PM Modi in Mysuru ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ!

Published : Jun 20, 2022, 08:48 PM ISTUpdated : Jun 20, 2022, 11:09 PM IST
PM Modi in Mysuru ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ!

ಸಾರಾಂಶ

ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಳಿಕ ಚಾಮಂಡಿ ಬೆಟ್ಟಕ್ಕೆ ಮೋದಿ ಚಾಮಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿ ವಿಶೇಷ ಪೂಜೆ ಸಲ್ಲಿಸಿದ ಮೋದಿ ಚಾಮುಂಡೇಶ್ವರಿಗೆ ಮೋದಿ ಕುಂಕುಮಾರ್ಚನೆ ಪೂಜೆ

ಮೈಸೂರು(ಜೂ.20): ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ನಾಡದೇವವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಸಾಥ್ ನೀಡಿದರು.

ಸುತ್ತೂರು ಮಠದಲ್ಲಿನ ಕಾರ್ಯಕ್ರಮ ಮುಗಿಸಿದ ಮೋದಿ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿದರು. ಬೆಟ್ಟಕ್ಕೆ ತೆರಳು ಮಾರ್ಗದುದ್ದಕ್ಕೂ ಜನರು ಮೋದಿ ನೋಡಲು ಕಾದು ಕುಳಿತಿದ್ದರು. ಎಲ್ಲರತ್ತ ಕೈಬೀಸುತ್ತಾ ತೆರಳಿದ ಮೋದಿ ಚಾಮುಂಡೇಶ್ವರಿ ದೇಗುಲ ಪ್ರವೇಶಿಸಿದರು.

PM Modi in Mysuru ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ!

ಚಾಮುಂಡೇಶ್ವರಿ ದೇಗುಲ ಪ್ರೇವಶ ದ್ವಾರದಲ್ಲಿರುವ ಗಣಪತಿಗೆ ಪೂಜೆ ಸಲ್ಲಿಸಿದ ಮೋದಿ ಒಳ ಪ್ರವೇಶಿಸಿದರು. ಈ ವೇಳೆ ಅರ್ಚಕರು ಶಾಲು ಹೊದಿಸಿ ಪ್ರಧಾನಿಯನ್ನು ಸ್ವಾಗತಿಸಿದರು. ನಾಡದೇವತೆಗೆ ಪಾರ್ಥನೆ ಸಲ್ಲಿಸಿದ ಮೋದಿ ಕುಂಕುಮಾರ್ಚನೆ ಪೂಜೆ ನೆರವೇರಿಸಿದರು.


ದೇವಸ್ಥಾನದ ಗರ್ಭಗುಡಿ ಎದುರು ಕುಳಿತು ಪೂಜೆ ನೆರವೇರಿಸಿದರು. ಇದೇ ವೇಳೆ ಮೋದಿ ನಾಡದೇವತೆ ಎದರು ಸಂಕಲ್ಪ ಮಾಡಿದರು. ಬಳಿಕ ಗರ್ಭಗುಡಿಗೆ ಸುತ್ತು ಹಾಕಿದ ಮೋದಿ, ಚಾಮುಂಡಿ ತಾಯಿ ಪಾದಕ್ಕೆ ನಮಸ್ಕರಿಸಿದರು.ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿ ಹೊರಬಂದ ಮೋದಿ ದೇಗುಲಕ್ಕೆ ಕಾಣಿಕೆ ಹಾಕಿದರು. 

 

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಮೈಸೂರು ವಿವಿ ಕಾರ್ಯಸೌಧದ ಎದುರಿನ ಓವಲ್‌ ಮೈದಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಜತೆಗೂಡಿ ವಿಶೇಷ ಸೇನಾ ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಅವರನ್ನು ಸಚಿವ ಕೆ. ಗೋಪಾಲಯ್ಯ, ಡಾ.ಕೆ. ಸುಧಾಕರ್‌, ಶಾಸಕರಾದ ಜಿ.ಟಿ. ದೇವೇಗೌಡ, ಎಲ…. ನಾಗೇಂದ್ರ, ಸಂಸದ ಪ್ರತಾಪ್‌ ಸಿಂಹ, ಮೇಯರ್‌ ಸುನಂದಾ ಪಾಲನೇತ್ರ ಆತ್ಮೀಯವಾಗಿ ಸ್ವಾಗತಿಸಿದರು.

ಕೇಂದ್ರ ಪುರಸ್ಕೃತ ಯೋಜನೆಗಳ ಆಯ್ದ ಫಲಾನುಭವಿಗಳೊಡನೆ ಸಂವಾದ ನಡೆಸಿ ವೇದಿಕೆಗೆ ಆಗಮಿಸಿದ ಪ್ರಧಾನಿಗೆ ಸಿಎಂ ಬೊಮ್ಮಾಯಿ ವಿಶೇಷವಾಗಿ ರೇಷ್ಮೆಯಿಂದ ಸಿದ್ಧಪಡಿಸಿದ ಮೈಸೂರು ಪೇಟ ಮತ್ತು ಸ್ಮರಣಿಕೆ ನೀಡಿ ಗೌರವಿಸಿದರು.

ಕರ್ನಾಟಕದಲ್ಲಿ ಮೋದಿ ಸಂಚಲನ, ಬೆಂಗಳೂರು ಮೈಸೂರಿನಲ್ಲಿ ಹಲವು ಕಾರ್ಯಕ್ರಮ!

ಕೇಂದ್ರ ಯೋಜನೆಗಳ ಫಲಾನುಭವಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ಸಂವಾದ ನಡೆಸಿ, ಸಾರ್ವಜನಿಕರು ಯೋಜನೆಯ ಪ್ರಯೋಜನ ಪಡೆಯುವಂತೆ ಕಿವಿಮಾತು ಹೇಳಿದರು. ಬೆಂಗಳೂರಿನಿಂದ ಮೈಸೂರು ವಿವಿ ಓವೆಲ್‌ ಮೈದಾನದ ಹೆಲಿಪ್ಯಾಡ್‌ಗೆ ಆಗಮಿಸಿ ನಂತರ ಮಹಾರಾಜ ಕಾಲೇಜು ಮೈದಾನದ ವೇದಿಕೆ ಹಿಂಭಾಗದಲ್ಲಿ ಏರ್ಪಡಿಸಿದ್ದ ಕೇಂದ್ರದ ಯೋಜನೆಗಳ 15 ಫಲಾನುಭವಿಗಳ ಜತೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಚರ್ಚಿಸಿದರು. ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಯಿಂದ ಬಂದ ಫಲಾನುಭವಿಗಳು ಪ್ರಧಾನಿ ಮೋದಿ ಅವರ ಜತೆ ಚರ್ಚಿಸಿ ಕೇಂದ್ರ ಯೋಜನೆಯಿಂದ ಆದ ಉಪಯೋಗದ ಬಗ್ಗೆ ಮಾಹಿತಿ ನೀಡಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ
ಲೋಕಸಭೆಯಲ್ಲಿ ನೌಕರರ ಪರ ಮಸೂದೆ ಮಂಡನೆ: ಉದ್ಯೋಗಿಗಳ ಲೈಫ್​ ಜಿಂಗಾಲಾಲಾ- ಏನಿದೆ ಇದರಲ್ಲಿ?