ಮೋದಿ ಸರ್ಕಾರ ಡಿಜಿಟಲ್‌ ಕ್ರಾಂತಿಗೆ ವಿಶ್ವಸಂಸ್ಥೆ ಬಹುಪರಾಕ್‌ :80 ಕೋಟಿ ಜನರು ಬಡತನದಿಂದ ಮುಕ್ತ!

Published : Aug 03, 2024, 09:13 AM ISTUpdated : Aug 05, 2024, 02:57 PM IST
ಮೋದಿ ಸರ್ಕಾರ ಡಿಜಿಟಲ್‌ ಕ್ರಾಂತಿಗೆ ವಿಶ್ವಸಂಸ್ಥೆ ಬಹುಪರಾಕ್‌ :80 ಕೋಟಿ ಜನರು ಬಡತನದಿಂದ ಮುಕ್ತ!

ಸಾರಾಂಶ

ಧಾನಿ ನರೇಂದ್ರ ಮೋದಿ ಸರ್ಕಾರದ ಡಿಜಿಟಲೀಕರಣ ನೀತಿಯನ್ನು ಬಹುವಾಗಿ ಹಾಡಿಹೊಗಳಿರುವ ವಿಶ್ವಸಂಸ್ಥೆ, ‘ಕಳೆದ 5-6 ವರ್ಷಗಳಲ್ಲಿ ಭಾರತದಲ್ಲಿ ಕಂಡುಬಂದ ಡಿಜಿಟಲ್‌ ಕ್ರಾಂತಿ ಮತ್ತು ಸ್ಮಾರ್ಟ್‌ಫೋನ್‌ ಬಳಕೆಯಿಂದ 80 ಕೋಟಿ ಜನರು ಬಡತನದಿಂದ ಮುಕ್ತರಾಗಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ.

ನವದೆಹಲಿ (ಆ.3): ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಡಿಜಿಟಲೀಕರಣ ನೀತಿಯನ್ನು ಬಹುವಾಗಿ ಹಾಡಿಹೊಗಳಿರುವ ವಿಶ್ವಸಂಸ್ಥೆ, ‘ಕಳೆದ 5-6 ವರ್ಷಗಳಲ್ಲಿ ಭಾರತದಲ್ಲಿ ಕಂಡುಬಂದ ಡಿಜಿಟಲ್‌ ಕ್ರಾಂತಿ ಮತ್ತು ಸ್ಮಾರ್ಟ್‌ಫೋನ್‌ ಬಳಕೆಯಿಂದ 80 ಕೋಟಿ ಜನರು ಬಡತನದಿಂದ ಮುಕ್ತರಾಗಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ.

ವಿಶ್ವಸಂಸ್ಥೆಯ ‘ಆಹಾರ ಮತ್ತು ಕೃಷಿ ಸಂಸ್ಥೆಯ ಹಮ್ಮಿಕೊಂಡಿದ್ದ ‘ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಗೆ ಶೂನ್ಯ ಹಸಿವಿನ ಕಡೆಗೆ ಪ್ರಗತಿಯನ್ನು ವೇಗಗೊಳಿಸುವುದು’ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಅಧ್ಯಕ್ಷ ಡೆನ್ನಿಸ್‌ ಫ್ರಾನ್ಸಿಸ್‌ ಈ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ.

ಇವನ ಬಳಿ ದೇಶ ಸುಧಾರಿಸುವ ಐಡಿಯಾಗಳಿವೆಯಂತೆ; ಜಿಲ್ಲಾಧಿಕಾರಿ ಹುದ್ದೆಗೆ ಬೇಡಿಕೆ ಇಟ್ಟ ವಿಚಿತ್ರ ಯುವಕ!

ಡಿಜಿಟಲೀಕರಣ ದೇಶವೊಂದರ ತ್ವರಿತ ಅಭಿವೃದ್ಧಿಗೆ ವೇದಿಕೆ ಒದಗಿಸುತ್ತದೆ. ಉದಾಹರಣೆಗೆ ಭಾರತವನ್ನೇ ತೆಗೆದುಕೊಳ್ಳಿ, ಕಳೆದ 5-6 ವರ್ಷಗಳಲ್ಲಿ ಕೇವಲ ಸ್ಮಾರ್ಟ್‌ಫೋನ್‌ ಬಳಸಿಕೊಂಡು ಭಾರತ 80 ಕೋಟಿ ಜನರನ್ನು ಬಡತನದಿಂದ ಮೇಲೆತ್ತಿದೆ. ಭಾರತದಲ್ಲಿ ಈ ಹಿಂದೆ ಗ್ರಾಮೀಣ ಭಾಗದ ಜನರಿಗೆ ಬ್ಯಾಂಕುಗಳ ಸೇವೆ ಹೇಗೆ ಪಡೆಯಬೇಕು ಎನ್ನುವ ಅರಿವಿರಲಿಲ್ಲ. ಅದರೆ ಅಂತಜಾರ್ಲ ಸೇವೆ ಸರ್ವವ್ಯಾಪಿಯಾಗಿರುವ ಕಾರಣ ಮತ್ತು ಜನರು ಸ್ಮಾರ್ಟ್‌ಫೋನ್‌ಗಳನ್ನು ಬಳಸುವ ಕಾರಣ, ಇದೀಗ ಹಳ್ಳಿಯ ಜನರು ಕೂಡಾ ಮೊಬೈಲ್‌ಗಳಲ್ಲೇ ವಹಿವಾಟು ನಡೆಸುತ್ತಿದ್ದಾರೆ.

 

ಮುಸ್ಲಿಂ, ಪಾರ್ಸಿ, ಕ್ರೈಸ್ತ ​- ಪಾಸ್ತಾಗೆ ಬೇವಿನ ಒಗ್ಗರಣೆ ಕೊಟ್ಟು ಖಿಚಡಿ ಮಾಡಿದಂಗಾಯ್ತು ಎಂದು ರಾಹುಲ್​ಗೆ ಅನ್ನೋದಾ ಕಂಗನಾ?

 ಸ್ಮಾರ್ಟ್‌ಫೋನ್‌ ಅವರಿಗೆ ಬ್ಯಾಂಕಿಂಗ್‌ ಸೌಲಭ್ಯವನ್ನು ಹತ್ತಿರವಾಗಿಸಿದೆ. ಬಿಲ್ ಪಾವತಿ, ಹಣ ಸ್ವೀಕಾರದಂತಹ ವಹಿವಾಟುಗಳು ಸ್ಮಾರ್ಟ್‌ಫೋನ್‌ಗಳಲ್ಲಿ ನಡೆಯುತ್ತಿದೆ. ಭಾರತದಂಥ ಇಂಥ ಡಿಜಿಟಲ್‌ ಕ್ರಾಂತಿ ದಕ್ಷಿಣ ಏಷ್ಯಾದ ಇತರೆ ದೇಶಗಳಲ್ಲಿ ಕಂಡುಬಂದಿಲ್ಲ ಎಂದು ಹೇಳಿದರು.ನರೇಂದ್ರ ಮೋದಿ ನೇತೃತ್ವದ ಸರ್ಕಾರ ತನ್ನ ಕಳೆದ 10 ವರ್ಷದ ಆಡಳಿತದಲ್ಲಿ ಡಿಜಿಟಲೀಕರಣಕ್ಕೆ ಪ್ರಮುಖ ಆದ್ಯತೆ ನೀಡಿದ್ದು, 500 ಮತ್ತು 1000 ಮುಖಬೆಲೆಯ ನೋಟುಗಳ ಅಪನಗದೀಕರಣದ ಬಳಿಕ ದೇಶದಲ್ಲಿ ಡಿಜಿಟಲ್‌ ಪಾವತಿ, ಸ್ವೀಕಾರ ಭಾರೀ ಏರಿಕೆ ಕಂಡಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!