
ಚೆನ್ನೈ(ಫೆ.14): ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ಚೆನ್ನೈನ ಕಾರ್ಯಕ್ರಮವೊಂದರಲ್ಲಿ ತಮಿಳುನಾಡಿನ ರೈತರನ್ನು ಹಾಡಿ ಹೊಗಳಿದ್ದಾರೆ. ರೈತರು ದಾಖಲೆ ಪ್ರಮಾಣದಲ್ಲಿ ಭತ್ತ ಬೆಳೆಯುತ್ತಿರುವ ಹಾಗೂ ಜಲ ಸಂಪನ್ಮೂಲಗಳ ಸರಿಯಾದ ಬಳಕೆ ಮಾಡಿರುವ ಬಗ್ಗೆ ಶ್ಲಾಘಿಸಿದ್ದಾರೆ. ದೆಹಲಿಯಲ್ಲಿ ಪಂಜಾಬ್, ಹರ್ಯಾಣ ಹಾಗೂ ಉತ್ತರ ಪ್ರದೇಶದ ರೈತರು ಕೃಷಿ ಮಸೂದೆ ವಿರುದ್ಧ ಪ್ರತಿಭಟಿಸುತ್ತಿರುವ ಸಂದರ್ಭದಲ್ಲಿ ಪಿಎಂ ಮೋದಿ ಈ ಹೇಳಿಕೆ ನೀಡಿದ್ದಾರೆಂಬುವುದು ಉಲ್ಲೇಖನೀಯ.
"
ನಾನು ತಮಿಳುನಾಡು ರೈತರನ್ನು ದಾಖಲೆ ಪ್ರಮಾಣದಲ್ಲಿ ಭತ್ತ ಬೆಳೆಯುತ್ತಿರುವ ಹಾಗೂ ಜಲ ಸಂಪನ್ಮೂಲಗಳ ಸರಿಯಾದ ಬಳಕೆ ಮಾಡುತ್ತಿರುವುದಕ್ಕೆ ಶ್ಲಾಘಿಸುತ್ತೇನೆ. ಜಲ ಸಂರಕ್ಷಣೆಗೆ ನಮ್ಮಿಂದ ಏನು ಮಾಡಲು ಸಾಧ್ಯವೋ, ಅದೆಲ್ಲವನ್ನೂ ನಾವು ಮಾಡಬೇಕು ಎಂದಿದ್ದಾರೆ.
ಚೆನ್ನೈನ ಜವಾಹರಲಾಲ್ ನೆಹರೂ ಸ್ಟೇಡಿಯಂನಲ್ಲಿ ತಮಿಳುನಾಡು ಸರ್ಕಾರದ ಹಲವಾರು ಯೋಜನೆಗಳನ್ನು ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿದ ಬಳಿಕ ಪಿಎಂ ಮೋದಿ ಇಲ್ಲಿನ ಕಾಲುವೆ ಸಾವಿರಾರು ವರ್ಷಗಳಿಂದ ದೇಶದ ಜನರ ಬಟ್ಟಲಿಗೆ ಅಕ್ಕಿ ಎಂಬ ವರದಾನ ನೀಡುತ್ತಿದೆ. ವಿಶಾಲವಾಗಿರುವ ಈ ಕಾಲುವೆ ನಮ್ಮ ಶ್ರೀಮಂತ ಇತಿಹಾಸದ ಜೀವಂತಿಕೆಗೆ ಸಾಕ್ಷಿಯಾಗಿದೆ. ಇಂದು ನಾವು ಚೆನ್ನೈನಿಂದ ಇಂತಹುದೇ ನಾವೀನ್ಯತೆ ಮತ್ತು ಸ್ವದೇಶೀ ನಿರ್ಮಾಣದ ಸಂಕೇತವಾಗಿರುವ ಯೋಜನೆಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಯೋಜನೆಗಳು ತಮಿಳುನಾಡನ್ನು ಅಭಿವೃದ್ಧಿಯ ಪಥಕ್ಕೊಯ್ಯಲಿವೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ