ನೀಟ್ ಹಗರಣ: ಕೊನೆಗೂ ಮೌನ ಮುರಿದ ಮೋದಿ, ತಪ್ಪಿತಸ್ಥರಿಗೆ ಕಾದಿದೆ ಶಾಕ್..!

Published : Jul 23, 2026, 09:42 AM ISTUpdated : Jul 23, 2026, 10:02 AM IST
Narendra modi on neet exam paper leak

ಸಾರಾಂಶ

ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕೊನೆಗೂ ಮೌನ ಮುರಿದಿದ್ದಾರೆ. ಯುವಕರ ಭವಿಷ್ಯವೇ ನಮಗೆ ಮುಖ್ಯವಾಗಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಅವರು ಘೋಷಿಸಿದ್ದಾರೆ.

ನವದೆಹಲಿ: ದೇಶಾದ್ಯಂತ ಭಾರೀ ಸಂಚಲನ ಮೂಡಿಸಿರುವ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ (Paper Leak) ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕೊನೆಗೂ ಮೌನ ಮುರಿದಿದ್ದಾರೆ. ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಮತ್ತು ಸಂಸತ್ತಿನಲ್ಲಿ ವಿರೋಧ ಪಕ್ಷಗಳ ಗದ್ದಲದ ನಡುವೆಯೇ ಪ್ರಧಾನಿ ಮೋದಿ ಅವರು ಇಂದು ಬೆಳಗ್ಗೆ ಯುವಜನತೆಗೆ ಒಂದು ದೊಡ್ಡ ಭರವಸೆಯ ಸಂದೇಶ ರವಾನಿಸಿದ್ದಾರೆ.

ಯುವಕರ ಭವಿಷ್ಯವೇ ನಮಗೆ ಮುಖ್ಯ

ತಮ್ಮ ಅಧಿಕೃತ 'X' ಖಾತೆಯಲ್ಲಿ ಈ ಬಗ್ಗೆ ಸುದೀರ್ಘ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ನಮ್ಮ ಯುವಕರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ನಮಗೆ ಬೇರೆ ಯಾವುದೂ ಮುಖ್ಯವಲ್ಲ. ಪೇಪರ್ ಲೀಕ್ ಪ್ರಕರಣಗಳಲ್ಲಿ ಭಾಗಿಯಾಗಿರುವವರಿಗೆ ತಕ್ಷಣವೇ ಮತ್ತು ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆ

ಪೇಪರ್ ಲೀಕ್ ಪ್ರಕರಣಗಳ ವಿಚಾರಣೆಯನ್ನು ತ್ವರಿತವಾಗಿ ನಡೆಸಲು ಫಾಸ್ಟ್ ಟ್ರ್ಯಾಕ್ (Fast-track courts) ನ್ಯಾಯಾಲಯಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೋಷಿಗಳಿಗೆ ಶೀಘ್ರವಾಗಿ ಮತ್ತು ಕಠಿಣ ಶಿಕ್ಷೆ ಸಿಗುವುದನ್ನು ಖಚಿತಪಡಿಸಿಕೊಳ್ಳಲು ನಾವು ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು ಸ್ಥಾಪಿಸಲು ನಿರ್ಧರಿಸಿದ್ದೇವೆ. ಈ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಇಲಾಖೆಗಳಿಗೆ ಸೂಚನೆ ನೀಡಿದ್ದೇನೆ ಎಂದು ಮೋದಿ ಸ್ಪಷ್ಟಪಡಿಸಿದ್ದಾರೆ.

ತಪ್ಪು ಮಾಡಿದವರನ್ನು ಬಿಡುವುದಿಲ್ಲ

ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸಲು ಸರ್ಕಾರ ಸರಣಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದರ ಭಾಗವಾಗಿಯೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಯುವಕರ ಭವಿಷ್ಯದ ಜೊತೆ ಆಟವಾಡುವ ಅಥವಾ ಹಾನಿ ಮಾಡುವ ಪ್ರಯತ್ನ ನಡೆಸುವ ಯಾರನ್ನೂ ಸುಮ್ಮನೆ ಬಿಡುವುದಿಲ್ಲ ಎಂದು ಪ್ರಧಾನಿ ಎಚ್ಚರಿಕೆ ನೀಡಿದ್ದಾರೆ.

ನೀಟ್ (NEET) ಮತ್ತು ನೆಟ್ (NET) ಪರೀಕ್ಷೆಗಳ ಅಕ್ರಮದ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ದೇಶಾದ್ಯಂತ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕುತ್ತಿದ್ದರು. ಸಂಸತ್ತಿನ ಅಧಿವೇಶನದಲ್ಲೂ ವಿರೋಧ ಪಕ್ಷಗಳು ಈ ವಿಚಾರವಾಗಿ ಪ್ರಧಾನಿ ಮೌನವನ್ನು ಪ್ರಶ್ನಿಸಿದ್ದವು. ಈಗ ಪ್ರಧಾನಿ ಅವರೇ ನೇರವಾಗಿ ಮಧ್ಯಪ್ರವೇಶಿಸಿ ಫಾಸ್ಟ್ ಟ್ರ್ಯಾಕ್ ಕೋರ್ಟ್ ಘೋಷಣೆ ಮಾಡಿರುವುದು ವಿದ್ಯಾರ್ಥಿ ಸಮೂಹಕ್ಕೆ ಸಮಾಧಾನ ತಂದಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನೀಟ್ ವಿವಾದ: ಪ್ರತಿಭಟನಾಕಾರರ ಜತೆ ಮಾತನಾಡಲು ಇಷ್ಟು ವಿಳಂಬವೇಕೆ? ಕೇಂದ್ರದ ವಿರುದ್ಧ ಸಿಡಿದೆದ್ದ ಕೆ.ಅಣ್ಣಾಮಲೈ
ರಾಷ್ಟ್ರೀಯ ಹೆದ್ದಾರಿಗಳ ಮೃತ್ಯುಪಾಶ: 3 ವರ್ಷಗಳಲ್ಲಿ 37 ಸಾವಿರಕ್ಕೂ ಹೆಚ್ಚು ಜನರ ಬಲಿ; ಕರ್ನಾಟಕಕ್ಕೆ 3ನೇ ಸ್ಥಾನ!