
ನವದೆಹಲಿ(ಮೇ.28): ಲಡಾಖ್ ಗಡಿಯಲ್ಲಿನ ಗಡಿ ಬಿಕ್ಕಟ್ಟು ನಿರ್ವಹಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಡೋಕ್ಲಾಂ ಬಿಕ್ಕಟ್ಟನ್ನು ಬಗೆಹರಿಸಿದ ತಂಡದ ಸದಸ್ಯರನ್ನು ಪುನಃ ಕರೆಸಿಕೊಂಡಿದ್ದಾರೆ.
ಯುದ್ಧೋನ್ಮಾದ ಬಿಟ್ಟು ಮೆತ್ತಗಾದ ಚೀನಾ!
ಈ ಹಿಂದೆ 2017ರಲ್ಲಿ ಡೋಕ್ಲಾಂ ವಿಷಯಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ಮಧ್ಯೆ ಬಿಕ್ಕಟ್ಟು ಸೃಷ್ಟಿಯಾದ ಸಂದರ್ಭದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ನೇತೃತ್ವದ ತಂಡ ಚೀನಾದ ಜೊತೆ ಮಾತುಕತೆ ನಡೆಸಿ ಸಂಧಾನದ ಮೂಲಕ ಬಿಕ್ಕಟ್ಟನ್ನು ಬಗೆಹರಿಸುವಲ್ಲಿ ಯಶಸ್ವಿಯಾಗಿತ್ತು.
ಚೀನಾ ಕ್ಯಾತೆ: ಮೋದಿ ಉನ್ನತ ಮಟ್ಟದ ತುರ್ತು ಸಭೆ!
ಇದೀಗ ಚೀನಾ ಗಡಿ ವಿಚಾರದಲ್ಲಿ ಮತ್ತೆ ತಗಾದೆ ತೆಗೆದಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ತುರ್ತು ಸಭೆ ನಡೆಸಿ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದರು. ವಿಶೇಷವೆಂದರೆ ಈ ಸಭೆಯಲ್ಲಿ ಭಾಗಿಯಾದ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸಶಸ್ತ್ರ ಪಡೆ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರು ಡೋಕ್ಲಾಂ ಬಿಕ್ಕಟ್ಟು ನಿವಾರಿಸಿದ ತಂಡದಲ್ಲಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ