
ನವದೆಹಲಿ(ಜ.28): ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶದ 6 ಸಾವಿರ ರೈತರ ಖಾತೆಗಳಿಗೆ ತಲಾ 2 ಸಾವಿರ ರೂ.ದಂತೆ ಒಟ್ಟು 12 ಸಾವಿರ ಕೋಟಿ ರೂ.ಗಳನ್ನು ನೇರವಾಗಿ ಹಾಕಿದ್ದು ಐತಿಹಾಸಿಕ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.
ಜಾಗತಿಕ ಆಲೂಗಡ್ಡೆ ಸಮಾವೇಶದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ, 12 ಸಾವಿರ ಕೋಟಿ ರೂ.ಗಳನ್ನು ಏಕಕಾಲಕ್ಕೆ ನೇರವಾಗಿ ರೈತರ ಖಾತೆಗೆ ಹಾಕುವ ನಿರ್ಧಾರ ಐತಿಹಾಸಿಕ ಎಂದು ಬಣ್ಣಿಸಿದರು.
ರೈತ ದರ್ಶನ ನನ್ನ ಸೌಭಾಗ್ಯ: ಕಿಸಾನ್ ಸಮ್ಮಾನ್ ಹಣ ಬಿಡುಗಡೆ ಮಾಡಿದ ಮೋದಿ!
ಜಾಗತಿಕ ಉತ್ಪಾದನಾ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಉತ್ತಮ ಸ್ಥಾನ ಹೊಂದಿದ್ದು, ಈ ದೇಶದ ರೈತರು ಕಷ್ಟಪಟ್ಟು ದುಡಿಯುತ್ತಿರುವ ಪರಿಣಾಮವಿದು ಎಂದು ಮೋದಿ ಹೇಳಿದರು.
ಧಾನ್ಯಗಳ ಉತ್ಪಾದನೆಯಲ್ಲಿ ಭಾರತ ಇಡೀ ವಿಶ್ವದಲ್ಲೇ ಮೂರನೇ ಸ್ಥಾನದಲ್ಲಿದ್ದು, ಇತರ ಆಹಾರ ಪದಾರ್ಥಗಳ ಉತ್ಪನ್ನದಲ್ಲೂ ಗಮನಾರ್ಹ ಸಾಧನೆ ಮಾಡಿದೆ ಎಂದು ಈ ವೇಳೆ ಪ್ರಧಾನಿ ಮೋದಿ ನುಡಿದರು.
ರೈತರ ಖಾತೆಗೆ 12 ಸಾವಿರ ಕೋಟಿ ವರ್ಗಾವಣೆ
ದೇಶದ ರೈತರ ಬೆನ್ನೆಲುಬಾಗಿ ಕೇಂದ್ರ ಸರ್ಕಾರ ಸದಾ ನಿಲ್ಲಲಿದ್ದು, ಹಸಿರು ಕ್ರಾಂತಿಯ ಓಟ ಹೀಗೆಯೇ ಮುಂದುವರೆಯಲಿದೆ ಎಂದು ಮೋದಿ ಈ ವೇಳೆ ಹಾರೈಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ