1947ರಲ್ಲಿ ಕಾಂಗ್ರೆಸ್ ಮತಾಂಧವಾಗಿತ್ತು, ಈಗ ಸೆಕ್ಯುಲರ್ ಆಗಿದೆ: ಮೋದಿ!

Suvarna News   | Asianet News
Published : Feb 06, 2020, 06:42 PM IST
1947ರಲ್ಲಿ ಕಾಂಗ್ರೆಸ್ ಮತಾಂಧವಾಗಿತ್ತು, ಈಗ ಸೆಕ್ಯುಲರ್ ಆಗಿದೆ: ಮೋದಿ!

ಸಾರಾಂಶ

ಸಿಎಎ ಕುರಿತ ಕಾಂಗ್ರೆಸ್ ನಿಲುವು ಟೀಕಿಸಿದ ಪ್ರಧಾನಿ ಮೋದಿ| 1947ರಲ್ಲಿ ಕಾಂಗ್ರೆಸ್ ಮತಾಂಧವಾಗಿತ್ತು ಎಂದ ಪ್ರಧಾನಿ| ‘ಕಾಂಗ್ರೆಸ್ ಪಾಕ್ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಲು ಬಯಸಿತ್ತು’| ಕಾಂಗ್ರೆಸ್ ಈಗ ಜಾತ್ಯಾತೀತ ಪಕ್ಷವಾಗಿ ಮಾರ್ಪಟ್ಟಿದೆ ಎಂದು ಕಿಚಾಯಿಸಿದ ಮೋದಿ| ರಾಜಕೀಯ ಕಾರಣಗಳಿಗೆ ಕಾಂಗ್ರೆಸ್ ಸಿಎಎ ವಿರೋಧಿಸುತ್ತಿದೆ ಎಂದ ಮೋದಿ| ‘ರಾಷ್ಟ್ರಪತಿಗಳ ಭಾಷಣ ನವ ಭಾರತದ ನಿರ್ಮಾಣಕ್ಕೆ ಪೂರಕ’|

ನವದೆಹಲಿ(ಫೆ.06): ಸಿಎಎ ಕುರಿತಾದ ಕಾಂಗ್ರೆಸ್ ನಿಲುವನ್ನು ಟೀಕಿಸಿರುವ ಪ್ರಧಾನಿ ಮೋದಿ, ಸ್ವಾತಂತ್ರ್ಯ ದೊರೆತ ಕ್ಷಣದಲ್ಲಿ ಪಾಕಿಸ್ತಾನದ ಅಲ್ಪಸಂಖ್ಯಾತರ ಪರ ಧ್ವನಿ ಎತ್ತಿದ್ದ ಕಾಂಗ್ರೆಸ್ ಮತೀಯವಾದಿ ಪಕ್ಷವಾಗಿತ್ತು ಎಂದು ಚುಚ್ಚಿದ್ದಾರೆ.

ಸ್ವಾತಂತ್ರ್ಯ ದೊರೆತ ಬಳಿಕ ಪಾಕಿಸ್ತಾನದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಪರವಿದ್ದ ಕಾಂಗ್ರೆಸ್ ಪಕ್ಷ, ಇದೀಗ ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದೇಕೆ ಎಂದು ಪ್ರಧಾನಿ ಮೋದಿ ಪ್ರಶ್ನಿಸಿದರು.

ಗಾಂಧಿ ನಿಮಗೆ ಟ್ರೇಲರ್ ಇದ್ದಂತೆ, ನಮಗೆ ಜೀವನ: ವಿಪಕ್ಷಗಳ ಕಾಲೆಳೆದ ಮೋದಿ!

ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಮೋದಿ, ಸ್ವಾತಂತ್ರ್ಯದ ವೇಳೆ ಮತಾಂಧವಾಗಿದ್ದ ಕಾಂಗ್ರೆಸ್ ಪಕ್ಷ ಈಗ ಜಾತ್ಯಾತೀತ ಪಕ್ಷವಾಗಿ ಮಾರ್ಪಟ್ಟಿದೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ಪಾಕಿಸ್ತಾನದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಪರ ಇತ್ತು ಎಂಬುದಕ್ಕೆ ಇತಿಹಾಸದಲ್ಲಿ ಸಾಕ್ಷಿಯಿದೆ. ಈಗ ರಾಜಕೀಯ ಕಾರಣಗಳಿಗೆ ಕಾಂಗ್ರೆಸ್ ಸಿಎಎ ವಿರೋಧಿಸುತ್ತಿರುವುದು ಹಾಸ್ಯಾಸ್ಪದ ಎಂದು ಮೋದಿ ಕುಹುಕವಾಡಿದರು.

ದೇಶದ ಅಭಿವೃದ್ಧಿಗೆ ನಮ್ಮ ಸರ್ಕಾರ ನಿರಂತರವಾಗಿ ದುಡಿಯುತ್ತಿದ್ದು, ಇದಕ್ಕೆ ಪೂರಕವಾಗಿ ಗಟ್ಟಿ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಹಿಂಜರಿಯುವುದಿಲ್ಲ ಎಂದು ಪ್ರಧಾನಿ ಸದನಕ್ಕೆ ಸ್ಪಷ್ಟಪಡಿಸಿದರು.

ಯಾರಿಗೋ ಪ್ರಧಾನಿಯಾಗುವ ಬಯಕೆಯಿತ್ತು, ಅದಕ್ಕೆ ದೇಶ ಇಬ್ಭಾಗವಾಯ್ತು: ಮೋದಿ!

ರಾಷ್ಟ್ರಪತಿಗಳ ಭಾಷಣ ನವ ಭಾರತದ ನಿರ್ಮಾಣಕ್ಕೆ ಪೂರಕವಾಗಿದ್ದು, ದೇಶದ ಏಕತೆ ಹಾಗೂ ಅಖಂಡತೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ಮೂಲಕ ಸದೃಢ ದೇಶವನ್ನು ನಿರ್ಮಾಣ ಮಾಡೋಣ ಎಂದು ಈ ವೇಳೆ ಪ್ರಧಾನಿ ಕರೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಮದುವೆಯಾದ್ರೆ ಸಿಗುತ್ತೆ 2.5 ಲಕ್ಷ ರೂಪಾಯಿ; ಶೇ.99 ಜನರಿಗೆ ಈ ವಿಷಯವೇ ಗೊತ್ತಿಲ್ಲ