ಅಗಲಿದ ವಿಜ್ಞಾನಿ ಪ್ರೊ. ಗೋವಿಂದ್ ಸ್ವರೂಪ್ ಸ್ಮರಿಸಿದ ಪ್ರಧಾನಿ

Published : Sep 08, 2020, 03:03 PM IST
ಅಗಲಿದ ವಿಜ್ಞಾನಿ ಪ್ರೊ. ಗೋವಿಂದ್ ಸ್ವರೂಪ್ ಸ್ಮರಿಸಿದ ಪ್ರಧಾನಿ

ಸಾರಾಂಶ

ಹಿರಿಯ ವಿಜ್ಞಾನಿ ಡಾ.ಗೋವಿಂದ್ ಸ್ವರೂಪ್(91) ನಿಧನ/ ಪ್ರಧಾನಿ ನರೇಂದ್ರ ಮೋದಿ ಸಂತಾಪ/ ವಿಜ್ಞಾನಿಯ ಕೊಡುಗೆ ಸ್ಮರಿಸಿದ ರಾಷ್ಟ್ರಪತಿ/ ಭಾರತದ ರೇಡಿಯೊ ಖಗೋಳ ವಿಜ್ಞಾನ ಜನಕ ಎಂದೇ ಗುರುತಿಸಿಕೊಂಡಿದ್ದರು

ಪುಣೆ/ ನವದೆಹಲಿ(ಸೆ 08)  ಭಾರತದ ರೇಡಿಯೊ ಖಗೋಳ ವಿಜ್ಞಾನ ಜನಕ ಡಾ.ಗೋವಿಂದ್ ಸ್ವರೂಪ್(91)  ಪುಣೆಯಲ್ಲಿ ನಿಧನರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಅನಾರೋಗ್ಯದ  ಕಾರಣ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಖಗೋಳ ವಿಜ್ಞಾನ ಮತ್ತು ಖಗೋಳ ಭೌತಶಾಸ್ತ್ರದ ಹಲವು ವಲಯಗಳಲ್ಲಿ ಮಹತ್ವದ ಸಂಶೋಧನೆಗಳ ಕೊಡುಗೆ ನೀಡಿರುವ ಡಾ. ಸ್ವರೂಪ್, ರೇಡಿಯೊ ಖಗೋಳ ವಿಜ್ಞಾನ ಮುಂಚೂಣಿಯ ವಿಜ್ಞಾನಿ. 

ಹಿಂದೂಸ್ತಾನಿ ಸಂಗೀತ ದಿಗ್ಗಜ ಜಸ್‌ರಾಜ್ ಜೀವನ-ಸಾಧನೆ

ವಿಜ್ಞಾನಿ ಡಾ. ಡಾ.ಗೋವಿಂದ್ ಸ್ವರೂಪ್ ಅವರ ಕೊಡುಗೆಯನ್ನು ಸ್ಮರಿಸಿರುವ ಪ್ರಧಾನಿ  ನರೇಂದ್ರ ಮೋದಿ ಅವರ ಹತ್ತಿರದವರಿಗೆ ಧೈರ್ಯ ತುಂಬಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ ಸಹ ಅಗಲಿದ ವಿಜ್ಞಾನಿಯನ್ನು ಸ್ಮರಿಸಿದ್ದಾರೆ.

ಪದ್ಮಶ್ರೀ, ಡಾ. ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ, ಎಚ್.ಕೆ. ಫಿರೋಡಿಯಾ ಸೇರಿದಂತೆ ಹಲವಾರು ಅಂತಾರಾಷ್ಟ್ರೀಯ ಪ್ರಶಸ್ತಿಗಳಿಗೆ ಸ್ವರೂಪ್ ಭಾಜನರಾಗಿದ್ದಾರೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು