ಕೊರೋನಾ ಸಭೆ ಬಳಿಕ ಮಹತ್ವದ ಸೂಚನೆ ನೀಡಿದ ಪ್ರಧಾನಿ ಮೋದಿ!

Published : Apr 17, 2021, 10:13 PM ISTUpdated : Apr 17, 2021, 10:45 PM IST
ಕೊರೋನಾ ಸಭೆ ಬಳಿಕ ಮಹತ್ವದ ಸೂಚನೆ ನೀಡಿದ ಪ್ರಧಾನಿ ಮೋದಿ!

ಸಾರಾಂಶ

ಕೊರೋನಾ ವೈರಸ್ ರಣಕೇಕೆ ಮುಂದುವರಿದಿರುವ ಕಾರಣ ಪ್ರಧಾನಿ ನರೇಂದ್ರ ಮಹತ್ವದ ಸಭೆ ನಡೆಸಿದ್ದಾರೆ. ಅಧಿಕಾರಿಗಳು, ತಜ್ಞರು ಹಾಗೂ ಪ್ರಮುಖ ಸಚಿವರ ಜೊತೆ ಸಭೆ ನಡೆಸಿದ ಮೋದಿ, ಮಹತ್ವದ ಸೂಚನೆ ನೀಡಿದ್ದಾರೆ.

ನವದೆಹಲಿ(ಏ.17): ದೇಶದಲ್ಲಿ ಅತೀಯಾಗುತ್ತಿರುವ ಕೊರೋನಾ ವೈರಸ್ ಪ್ರಕರಣ, ಕೋವಿಡ್ ನಿಯಂತ್ರಣ ಹಾಗೂ ಲಸಿಕೆ ವಿತರಣೆ ಕುರಿತ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಸಭೆ ನಡೆಸಿದ್ದಾರೆ. ಈ ವೇಳೆ ತ್ರಿಬಲ್ ಟಿ ಸೂತ್ರವನ್ನು ಮೋದಿ ಪುನರುಚ್ಚಿಸಿದ್ದಾರೆ. ತ್ರಿಟಿ ಸೂತ್ರ ಪಾಲಿಸಿದರೆ ಮಾತ್ರ ವೇಗವಾಗಿ ಕೊರೋನಾ ನಿಯಂತ್ರಣ ಸಾಧ್ಯ ಎಂದಿದ್ದಾರೆ.

ಆತಂಕ ಬೇಡ, ಟೆಸ್ಟ್, ಟ್ರಾಕ್, ಟ್ರೀಟ್ಮೆಂಟ್ ಅಗತ್ಯ; ಮುಖ್ಯಮಂತ್ರಿಗಳಿಗೆ ಮೋದಿ ಮಹತ್ವದ ಸೂಚನೆ!

ಟೆಸ್ಟ್, ಟ್ರಾಕ್, ಹಾಗೂ ಟ್ರೀಟ್ಮೆಂಟ್. ಇದು ಪ್ರಧಾನಿ ನರೇಂದ್ರ ಮೋದಿ ಕಳೆದ ವರ್ಷ ಹೇಳಿದ ತ್ರಿಬಲ್ ಟಿ ಸೂತ್ರ. ಇದೀಗ ಮತ್ತೆ ಮೋದಿ ಇದೇ ಸೂತ್ರ ಪರಿಣಾಮಕಾರಿಯಾಗಿ ಬಳಸಲು ಮನವಿ ಮಾಡಿದ್ದಾರೆ. ಇದೇ ವೇಳೆ ಸ್ಥಳೀಯ ಆಡಳಿತ ಹೆಚ್ಚು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಕೊರೋನಾ ಸೋಂಕಿತರಿಗ ಆಸ್ಪತ್ರೆ, ಬೆಡ್, ವೆಂಟಿಲೇಟರ್, ಆಕ್ಸಿನ್ ಸೇರಿದಂತೆ ವೈದ್ಯಕೀಯ ಸೌಲಭ್ಯ ಸರಿಯಾಗಿ ಪೂರೈಕೆಯಾಗುವಂತೆ ಹಾಗೂ ಸಿಗುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯಕ್ಕೆ ಸೂಚನೆ ನೀಡಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಆರೈಕೆಗೆ ಸರಿಯಾದ ಕೋವಿಡ್ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ಮೋದಿ ಹೇಳಿದ್ದಾರೆ.

ಇನ್ನು ಲಸಿಕೆ ವಿತರಣೆ ಕುರಿತು ಮಾಹಿತಿ ಪಡೆದುಕೊಂಡ ಮೋದಿ, ರೆಮ್ಡಿಸಿವಿರ್ ಸೇರಿದಂತೆ ಇತರ ಲಸಿಕೆ ಪೂರೈಕೆ ಅಭಾವ ಬಗೆ ಹರಿಸಲು ತೆಗೆದುಕೊಂಡ ಕ್ರಮಗಳ ಕುರಿತು ವರದಿ ಪಡೆದುಕೊಂಡಿದ್ದಾರೆ. ರೆಮ್ಡಿಸಿವಿರ್ ಸೇರಿದಂತೆ ಸ್ಥಳೀಯ ಲಸಿಕೆ ಉತ್ಪಾದನೆಯನ್ನು ಭಾರತ ಸರ್ಕಾರ ಹೆಚ್ಚಿಸಿದೆ. ಈ ಕುರಿತ ಮೋದಿ ವಿವರಗಳನ್ನು ಪಡೆದುಕೊಂಡಿದ್ದಾರೆ.

ಆಕ್ಸಿಜನ್ ಕೊರತೆಯಾಗದಂತೆ ನೋಡಿಕೊಳ್ಳಲು ಮೋದಿ ಸೂಚನೆ ನೀಡಿದ್ದಾರೆ.  ಪಿಎಂ ಕೇರ್ಸ್‌ನಿಂದ 32 ರಾಜ್ಯಗಳು  ಹಾಗೂ ಕೇಂದ್ರಾಡಳಿತ ಪ್ರದೇಶಗಳು 162 PSA ಆಕ್ಸಿಜನ್ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. 1 ಲಕ್ಷ ಸಿಲಿಂಡರ್‌ಗಳನ್ನು ಸಂಗ್ರಹಿಸಿ,  ಶೀಘ್ರದಲ್ಲೇ  ಎಲ್ಲಾ ರಾಜ್ಯಗಳಿಗೆ ಸರಬರಾಜು ಮಾಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೆಚ್ಚಾಯ್ತು ಕೊರೋನಾ ಆತಂಕ; ರಾತ್ರಿ 8 ಗಂಟೆಗೆ ಮಹತ್ವದ ಸಭೆ ಕರೆದ ಪ್ರಧಾನಿ ಮೋದಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?