
ನವದೆಹಲಿ(ಜು. 05): ಕೊರೋನಾತಂಕ ಹಾಗೂ ಚೀನಾ ಭಾರತದ ನಡುವಿನ ಸಂಘರ್ಷದ ನಡುವೆ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ರನ್ನು ಭೇಟಿಯಾಗಿದ್ದಾರೆ. ಈ ಭೇಟಿ ಸದ್ಯಯ ಭಾರೀ ಕುತೂಹಲ ಮೂಡಿಸಿದೆ.
ಸದ್ಯ ದೇಶಾದ್ಯಂತ ಕೊರೋನಾ ಅಟ್ಟಹಾಸ ಮುಂದುವರೆದಿದೆ. ಸೋಂಕಿತರ ಹಾಗೂ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಹೆಚ್ಚಿದೆ. ಅತ್ತ ಲಡಾಖ್ ಗಡಿಯಲ್ಲಿ ಚೀನಾ ಕುತಂತ್ರವೂ ಮುಂದುವರೆದಿದೆ. ಹೀಗಿರಿವಾಗ ಕೋವಿಂದ್ ಮೋದಿ ಭೇಟಿಯಲ್ಲಿ ಪ್ರಸ್ತುತ ವಿದ್ಯಮಾನಗಳ ಕುರಿತು ಸುದೀರ್ಘ ಚರ್ಚೆ ನಡೆಸಿದ್ದಾರೆನ್ನಲಾಗಿದೆ.
ಇನ್ನು ಈ ಬಗ್ಗೆ ರಾಷ್ಟ್ರಪತಿ ಭವನ ರಾಷ್ಟ್ರಪತಿ ಭವನ ಸ್ಪಷ್ಟನೆ ನೀಡಿದ್ದು, ಪ್ರಸ್ತುತ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ವಿದ್ಯಮಾನಗಳ ಕುರಿತು ಇಬ್ಬರೂ ನಾಯಕರು ಚರ್ಚೆ ನಡೆಸಿದ್ದಾರೆಂದು ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ