ಮಹಾರಾಷ್ಟ್ರದ ವಾಧ್ವಾನ್‌ಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ: ಭಾರತದ ಅತಿದೊಡ್ಡ ಬಂದರು ಹೀಗಿರಲಿದೆ!

Published : Aug 31, 2024, 05:59 AM IST
ಮಹಾರಾಷ್ಟ್ರದ ವಾಧ್ವಾನ್‌ಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ: ಭಾರತದ ಅತಿದೊಡ್ಡ ಬಂದರು ಹೀಗಿರಲಿದೆ!

ಸಾರಾಂಶ

ಭಾರತಕ್ಕೆ ಅಂತಾರಾಷ್ಟ್ರೀಯ ಹಡಗು ಮಾರ್ಗದೊಂದಿಗೆ ನೇರ ಸಂಪರ್ಕ ಕಲ್ಪಿಸುವ, ದೇಶದ ಬೃಹತ್‌ ಬಂದರು ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಇಲ್ಲಿ ಶಂಕುಸ್ಥಾಪನೆ ನೆರವೇರಿಸಿದರು. 

ಪಾಲ್ಘರ್ (ಮಹಾರಾಷ್ಟ್ರ) (ಆ.31): ಭಾರತಕ್ಕೆ ಅಂತಾರಾಷ್ಟ್ರೀಯ ಹಡಗು ಮಾರ್ಗದೊಂದಿಗೆ ನೇರ ಸಂಪರ್ಕ ಕಲ್ಪಿಸುವ, ದೇಶದ ಬೃಹತ್‌ ಬಂದರು ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಇಲ್ಲಿ ಶಂಕುಸ್ಥಾಪನೆ ನೆರವೇರಿಸಿದರು. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದಹಾನು ನಗರದ ವ್ಯಾಪ್ತಿಯಲ್ಲಿ ವಾಧ್ವಾನ್‌ ಬಂದರನ್ನು 76 ಸಾವಿರ ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. 2030ರಲ್ಲಿ ಬಂದರು ನಿರ್ಮಾಣ ಪೂರ್ಣಗೊಂಡ ಬಳಿಕ ಇದು ‘ದೇಶದ ಅತಿ ಬೃಹತ್ ಬಂದರುಗಳಲ್ಲಿ ಒಂದು ಹಾಗೂ ‘ವಿಶ್ವದ ಟಾಪ್‌ 10’ ಬಂದರುಗಳಲ್ಲಿ ಒಂದೆನ್ನಿಸಿಕೊಳ್ಳಲಿದೆ. 

ಅರಬ್ಬೀ ಸಮುದ್ರದಲ್ಲಿ ನಿರ್ಮಾಣಗೊಳ್ಳಲಿರುವ ಈ ಬಂದರು ಪೂರ್ವ ಏಷ್ಯಾ, ಯುರೋಪ್‌, ಮಧ್ಯಪ್ರಾಚ್ಯ, ಆಫ್ರಿಕಾ ಮತ್ತು ಅಮೆರಿಕ ದೇಶಗಳಿಗೆ ಹಡಗು ಮಾರ್ಗದಲ್ಲಿ ಭಾರತದ ವ್ಯಾಪಾರ ಅಭಿವೃದ್ಧಿಗೆ ಭಾರೀ ನೆರವಾಗಲಿದೆ. ಜೊತೆಗೆ ಸಮಯ ಮತ್ತು ವೆಚ್ಚ ಉಳಿತಾಯಕ್ಕೂ ನೆರವಾಗಲಿದೆ. 12 ಲಕ್ಷ ಉದ್ಯೋಗ ಸೃಷ್ಟಿಸಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಯೋಜನೆಯಲ್ಲಿ ಶೇ.74ರಷ್ಟು ಪಾಲನ್ನು ಜವಾಹರ್‌ಲಾಲ್‌ ನೆಹರೂ ಬಂದರು ಪ್ರಾಧಿಕಾರ ಹೊಂದಿದ್ದರೆ, ಶೇ.26ರಷ್ಟು ಪಾಲನ್ನು ಮಹಾರಾಷ್ಟ್ರ ಸಾಗರ ಮಂಡಳಿ ಹೊಂದಿರಲಿದೆ.

ಹೀಗಿರಲಿದೆ ಬಂದರು: ಸಮುದ್ರದಲ್ಲಿ 1448 ಹೆಕ್ಟೇರ್‌ ಪ್ರದೇಶವನ್ನು ಬಳಸಿಕೊಂಡು ಬಂದರು ನಿರ್ಮಿಸಲಾಗುವುದು. ಜೊತೆಗೆ ಸಮುದ್ರದಲ್ಲಿ 10.14 ಕಿ.ಮೀ ಉದ್ದದಷ್ಟು ಜಾಗದಲ್ಲಿ ತಡೆಗೋಡೆ ನಿರ್ಮಿಸಲಾಗುವುದು. ಈ ಅತ್ಯಾಧುನಿಕ ಬಂದರು 1000 ಮೀಟರ್‌ ಉದ್ದದ 9 ಕಂಟೇನರ್‌ ಟರ್ಮಿನಲ್ಸ್‌, ಮಲ್ಟಿಪರ್ಪಸ್‌ ಬರ್ತ್ಸ್‌, ಲಿಕ್ವಿಡ್‌ ಕಾರ್ಗೋ ಬರ್ತ್ಸ್‌, ರೋ- ರೋ ಬರ್ತ್ಸ್‌ ಮತ್ತು ಕರಾವಳಿ ಕಾವಲು ಪಡೆಗೆಂದೇ ಪ್ರತ್ಯೇಕ ಬರ್ತ್‌ (ತಂಗುದಾಣ) ಹೊಂದಿರಲಿದೆ. ವಾರ್ಷಿಕ 298 ಎಂಎಂಟಿಯಷ್ಟು ಸರಕು ನಿರ್ವಹಣೆ ಸಾಮರ್ಥ್ಯ ಹೊಂದಿರಲಿದೆ.

ಬಳ್ಳಾರಿ ಜೈಲಲ್ಲಿ ಮಂಕಾದ ದರ್ಶನ್‌: ಬ್ಯಾರಕ್‌ನಲ್ಲೇ ಓಡಾಟ

ಐತಿಹಾಸಿಕ ದಿನ- ಮೋದಿ: ಬಂದರಿಗೆ ಚಾಲನೆ ನೀಡಿ ಮಾತನಾಡಿದ ಮೋದಿ, ‘ದೇಶದ ಅಭಿವೃದ್ಧಿಯ ಪಥದಲ್ಲಿ ಇಂದು ಐತಿಹಾಸಿಕ ದಿನ. ನವ ಭಾರತ ತನ್ನ ಸಾಮರ್ಥ್ಯ ಅರಿತುಕೊಂಡಿದೆ ಮತ್ತು ಗುಲಾಮಗಿರಿಯ ಸಂಕೋಲೆಯಿಂದ ಹೊರಬಂದಿದೆ. ಇದಕ್ಕೆ ವಾಧ್ವಾನ್ ಬಂದರು ನಿರ್ಮಾಣಕ್ಕೆ ಮುಂದಾಗಿರುವುದು ಸಾಕ್ಷಿ. ಇದು ದೇಶದ ಆರ್ಥಿಕತೆಗೆ ಗಮನಾರ್ಹ ಕೊಡುಗೆ ನೀಡಲಿದೆ. 12 ಲಕ್ಷ ಉದ್ಯೋಗಗಳು ಸೃಷ್ಟಿ ಆಗಲಿವೆ’ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್