ಉಪವಾಸ ಅಂತ್ಯಗೊಳಿಸಲು ಏನಾದರು ಕೊಡುವುದಿದ್ದರೆ..,ಮೋದಿ ಮನವಿಗೆ ಭಾವುಕರಾದ ಸ್ವಾಮೀಜಿ!

Published : Jan 23, 2024, 03:52 PM ISTUpdated : Jan 23, 2024, 03:54 PM IST
ಉಪವಾಸ ಅಂತ್ಯಗೊಳಿಸಲು ಏನಾದರು ಕೊಡುವುದಿದ್ದರೆ..,ಮೋದಿ ಮನವಿಗೆ ಭಾವುಕರಾದ ಸ್ವಾಮೀಜಿ!

ಸಾರಾಂಶ

ಸ್ವಾಮಿ ಗೋವಿಂದ್ ದೇವ್ ಗಿರಿ ಮಹಾರಾಜ್ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ಪ್ರಾಣಪ್ರತಿಷ್ಠೆಗಾಗಿ ಕೈಗೊಂಡ ಉಪವಾಸ ವೃತ್ಯ ಅಂತ್ಯಗೊಳಿಸಿದ್ದರು. ಜೇನು ಹಾಗೂ ನಿಂಬೆ ರಸ ಮಿಶ್ರಿತ ನೀರು ನೀಡಿ ಮೋದಿ ಉಪವಾಸ ಅಂತ್ಯಗೊಳಿಸಲು ಸ್ವಾಮೀಜಿ ನಿರ್ಧರಿಸಿದ್ದರು. ಆದರೆ ಮೋದಿಯ ಮನವಿ ನನ್ನ ಅಂತಃಕರಣದಲ್ಲಿ ಮಾತೃತ್ವ ಭಾವ ಮೂಡಿಸಿತ್ತು. ನನ್ನ ಮಗನ ಉಪವಾಸ ಅಂತ್ಯಗೊಳಿಸುತ್ತಿರುವ ಅನುಭವವಾಯಿತು ಎಂದಿದ್ದಾರೆ. ಅಷ್ಟಕ್ಕೂ ಮೋದಿ ಉಪವಾಸ ಅಂತ್ಯಗೊಳಿಸಲು ಸ್ವಾಮೀಜಿ ನೀಡಿದ್ದೇನು?

ಆಯೋಧ್ಯೆ(ಜ.23) ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆಯಾಗಿ ಇದೀಗ ಸಾರ್ವಜನಿಕರ ದರ್ಶನಕ್ಕೂ ಮುಕ್ತವಾಗಿದೆ. ಶತ ಶತಮಾನಗಳ ಹೋರಾಟದ ಫಲವಾಗಿ ಭವ್ಯ ರಾಮ ಮಂದಿರದಲ್ಲಿ ಮತ್ತೆ ಪ್ರಭು ಶ್ರೀರಾಮ ವಿರಾಜಮಾನನಾಗಿದ್ದಾನೆ. ರಾಮ ಮಂದಿರ ಬಾಲರಾಮನ ಪ್ರಾಣಪ್ರತಿಷ್ಠೆಗೆ ಪ್ರಧಾನಿ ನರೇಂದ್ರ ಮೋದಿ 11 ದಿನಗಳ ಕಠಿಣ ಉಪವಾಸ ವೃತ ಕೈಗೊಂಡಿದ್ದರು. ಪ್ರಾಣಪ್ರತಿಷ್ಠೆ ಬಳಿಕ ಸ್ವಾಮಿ ಗೋವಿಂದ್ ದೇವ್ ಗಿರಿ ಮಹಾರಾಜ್ ಸಮ್ಮುಖದಲ್ಲಿ ಪ್ರಧಾನಿ ಮೋದಿ ಉಪವಾಸ ಅಂತ್ಯಗೊಳಿಸಿದರು. ಗೋವಿಂದ್ ದೇವ್ ಗಿರಿ ಮಹಾರಾಜ್ ಹಾಗೂ ಇತರ ಹಿರಿಯ ಸ್ವಾಮೀಜಿಗಳು ಪ್ರಧಾನಿ ಮೋದಿಗೆ ಜೇನು ಹಾಗೂ ನಿಂಬೆ ರಸ ಮಿಶ್ರಿತ ನೀರು ನೀಡಲು ನಿರ್ಧರಿಸಿದ್ದರು. ಆದರೆ ಸ್ವಾಮಿ ಸ್ವಾಮಿ ಗೋವಿಂದ್ ದೇವ್ ಗಿರಿ ಮಹಾರಾಜ್‌ಗೆ ಮೋದಿ ವಿಶೇಷ ಮನವಿ ಮಾಡಿದ್ದರು. ನೀವು ನನ್ನ ಉಪವಾಸ ಅಂತ್ಯಗೊಳಿಸಲು ಏನಾದರು ನೀಡುತ್ತಿದ್ದರೆ ಅದು ರಾಮಲಲ್ಲಾನ ಚರಣಾಮೃತ ನೀಡಿ ಎಂದು ಮನವಿ ಮಾಡಿದರು. ಶ್ರೀರಾಮಲಲ್ಲಾ ಚರಣಗಳಿಗೆ ಮಾಡಿದ ಅಭಿಷೇಕ ಸ್ವೀಕರಿಸಿ ಮೋದಿಗೆ  ತಮ್ಮ ಉಪವಾಸ ಅಂತ್ಯಗೊಳಿಸಿದರು ಎಂದು ಸ್ವಾಮಿ ಗೋವಿಂದ್ ದೇವ್ ಗಿರಿ ಮಹಾರಾಜ್‌ ಹೇಳಿದ್ದಾರೆ.

ಭವ್ಯ ರಾಮ ಮಂದಿರದಲ್ಲಿ 12.20ರಿಂದ ರಾಮ ಲಲ್ಲಾನ ಪ್ರಾಣಪ್ರತಿಷ್ಠೆ ಶಾಸ್ತ್ರಗಳು ಆರಂಭಗೊಂಡಿತು. ಪ್ರಾಣಪ್ರತಿಷ್ಠೆ ಬಳಿಕ ಮೊದಲ ಮಂಗಳರಾತಿ, ಅಭಿಷೇಖ, ಪೂಜೆ ನಡೆಯಿತು. 1 ಗಂಟೆ ಹೊತ್ತಿಗೆ ಎಲ್ಲಾ ಪೂಜಾ ವಿಧಿವಿಧಾನಗಳು ಮುಗಿದಿತ್ತು. ಬಳಿಕ ಸ್ವಾಮೀಜಿಗಳೊಡನೆ ವೇದಿಕೆಗೆ ಆಗಮಿಸಿದ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಶಾಸ್ತ್ರಗಳ ಪ್ರಕಾರ ಯಜಮಾನನ ಸ್ಥಾನದಲ್ಲಿ ನಿಂತು ಪ್ರಾಣಪ್ರತಿಷ್ಠೆ ನೆರವೇರಿಸಿದ ವ್ಯಕ್ತಿಗೆ ಹಿರಿಯರು ಅಥವಾ ಸ್ವಾಮೀಜಿಗಳ ಸಮ್ಮುಖದಲ್ಲಿ ಕೈಗೊಂಡ ಉಪವಾಸ, ವೃತಗಳನ್ನು ಅಂತ್ಯಗೊಳಿಸಲು ಹಾಲು ಅಥವಾ ಇತರ ಹಣ್ಣಿನ ರಸಗಳನ್ನು ನೀಡಲಾಗುತ್ತದೆ.

ಶ್ರೀರಾಮ ಪ್ರಸಾದ ಸ್ವೀಕರಿಸುವ ಮೂಲಕ ಪ್ರಾಣಪ್ರತಿಷ್ಠೆಗೆ ಕೈಗೊಂಡ ಉಪವಾಸ ಪೂರ್ಣಗೊಳಿಸಿದ ಮೋದಿ!

ಹೀಗೆ ಪ್ರಧಾನಿ ಮೋದಿಯ ಕಠಿಣ ವೃತ ಅಂತ್ಯಗೊಳಿಸಲು ಸ್ವಾಮಿ ಗೋವಿಂದ್ ದೇವ್ ಗಿರಿ ಮಹಾರಾಜ್ ಹಾಗೂ ಇತರ ಸ್ವಾಮೀಜಿಗಳು ಜೇನು, ನಿಂಬೆ ರಸ ಮಿಶ್ರಿತ ನೀರು ನೀಡಲು ತಯಾರಿ ಮಾಡಿಕೊಂಡಿದ್ದರು. ಒಂದು ಲೋಟದಲ್ಲಿ ನಿಂಬೆ, ಜೇನು ಮಿಶ್ರಿತ ನೀರು ಕೂಡ ತಯಾರಿಸಲಾಗಿತ್ತು. ಈ ನೀರನ್ನು ಪ್ರಧಾನಿ ಮೋದಿ ಅಧಿಕಾರಿಗಳು, ವೈದ್ಯರ ತಂಡ ಕೂಡ ಪರಿಶೀಲನೆ ನಡೆಸಿತ್ತು. 

 

 

ಗರ್ಭಗುಡಿಯಿಂದ ಹೊರಬರುತ್ತಿದ್ದಂತೆ ಪ್ರಧಾನಿ ಮೋದಿ ನೇರವಾಗಿ ಸ್ವಾಮಿ ಗೋವಿಂದ್ ದೇವ್ ಗಿರಿ ಮಹಾರಾಜ್ ಬಳಿ ಒಂದು ಮನವಿ ಮಾಡಿದ್ದಾರೆ. ನನ್ನ ಉಪವಾಸ ವೃತ ಅಂತ್ಯಗೊಳಿಸಲು ನೀವು ಏನಾದರು ನೀಡುವುದಿದ್ದರೆ, ಬಾಲರಾಮನಿಗೆ ಅಭಿಷೇಖ ಮಾಡಿದ ಚರಣಾಮೃತ ನೀಡಿ ಎಂದಿದ್ದಾರೆ. ಈ ಮಾತುಗಳನ್ನು ಕೇಳಿದ ಸ್ವಾಮಿ ಗೋವಿಂದ್ ದೇವ್ ಗಿರಿ ಮಹಾರಾಜ್ ಸ್ವಾಮೀಜಿ ಮತ್ತಷ್ಟು ಭಾವುಕರಾದರು. 

ಟೆಂಟ್ ಅಲ್ಲ, ಭವ್ಯ ಮಂದಿರದಲ್ಲಿ ಶ್ರೀರಾಮನ ದರ್ಶನ, ಮಂದಿರ ಲೋಕಾರ್ಪಣೆಗೊಳಿಸಿ ಮೋದಿ ಭಾಷಣ!

ಈ ಕುರಿತು ಮಾತನಾಡಿರುವ ಸ್ವಾಮಿ ಗೋವಿಂದ್ ದೇವ್ ಗಿರಿ ಮಹಾರಾಜ್, ನನ್ನ ಅಂತಃಕರಣದಲ್ಲಿ ಮಾತೃತ್ವ ಭಾವ ಮೂಡಿತ್ತು. ನನ್ನ ಮಗನ ಉಪವಾಸ ವೃತವನ್ನು ನಾನು ಅಂತ್ಯಗೊಳಿಸುವ ಭಾವನೆ ಮೂಡಿತ್ತು. ದೇವಸಂಭೂತನಾಗಿ ಅವತರಿಸಿ ಪ್ರಧಾನಿ ಎಂದು ಸ್ವಾಮಿ ಗೋವಿಂದ್ ದೇವ್ ಗಿರಿ ಮಹಾರಾಜ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು