ನೆರವು ಕೇಳಿದವನ ಮನೆಗೆ 2 ಗಂಟೇಲಿ ಅಕ್ಕಿ ಕಳುಹಿಸಿದ ಪ್ರಧಾನಿ ಮೋದಿ

Kannadaprabha News   | Asianet News
Published : Apr 03, 2020, 10:56 AM IST
ನೆರವು ಕೇಳಿದವನ ಮನೆಗೆ 2 ಗಂಟೇಲಿ ಅಕ್ಕಿ  ಕಳುಹಿಸಿದ ಪ್ರಧಾನಿ ಮೋದಿ

ಸಾರಾಂಶ

ಲಾಕ್‌ಡೌನ್‌ ವೇಳೆ ಒಂದೊತ್ತಿನ ಊಟಕ್ಕೂ ಇಲ್ಲದೆ ಸಂಕಷ್ಟಕ್ಕೀಡಾಗಿದ್ದ ಯುವಕನೊಬ್ಬನಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಮಧ್ಯಸ್ಥಿಕೆ ಪರಿಣಾಮ ಅಕ್ಕಿ ಪೂರೈಕೆಯಾದ ಅಚ್ಚರಿಯ ಘಟನೆ ಕೇರಳದಲ್ಲಿ ನಡೆದಿದೆ.

ತಿರುವನಂತಪುರ (ಏ. 03):  ಲಾಕ್‌ಡೌನ್‌ ವೇಳೆ ಒಂದೊತ್ತಿನ ಊಟಕ್ಕೂ ಇಲ್ಲದೆ ಸಂಕಷ್ಟಕ್ಕೀಡಾಗಿದ್ದ ಯುವಕನೊಬ್ಬನಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಮಧ್ಯಸ್ಥಿಕೆ ಪರಿಣಾಮ ಅಕ್ಕಿ ಪೂರೈಕೆಯಾದ ಅಚ್ಚರಿಯ ಘಟನೆ ಕೇರಳದಲ್ಲಿ ನಡೆದಿದೆ.

ಕಲ್ಲಿಕೋಟೆ ಜಿಲ್ಲೆಯ ಮಣಿಯೂರು ಗ್ರಾಮದ ವೇಣುಗೋಪಾಲ್‌ ಎಂಬಾತನೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡುವ ಮೂಲಕ ಮನೆ ಬಾಗಿಲಿಗೇ ಅಕ್ಕಿ ತರಿಸಿಕೊಂಡ ಯುವಕ. ಇಡೀ ದೇಶವೇ ಕೊರೋನಾ ಲಾಕ್‌ಡೌನ್‌ಗೆ ಒಳಗಾದಾಗ ಕೇರಳ ಸರ್ಕಾರ ಜನ ಸಾಮಾನ್ಯರಿಗೆ ಮನೆ ಬಾಗಿಲಿಗೇ ಪಡಿತರ ವಿತರಿಸುವುದಾಗಿ ಭರವಸೆ ನೀಡಿತ್ತು.

ಆದರೆ, ಕೇರಳದಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್‌ ವಿಧಿಸಲಾದ ಪರಿಣಾಮ ಈ ಯುವಕನಿಗೆ ಅಕ್ಕಿ ಸೇರಿದಂತೆ ಯಾವೊಂದು ಆಹಾರ ಪರಿಕರಗಳು ವಿತರಣೆಯಾಗಲಿಲ್ಲ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ, ಏನೂ ಪ್ರಯೋಜನವಾಗಲಿಲ್ಲ. ಹೀಗಾಗಿ, ಈ ಯುವಕ ಕೊನೆಗೆ ಇ ಮೇಲ್‌ ಮೂಲಕ ಪ್ರಧಾನಿ ಕಾರ್ಯಾಲಯದ ಕದ ತಟ್ಟಿದ. ಈ ಘಟನೆ ನಡೆದು 2 ಗಂಟೆಯಲ್ಲೇ ಕೇರಳದ ಸಿಬ್ಬಂದಿ ಮೂಲಕ ಯುವಕನ ಮನೆಗೇ ಪ್ರಧಾನಿ ಕಾರ್ಯಾಲಯ ಪಡಿತರ ಪೂರೈಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು