
ನವದೆಹಲಿ(ಏ.17): ದೇಶದಲ್ಲಿ ಕೊರೋನಾ ಪರಿಸ್ಥಿತಿ ಅತ್ಯಂತ ಭೀಕರವಾಗುತ್ತಿದೆ. ದಿನವೊಂದಕ್ಕೆ 2 ಲಕ್ಷಕ್ಕೂ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿದೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ. ಆದರೆ ಕೊರೋನಾ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಕೊರೋನಾ ನಿಯಂತ್ರಣ, ಕೊರೋನಾ ಲಸಿಕೆ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮಹತ್ವದ ಸಭೆ ಕರೆದಿದ್ದಾರೆ.
ಕೊರೋನಾ ಸಭೆ ಬಳಿಕ ಮಹತ್ವದ ಸೂಚನೆ ನೀಡಿದ ಪ್ರಧಾನಿ ಮೋದಿ!.
ಇಂದು(ಏ.17) ರಾತ್ರಿ 8 ಗಂಟೆಗೆ ಸಭೆ ಕರೆಯಲಾಗಿದೆ. ಉನ್ನತ ಅಧಿಕಾರಿಗಳು, ತಜ್ಞರು, ಹಾಗೂ ಪ್ರಮುಖ ಸಚಿವರು ಈ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ದೇಶದಲ್ಲಿನ ಕೊರೋನಾ ಪರಿಸ್ಥಿತಿ, ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಕೊರೋನಾ ಲಸಿಕೆ ವಿತರಣೆ ಕುರಿತು ಈ ಸಭೆಯಲ್ಲಿ ಚರ್ಚಿಸಲಾಗುತ್ತದೆ.
ಒಂದು ಡೋಸ್ ಲಸಿಕೆಯನ್ನು ವ್ಯರ್ಥ ಮಾಡಬೇಡಿ: ನರೇಂದ್ರ ಮೋದಿ!
ದೇಶದಲ್ಲಿ 2ನೇ ಅಲೆ ಆರಂಭಗೊಂಡ ಬಳಿಕ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದ್ದರು. ಪ್ರಮುಖ ಅಧಿಕಾರಿಗಳು, ತಜ್ಞರ ಜೊತೆ ಸಭೆ ನಡೆಸಿದ ಮೋದಿ, ಬಳಿಕ ಎಲ್ಲಾ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಹತ್ವದ ಸಲಹೆ ನೀಡಿದ್ದರು. ಇದೀಗ ದೇಶದಲ್ಲಿನ ಕೊರೋನಾ ಪರಿಸ್ಥಿತಿ ಪರಾಮರ್ಶಿಸಿಲು ಮತ್ತೊಂದು ಸಭೆ ಕರೆಯಲಾಗಿದೆ.
ಮೋದಿ ಐಡಿಯಾ, 2 ವಾರದಲ್ಲಿ ಮ್ಯಾಜಿಕ್: 1000ಕ್ಕೂ ಹೆಚ್ಚು ಕೇಸಿದ್ದರೂ ಮಣಿಪಾಲ ಸೋಂಕುಮುಕ್ತ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ