ಲಿ ಉತ್ಪಾದಕತೆ ಹೆಚ್ಚಿಸುವ ಅವಶ್ಯಕತೆಯಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಆಮ್ಲಜನಕ ಮತ್ತು ವೈದ್ಯಕೀಯ ಸರಬರಾಜುಗಳ ಲಭ್ಯತೆಯನ್ನು ಹೆಚ್ಚಿಸಲು ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳು ಸಿನರ್ಜಿಯಲ್ಲಿ ಕೆಲಸ ಮಾಡುವ ಅಗತ್ಯವಿದೆ ಎಂದು ಪಿಎಂ ಒತ್ತಿ ಹೇಳಿದರು.
ಆಮ್ಲಜನಕ, ಲಸಿಕೆ, ವೈದ್ಯಕೀಯ ಸಲಕೆರಣೆಗಳನ್ನು ವಿದೇಶದಿಂದ ಆಮದು ಮಾಡಿಕೊಳ್ಳುವ ಮಾರ್ಗ ಸುಲಭ ಮಾಡಲಿದೆ. ಆಮದು ಸುಂಕ ರದ್ದು ಮಾಡಲಾಗಿದೆ. 3 ತಿಂಗಳ ಆಮದು ಸುಂಕ ರದ್ಧು ಮಾಡಲಾಗಿದೆ.
ಮೇಲಿನ ಸಲಕರಣೆಗಳು, ಲಸಿಕೆ ಸೇರದಂತೆ ಹಲವು ವಸ್ತುಗಳಿಗೆ ಆಮದು ಸುಂಕ ರದ್ದು ಮಾಡಲಾಗಿದೆ. ಕಸ್ಟಮ್ ಡ್ಯೂಟಿ ಕ್ಲಿಯೆರೆನ್ಸ್ಗಾಗಿ ಪ್ರಧಾನಿ ಮೋದಿ ಕಂದಾಯ ಇಲಾಖೆಗೆ ನಿರ್ದೇಶ ನೀಡಿದ್ದಾರೆ. ಇದರ ಮೇಲ್ವಿಚಾರಣೆಗಾಗಿ ಕಸ್ಟಮ್ಸ್ ಜಂಟಿ ಕಾರ್ಯದರ್ಶಿ ಗೌರವ್ ಮಸಲ್ಡಾನ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ