
ನವದೆಹಲಿ(ನ.05) ಕೇಂದ್ರ ಬಿಜೆಪಿ ಸರ್ಕಾರ ಕಳೆದ ಒಂಭತೂವರೆ ವರ್ಷದಲ್ಲಿ ಭಾರತದ ರಕ್ಷಣಾ ಪಡೆಗಳ ಸ್ವರೂಪ ಬದಲಿಸಿದ್ದಾರೆ. ಅತ್ಯಾಧುನಿಕ ಶಸ್ತ್ರಾಸ್ತ್ರ ಪೂರೈಕೆ, ಗಡಿಯಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ, ಅಗ್ನೀವರ್, ಶಸ್ತ್ರಾಸ್ತ್ರಗಳ ಉತ್ಪಾದನೆ ಸೇರಿದಂತೆ ಹಂತ ಹಂತವಾಗಿ ಭಾರತ ಮಹತ್ತರ ಬದಲಾವಣೆಗ ಮುನ್ನುಡಿ ಬರೆದಿದೆ. ಇದೀಗ ಈ ಬಾರಿಯ ದೀಪಾವಳಿ ಹಬ್ಬಕ್ಕೆ ಮೋದಿ ಸರ್ಕಾರ ಮಹಿಳಾ ಯೋಧರಿಗೆ ಬಂಪರ್ ಕೊಡುಗೆ ಘೋಷಿಸಿದೆ. ಭಾರತೀಯ ಸೇನೆ, ನೌಕಾಪಡೆ ಹಾಗೂ ವಾಯುಸೇನೆಯ ಎಲ್ಲಾ ಮಹಿಳಾ ಯೋಧರು, ಅಧಿಕಾರಿಗಳು, ಯಾವುದೇ ರ್ಯಾಂಕ್ನಲ್ಲಿರುವ ಮಹಿಳೆಯರಿಗೆ ಒಂದೇ ರೀತಿಯ ರಜಾ ಸೌಲಭ್ಯ ಘೋಷಿಸಿದೆ. ಮೆಟರ್ನಿಟಿ ರಜೆ, ಮಕ್ಕಳ ಪಾಲನೆ ರಜನೆ, ಮಕ್ಕಳ ದತ್ತು ಪಾಲನೆ ರಜೆ ಸೇರಿದಂತೆ ಎಲ್ಲಾ ರಜಾ ಸೌಲಭ್ಯಗಳು ಮಹಿಳೆಯರಿಗೆ ಸಮಾನವಾಗಿ ಸಿಗಲಿದೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಹಿಳಾ ಯೋಧರ ರಜೆ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದಾರೆ. ಭದ್ರತಾ ಪಡೆಯಲ್ಲಿರುವ ಎಲ್ಲಾ ಮಹಿಳಾ ಯೋಧರು, ಅಧಿಕಾರಿಗಳು ಸೇರಿದಂತೆ ಎಲ್ಲಾ ಶ್ರೇಣಿಯಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಸಮಾನ ರಜಾ ಸೌಲಭ್ಯ ನೀಡಲಾಗಿದೆ. ಈ ಕುರಿತು ರಾಜನಾಥ್ ಸಿಂಗ್ ಘೋಷಣೆ ಮಾಡಿದ್ದಾರೆ.
ಪಾಕ್ ದಾಳಿಯಲ್ಲಿ ಕರ್ನಾಟಕದ ಯೋಧನಿಗೆ ತೀವ್ರ ಗಾಯ: ಸತತ 7 ತಾಸು ಅಪ್ರಚೋದಿತ ದಾಳಿ ನಡೆಸಿದ ಪಾಕ್ ಸೇನೆ
ಸಶಸ್ತ್ರ ಪಡೆಗಳಲ್ಲಿರುವ ಎಲ್ಲಾ ಮಹಿಳೆಯರಿಗೆ ಸಮಾನರೀತಿಯ ಸೌಲಭ್ಯ ಕಲ್ಪಿಸಲಾಗಿದೆ. ರಜೆ ನಿಯಮಗಳ ವಿಸ್ತರಣೆಯಿಂದ ಮಹಿಳಾ ಯೋಧರ ಮಕ್ಕಳ ಪಾಲನೆ, ಮೆಟರ್ನಿಟಿ ರಜೆಗಳಿಗೆ ಅನೂಕೂಲವಾಗಿದೆ. ಮಹಿಳೆಯರು ಕುಟುಂಬದ ಜವಾಬ್ದಾರಿ ನಿರ್ವಹಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಾರೆ. ಹೀಗಾಗಿ ಮಹಿಳಾ ಯೋಧರಿಗೂ ಇತರ ಶ್ರೇಣಿಯಲ್ಲಿರು ಮಹಿಳಾ ಅಧಿಕಾರಿಗಳಂತೆ ರಜೆ ಅವಶ್ಯಕತೆ ಇತ್ತು. ಈ ಪ್ರಸ್ತಾವನೆಗೆ ರಕ್ಷಣಾ ಸಚಿವಾಲಯ ಅನುಮೋದನೆ ನೀಡಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ಈ ನಿರ್ಧಾರದಿಂದ ವೃತ್ತಿಪರ ಹಾಗೂ ಕೌಟುಂಬಿಕ ಕ್ಷೇತ್ರದಲ್ಲಿ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ ಎಂದಿದ್ದಾರೆ.
2019ರಲ್ಲಿ ಭಾರತೀಯ ಸೇನೆಯ ಕಾರ್ಪ್ ಮಿಲಿಟರಿ ಯೋಧರಾಗಿ ಮಹಿಳೆಯನ್ನು ನೇಮಕ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. ಇದೀಗ ಮಹಿಳೆಯರಿಗೆ ಮತ್ತೊಂದು ಬಂಪರ್ ಕೊಡುಗೆಯನ್ನು ಕೇಂದ್ರ ಸರ್ಕಾರ ನೀಡಿದೆ. 2023ರ ಮಾರ್ಚ್ನಿಂದ ಕಾಶ್ಮೀರದ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಸಿಆರ್ಪಿಎಫ್ನ ಮಹಿಳಾ ಯೋಧರನ್ನು ನಿಯೋಜಿಸಲಾಗಿತ್ತು. 6 ತಿಂಗಳ ಕಾಲ ಪರೀಕ್ಷಾರ್ಥವಾಗಿ ಮಹಿಳಾ ಸಿಆರ್ಪಿಎಫ್ ತಂಡವನ್ನು ನಿಯೋಜಿಸಲಾಗಿತ್ತು. ಈ ವೇಳೆ ಮಹಿಳಾ ಯೋಧರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು.
ಚೀನಾಗೆ ಠಕ್ಕರ್: ತವಾಂಗ್ ಗಡಿಯಲ್ಲಿ ಸೈನಿಕರ ಜತೆ ದಸರಾ ಆಚರಿಸಿದ ರಾಜನಾಥ್ ಸಿಂಗ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ